Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. 12,936 ಕೋಟಿ ರೂ.ಮೌಲ್ಯದ ಮೂಲಸೌಕರ್ಯ...

12,936 ಕೋಟಿ ರೂ.ಮೌಲ್ಯದ ಮೂಲಸೌಕರ್ಯ ಯೋಜನೆಗಳನ್ನು ಪರಿಶೀಲಿಸಿದ ಎಕಗವಾಕ್ಷಿ ಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ30 July 2026 1:31 AM IST
share
12,936 ಕೋಟಿ ರೂ.ಮೌಲ್ಯದ ಮೂಲಸೌಕರ್ಯ ಯೋಜನೆಗಳನ್ನು ಪರಿಶೀಲಿಸಿದ ಎಕಗವಾಕ್ಷಿ ಸಂಸ್ಥೆ

ಬೆಂಗಳೂರು : ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಾರ್ವಜನಿಕ-ಖಾಸಗಿ ಸಹಭಾಗಿತ್ವ(ಪಿಪಿಪಿ) ಯೋಜನೆಗಳ ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿ (ಎಸ್‍ಎಲ್‍ಎಸ್‍ಡಬ್ಲ್ಯುಎ) ಸಭೆಯಲ್ಲಿ ಒಟ್ಟು ಅಂದಾಜು 12,936.86ಕೋಟಿ ರೂ.ವೆಚ್ಚದ ಏಳು ಪ್ರಮುಖ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಪರಿಗಣಿಸಲಾಯಿತು.

ಈ ಯೋಜನೆಗಳು ಪ್ರವಾಸೋದ್ಯಮ, ಆತಿಥ್ಯ, ಜಲ ಸಾರಿಗೆ, ಮೂಲಸೌಕರ್ಯ, ತೋಟಗಾರಿಕೆ, ಚಲನಚಿತ್ರ ಹಾಗೂ ನಗರ ಸಾರಿಗೆ ಕ್ಷೇತ್ರಗಳನ್ನು ಒಳಗೊಂಡಿದ್ದು, ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಅಭಿವೃದ್ಧಿಪಡಿಸುವುದಾಗಿ ಪ್ರಸ್ತಾಪಿಸಲಾಗಿದೆ.

ರಾಜ್ಯ ಸರಕಾರವು ಪಿಪಿಪಿ ಯೋಜನೆಗಳಿಗಾಗಿ ರೂಪಿಸಿರುವ ಸಾಂಸ್ಥಿಕ ವ್ಯವಸ್ಥೆಯಡಿ, 500 ಕೋಟಿ ರೂ.ವರೆಗಿನ ಯೋಜನೆಗಳನ್ನು ಪರಿಶೀಲಿಸಿ ಅನುಮೋದಿಸುವ ಅಧಿಕಾರ ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿಗಿದೆ. 500 ಕೋಟಿ ರೂ.ಗಿಂತ ಹೆಚ್ಚಿನ ವೆಚ್ಚದ ಯೋಜನೆಗಳನ್ನು ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿ ಪರಿಶೀಲಿಸಿ, ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿರುವ ರಾಜ್ಯ ಉನ್ನತ ಮಟ್ಟದ ಅನುಮೋದನಾ ಸಮಿತಿಗೆ ಪರಿಗಣನೆ ಮತ್ತು ಅನುಮೋದನೆಗಾಗಿ ಶಿಫಾರಸು ಮಾಡುತ್ತದೆ.

ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿಯ ನಿರ್ಧಾರಗಳು: 500 ಕೋಟಿ ರೂ.ವರೆಗಿನ ಅಂದಾಜು ವೆಚ್ಚ ಹೊಂದಿರುವ ನಾಲ್ಕು ಯೋಜನೆಗಳಿಗೆ ಅನುಮೋದನೆ ನೀಡಿದೆ. ಈ ಯೋಜನೆಗಳ ಒಟ್ಟು ಅಂದಾಜು ವೆಚ್ಚ 285.43 ಕೋಟಿ ರೂ.ಆಗಿದೆ.

ಮಂಗಳೂರಿನಲ್ಲಿ ಲೈಟ್ ಹೌಸ್ ಪ್ರವಾಸೋದ್ಯಮ ಮತ್ತು ಆತಿಥ್ಯ ಮೂಲಸೌಕರ್ಯ ಅಭಿವೃದ್ಧಿ-60 ಕೋಟಿ ರೂ.ಗಳು.

ಗುರುಪುರ ನದಿ ದ್ವೀಪಗಳು-ಉತ್ತರ ಭಾಗ-59.14 ಕೋಟಿ ರೂ,, ಗುರುಪುರ ನದಿ ದ್ವೀಪಗಳು-ದಕ್ಷಿಣ ಭಾಗ-66.29 ಕೋಟಿ ರೂ., ಊಟಿಯ ಫರ್ನ್ ಹಿಲ್‍ನಲ್ಲಿರುವ ಕರ್ನಾಟಕ ಸಿರಿ ತೋಟಗಾರಿಕಾ ಉದ್ಯಾನದಲ್ಲಿ ಸಂದರ್ಶಕರ ಸೌಲಭ್ಯಗಳ ಅಭಿವೃದ್ಧಿ-100 ಕೋಟಿ ರೂ.ಗಳ ವೆಚ್ಚದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅನುಷ್ಠಾನಗೊಳ್ಳಲಿವೆ.

500 ಕೋಟಿ ರೂ.ಗಿಂತ ಹೆಚ್ಚಿನ ವೆಚ್ಚದ ಕೆಳಕಂಡ ಮೂರು ಯೋಜನೆಗಳನ್ನು ಈ ಸಮಿತಿಯು ಪರಿಶೀಲಿಸಿ, ಮುಖ್ಯಮಂತ್ರಿ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಪರಿಗಣನೆ ಮತ್ತು ಅನುಮೋದನೆಗಾಗಿ ಶಿಫಾರಸು ಮಾಡಿದೆ. ಈ ಮೂರು ಯೋಜನೆಗಳ ಒಟ್ಟು ಅಂದಾಜು ಹೂಡಿಕೆ 12,651.43 ಕೋಟಿ ರೂ.ಆಗಿದೆ.

ಮೈಸೂರಿನಲ್ಲಿ ಅಂತರ್‍ರಾಷ್ಟ್ರೀಯ ಚಲನಚಿತ್ರ ನಗರಿ ಅಭಿವೃದ್ಧಿ-729.43 ಕೋಟಿ ರೂ., ಉತ್ತರ ಕನ್ನಡ ಜಿಲ್ಲೆಯ ಮಾಂಕಿ ಬಂದರಿನಲ್ಲಿ ಬಹುಉದ್ದೇಶ ಬಂದರು ಮತ್ತು ಹಡಗು ನಿರ್ಮಾಣ ಘಟಕದ ಅಭಿವೃದ್ಧಿ-6,925 ಕೋಟಿ ರೂ., ಬೆಂಗಳೂರು ಮೆಜೆಸ್ಟಿಕ್ ಬಸ್ ನಿಲ್ದಾಣದ ಪುನರ್ ಅಭಿವೃದ್ಧಿ-4,997 ಕೋಟಿ ರೂ.ಗಳು.

ಪ್ರಸ್ತಾವಿತ ಪಿಪಿಪಿ ಯೋಜನೆಗಳು ಆಧುನಿಕ ಸಾರ್ವಜನಿಕ ಮೂಲಸೌಕರ್ಯ ನಿರ್ಮಾಣ, ಖಾಸಗಿ ವಲಯದ ಹೂಡಿಕೆ ಆಕರ್ಷಣೆ, ಪ್ರವಾಸೋದ್ಯಮ ಮತ್ತು ನಗರ ಸೇವೆಗಳ ಸುಧಾರಣೆ, ಕರ್ನಾಟಕದ ಸಾಗರ ಮತ್ತು ಲಾಜಿಸ್ಟಿಕ್ಸ್ ಸಾಮಥ್ರ್ಯ ಬಲವರ್ಧನೆ ಹಾಗೂ ರಾಜ್ಯಾದ್ಯಂತ ನೇರ ಮತ್ತು ಪರೋಕ್ಷ ಉದ್ಯೋಗಾವಕಾಶಗಳ ಸೃಷ್ಟಿಗೆ ನೆರವಾಗಲಿವೆ.

ಸಭೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಸರಕಾರದ ಕಾರ್ಯದರ್ಶಿ ಡಾ.ಆರ್.ವಿಶಾಲ್, ಪಿಪಿಪಿ ಕೋಶದ ನಿರ್ದೇಶಕ ಪುರುಷೋತ್ತಮ ಸಿಂಗ್ ಸೇರಿದಂತೆ ಸರಕಾರದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X