Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೇಂದ್ರ ಸರಕಾರದಿಂದ ಬೆಂಗಳೂರು...

ಕೇಂದ್ರ ಸರಕಾರದಿಂದ ಬೆಂಗಳೂರು ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂ. ಅನುದಾನ

ವಾರ್ತಾಭಾರತಿವಾರ್ತಾಭಾರತಿ18 Feb 2024 7:09 PM IST
share
ಕೇಂದ್ರ ಸರಕಾರದಿಂದ ಬೆಂಗಳೂರು ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂ. ಅನುದಾನ

ಬೆಂಗಳೂರು: ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಉಚ್ಚತರ್ ಶಿಕ್ಷಾ ಅಭಿಯಾನದ ಅಡಿಯಲ್ಲಿ ಬಹು ಶಾಸ್ತ್ರಿಯ ಸಂಶೋಧನಾ ವಿಶ್ವವಿದ್ಯಾಲಯ ಯೋಜನೆಯ ಅಡಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿದೆ.

ದೇಶದ 1,472 ವಿಶ್ವವಿದ್ಯಾಲಯಗಳಲ್ಲಿ ಕೇವಲ 26 ವಿಶ್ವವಿದ್ಯಾಲಯಗಳು ಮಾತ್ರ ಪಿ.ಎಂ- ಷಾ ಬಹು ಶಾಸ್ತ್ರಿಯ ಸಂಶೋಧನಾ ವಿಶ್ವವಿದ್ಯಾಲಯ ಯೋಜನೆಯ ಮಾನದಂಡದ ಅಡಿಯಲ್ಲಿ ಸ್ಥಾನ ಪಡೆದಿದ್ದವು, ಅದರಲ್ಲಿ ಬೆಂಗಳೂರು ವಿಶ್ವವಿದ್ಯಾಲಯವೂ ಒಂದಾಗಿದೆ.

ಪಿ.ಎಂ- ಉಷಾ ಯೋಜನೆಯ ಎಲ್ಲ ಮಾನದಂಡಗಳಲ್ಲಿ ಶ್ರೇಷ್ಟ ಸಾಧನೆ ಮಾಡಿ ವಿವಿ ಅನುದಾನ ಪಡೆದುಕೊಂಡಿದೆ. ಇದು ಬೆಂಗಳೂರು ವಿಶ್ವವಿದ್ಯಾಲಯದ ಸಾಧನೆಯ ಪ್ರತೀಕವಾಗಿದೆ. ಶಿಕ್ಷಣ, ಅಧ್ಯಯನ ಹಾಗೂ ಸಂಶೋಧನೆಗೆ ನಿರಂತರ ಆದ್ಯತೆ ನೀಡಿದ್ದ ವಿಶ್ವವಿದ್ಯಾಲಯಕ್ಕೆ ಈ ಯೋಜನೆಯ ಮೂಲಕ ಮತ್ತಷ್ಟು ಬಲ ಬಂದಿದೆ. 100 ಕೋಟಿ ರೂಪಾಯಿ ಅನುದಾನವನ್ನು ವಿದ್ಯಾರ್ಥಿಗಳ ಶೈಕ್ಷಣಿಕ ಏಳಿಗೆಗೆ, ಸಂಶೋಧನೆ ಮತ್ತು ಅಭಿವೃದ್ಧಿಗೆ ಸಮರ್ಪಕವಾಗಿ ಬಳಸುತ್ತೇವೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್. ಎಂ ಜಯಕರ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಅನುದಾನದಲ್ಲಿ 50 ಕೋಟಿ ರೂ. ಅನ್ನು ಪ್ರಸ್ತಾವಿತ ಹೊಸ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‍ಗಳ ಶೈಕ್ಷಣಿಕ ಕಟ್ಟಡಗಳು, ಆಂಫಿಥಿಯೇಟರ್ ಮತ್ತು ಹಾಸ್ಟೆಲ್‍ಗಳನ್ನು ನಿರ್ಮಿಸಲು ಮೀಸಲಿಡಲಿದ್ದೇವೆ. 30 ಕೋಟಿ ರೂ.ಅನ್ನು ಕ್ಯಾಂಪಸ್ ನೆಟ್ವರ್ಕಿಂಗ್ ಉನ್ನತೀಕರಣ, ಕ್ರೀಡಾ ಸೌಲಭ್ಯಗಳ ಹೆಚ್ಚಳ, ಸ್ಮಾರ್ಟ್ ಕ್ಲಾಸ್, ಆರೋಗ್ಯ ಕೇಂದ್ರದ ಉನ್ನತೀಕರಣ, ಮ್ಯೂಸಿಯಂ ಸಂಪನ್ಮೂಲಗಳ ಡಿಜಿಟಲೀಕರಣ, ಪರಿಸರ ಸಂರಕ್ಷಣೆ ಮತ್ತು ಹಸಿರು ಕ್ಯಾಂಪಸ್ ಮಾಡಲು ಬಳಸಲಿದ್ದೇವೆ, ಜೊತೆಗೆ ಡಿಕಾರ್ಬೊನೈಸೇಶನ್ ಚಟುವಟಿಕೆಗಳನ್ನೂ ಕೈಗೊಳ್ಳಲಿದ್ದೇವೆ. ಇನ್ನುಳಿದ 20 ಕೋಟಿ ರೂ.ಅನ್ನು ಸುಧಾರಿತ ವೈಜ್ಞಾನಿಕ ಉಪಕರಣಗಳ ಖರೀದಿ ಮತ್ತು ವಿವಿಧ ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮಗಳಿಗೆ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ವಿಶ್ವವಿದ್ಯಾನಿಲಯವು ಮುಂಬರುವ ವರ್ಷಗಳಲ್ಲಿ ಸರಕಾರದ ಆರ್ಥಿಕ ಬೆಂಬಲವನ್ನು ಬಳಸಿಕೊಂಡು ಉತ್ಕೃಷ್ಟತೆಯ ಕೇಂದ್ರವಾಗಿ ಹೊರಹೊಮ್ಮಲಿದೆ. ಇದರಿಂದಾಗಿ ಉನ್ನತ ಶಿಕ್ಷಣಕ್ಕೆ ದಾಖಲಾತಿ ಹೆಚ್ಚಳ, ಸಾಮಾಜಿಕ ನ್ಯಾಯ, ಅತ್ಯಾಧುನಿಕ ಸಂಶೋಧನೆ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ವಿದ್ಯಾರ್ಥಿ ವಿನಿಮಯ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದೆ ಎಂದು ಡಾ. ಎಸ್. ಎಂ ಜಯಕರ ಮಾಹಿತಿ ನೀಡಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯ ದೇಶಕ್ಕೆ ಮಾತ್ರ ಸೀಮಿತವಾಗದೆ ವಿಶ್ವದರ್ಜೆಯ ಮಾನ್ಯತೆಯನ್ನು ಪಡೆದಿದೆ. ಈ ಅನುದಾನದ ಮೂಲಕ ವಿವಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಪೂರಕವಾಗಲಿದೆ. ಗುಣಮಟ್ಟದ ಶಿಕ್ಷಣ, ಮೂಲಸೌಕರ್ಯ, ಸಂಶೋಧನೆಗೆ ಪೂರಕ ವಾತವರಣ ನಿರ್ಮಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ವಿವಿಯ ಕುಲಸಚಿವ ಶೇಕ್ ಲತೀಫ್ ತಿಳಿಸಿದ್ದಾರೆ.

Tags

Bangalore University
share
ವಾರ್ತಾಭಾರತಿ
ವಾರ್ತಾಭಾರತಿ
Next Story
X