Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎ.14ರೊಳಗೆ ‘ರೋಹಿತ್ ಕಾಯ್ದೆ’ ಜಾರಿ...

ಎ.14ರೊಳಗೆ ‘ರೋಹಿತ್ ಕಾಯ್ದೆ’ ಜಾರಿ ಕುರಿತು ಘೋಷಣೆ ಮಾಡಿ : ಜನಾಂದೋಲನ ಸಂಘಟನೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ1 April 2025 6:49 PM IST
share
ಎ.14ರೊಳಗೆ ‘ರೋಹಿತ್ ಕಾಯ್ದೆ’ ಜಾರಿ ಕುರಿತು ಘೋಷಣೆ ಮಾಡಿ : ಜನಾಂದೋಲನ ಸಂಘಟನೆ ಒತ್ತಾಯ

ಬೆಂಗಳೂರು : ಜಾತಿ ತಾರತಮ್ಯ ತಡೆಯಲು ರಾಜ್ಯ ಸರಕಾರ ಎ.14ರೊಳಗೆ ‘ರೋಹಿತ್ ಕಾಯ್ದೆ’ ಜಾರಿ ಕುರಿತು ಘೋಷಣೆ ಮಾಡಬೇಕು. ಇಲ್ಲದಿದ್ದರೆ, ಕಾಯ್ದೆಯ ಜಾರಿಗೆ ಒತ್ತಾಯಿಸಿ ರಾಜ್ಯಾದ್ಯಂತ ಎಲ್ಲ ವಿದ್ಯಾರ್ಥಿ ಸಂಘಟನೆಗಳ ಜೊತೆಗೂಡಿ ಜನಾಂದೋಲನ ನಡೆಸಲಾಗುವುದು ಎಂದು ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ ಸಂಘಟನೆ’ಯ ಮುಖಂಡರು ಆಗ್ರಹಿಸಿದ್ದಾರೆ.

ಮಂಗಳವಾರ ನಗರದ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ದಸಂಸ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ದಲಿತ ಚಳವಳಿಯ ನಾಯಕ ಬಸವರಾಜ್ ಕೌತಾಳ್, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್ ಬೆಂಕಿಕೆರೆ, ಎಐಎಸ್‍ಎ ಲೇಖಾ, ಮಾನವ ಹಕ್ಕುಗಳ ಹೋರಾಟಗಾರ್ತಿ ಡಾ.ಕೆ.ಪಿ.ಅಶ್ವಿನಿ, ಮುಖಂಡರಾದ ನಂದಕುಮಾರ್, ವೆಂಕಟೇಶ್, ಆಶ್ನಾ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಡಾ.ಕೆ.ಪಿ.ಅಶ್ವಿನಿ ಮಾತನಾಡಿ, 2021ರಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಲೋಕಸಭಾ ಸದಸ್ಯರಿಗೆ 2014-2021ರ ಅವಧಿಯಲ್ಲಿ ಐಐಟಿ, ಐಐಎಂ, ಎನ್‍ಐಟಿ ಮತ್ತು ಇತರ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ 122 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿರುವುದು ಕಳವಳಕಾರಿಯಾದ ವಿಷಯವಾಗಿದೆ. ಈ ಆತ್ಮಹತ್ಯೆಗೈದ 122 ಜನರಲ್ಲಿ 68 ವಿದ್ಯಾರ್ಥಿಗಳು ಎಸ್ಸಿ, ಎಸ್ಟಿ, ಒಬಿಸಿ ವರ್ಗಗಳಿಗೆ ಸೇರಿದವರಾಗಿದ್ದಾರೆ. ಜೊತೆಗೆ ಈ ಸಮಾನತೆಯ ನಿರಾಕರಣೆಯಿಂದ ಪ್ರತಿ ವರ್ಷ ಸಾವಿರಾರು ದಲಿತ ಬಹುಜನರು ಉನ್ನತ ಶಿಕ್ಷಣ ಸೇರಿದ ನಂತರ ಡ್ರಾಪ್ ಔಟ್ ಆಗುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

2023ರ ಡಿಸೆಂಬರ್‌ನಲ್ಲಿ ಸರಕಾರ ಸಂಸತ್ತಿನಲ್ಲಿ ನೀಡಿದ ಅಂಕಿ-ಅಂಶಗಳ ಪ್ರಕಾರ, ಕೇವಲ ಕೇಂದ್ರೀಯ ವಿವಿಗಳಿಂದಲೇ, 2018-2023ರ ಮಧ್ಯೆ 13 ಸಾವಿರಕ್ಕೂ ಹೆಚ್ಚು ಎಸ್ಸಿ, ಎಸ್ಟಿ, ಒಬಿಸಿ ಸಮುದಾಯದ ವಿಧಾರ್ಥಿಗಳು ಡ್ರಾಪ್ ಔಟ್ ಆಗಿದ್ದಾರೆ. ಜೊತೆಗೆ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಜಾತಿ ತಾರತಮ್ಯ ದಿನನಿತ್ಯ ಎದುರಿಸುವ ಹಿಂಸೆಯಾಗಿದೆ. ಇಂದು ಕರ್ನಾಟಕದಲ್ಲಿ ಸಾಮಾನ ಶಿಕ್ಷಣಕ್ಕೆ ‘ಜಾತಿ’ ಅಡ್ಡಿಯಾಗಿದೆ. ಸರಕಾರ ಸಾರ್ವಜನಿಕ ಶಿಕ್ಷಣಕ್ಕಾಗಿ ನೀಡುತ್ತಿರುವ ಅನುದಾನ ಸಾಲುತ್ತಿಲ್ಲ. ಶಿಕ್ಷಣದ ಖಾಸಗೀಕರಣ ವೇಗವಾಗಿ ಮುಂದುವರಿಯುತ್ತಿದೆ. ಇದರ ಜೊತೆಗೆ ಎನ್‍ಇಪಿ, ಸಿಯುಇಟಿ, ಎನ್‍ಇಇಟಿ ನಂತಹ ನೀತಿಗಳಿಂದ ಶಿಕ್ಷಣದ ಕೇಂದ್ರೀಕರಣವಾಗುತ್ತಿದೆ ಎಂದು ಅಶ್ವಿನಿ ವಿವರಿಸಿದರು.

ದಸಂಸ ಮುಖಂಡ ಮಾವಳ್ಳಿ ಶಂಕರ್ ಮಾತನಾಡಿ, ರೋಹಿತ್ ವೇಮುಲ ತಾಯಿ ಹಾಗೂ ಪಾಯಲ್ ತದ್ವಿ ತಾಯಿ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಸರಕಾರ ಉತ್ತಮ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ತಾರತಮ್ಯವನ್ನು ತಡೆಯಲು ಯು.ಜಿ.ಸಿ ನಿಯಮಗಳೇನೋ ಇವೆ. ಆದರೆ, ಅವು ಸಂಪೂರ್ಣವಾಗಿ ಜಾರಿಯಾಗದೇ ತಾರತಮ್ಯವನ್ನು ಮತ್ತು ದಲಿತ ಬಹುಜನ ವಿದ್ಯಾರ್ಥಿಗಳು ಶಿಕ್ಷಣ ತೊರೆಯುವುದನ್ನು ತಡೆದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು ಎಂದು ಹೇಳಿದರು.

ಜಾತಿ ತಾರತಮ್ಯ ತಡೆಯಲು ಇರುವ ಕಾಯ್ದೆ ಎಂದರೆ ಜಾತಿ ದೌರ್ಜನ್ಯ ತಡೆ ಕಾಯ್ದೆ. ಈ ದೌರ್ಜನ್ಯ ತಡೆ ಕಾಯ್ದೆಯು ಹಲ್ಲೆ, ಜಾತಿ ನಿಂದನೆ, ಲೈಂಗಿಕ ಅತ್ಯಾಚಾರದಂತಹ ಕ್ರಿಮಿನಲ್ ಆಚರಣೆಗಳಿಗೆ ಸೂಕ್ತವಾಗಿದೆ. ಆದರೆ ಕಾಲೇಜು ಮಟ್ಟದಲ್ಲಿ ನಡೆಯುವ ತಾರತಮ್ಯವನ್ನು ಈ ಕಾಯ್ದೆಯಡಿ ಪರಿಹರಿಸಲು ಸೂಕ್ತವಾಗಿರುವುದಿಲ್ಲ ಹಾಗೂ ಈ ಕಾಯ್ದೆಯಲ್ಲಿ ಉನ್ನತ ಶಿಕ್ಷಣ ಕ್ಷೇತ್ರವನ್ನು ಶೋಷಿತ ಸಮುದಾಯದ ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ಸೃಷ್ಟಿಸಲು ಸಾಧ್ಯವಿಲ್ಲ ಎಂದು ಮಾವಳ್ಳಿ ಶಂಕರ್ ಅಭಿಪ್ರಾಯಪಟ್ಟರು.

ಕೆವಿಎಸ್ ನಾಯಕ ಸರೋವರ್ ಬೆಂಕಿಕೆರೆ ಮಾತನಾಡಿ, ಈಗಿರುವ ನಿಯಮಗಳು ಹಾಗೂ ಕಾನೂನುಗಳು ದಲಿತ ಬಹುಜನ ವಿದ್ಯಾರ್ಥಿಗಳಿಗೆ ಘನತೆ, ಸಮಾನ ಅವಕಾಶ, ಸ್ಥಾನಮಾನ ಖಾತ್ರಿಪಡಿಸಲು ವಿಫಲವಾದ ಕಾರಣ ಇಂದು ರೋಹಿತ್ ಕಾಯ್ದೆ ಅಗತ್ಯವಾಗಿದೆ. ರೋಹಿತ್ ಕಾಯ್ದೆ ಜಾರಿಯಾಗುವಂತೆ, ಸಾರ್ವಜನಿಕ ವಿಶ್ವಾವಿದ್ಯಾನಿಲಯಗಳಲ್ಲಿ ಉತ್ತಮ, ಗುಣಮಟ್ಟ ಶಿಕ್ಷಣ ನೀಡುವಂತೆ ಹಾಗೂ ಖಾಸಗಿ ವಿಶ್ವವಿದ್ಯಾನಿಲಯಗಳ ನಿಯಂತ್ರಣ ಆಗುವಂತೆ ಒತ್ತಾಯಿಸಲು ರಾಜ್ಯ ಮಟ್ಟದ ಆಂದೋಲನ ಕೈಗೊಳ್ಳುತ್ತೇವೆ. ರಾಜ್ಯದ ಯುವಜನರು ನಮ್ಮೊಂದಿಗೆ ಕೈಜೋಡಿಸುವಂತೆ ವಿನಂತಿಸುತ್ತೇವೆ. ಜಾತಿ ರಹಿತ ಕರ್ನಾಟಕವನ್ನು ಕಟ್ಟುವುದೇ ನಮ್ಮ ಅಂತಿಮ ಗುರಿ ಎಂದು ಹೇಳಿದರು.

ಎಐಎಸ್‍ಎ ಲೇಖಾ ಮಾತನಾಡಿ, ಅಂಬೇಡ್ಕರ್ ಜಯಂತಿಯೊಳಗೆ ರಾಜ್ಯ ಸರಕಾರ ರೋಹಿತ್ ಕಾಯ್ದೆ ಜಾರಿ ಮಾಡಲು ಅಗತ್ಯ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಬೇಕು. ಕಾಯ್ದೆ ಜಾರಿ ಮಾಡಲು ದಲಿತ-ವಿಧಾರ್ಥಿ ಸಂಘಟನೆಗಳ ಪ್ರತಿನಿಧಿಗಳಿರುವ ಸಮಿತಿ ರಚನೆಯಾಗಬೇಕು. ಕರ್ನಾಟಕದ ಉನ್ನತ ಶಿಕ್ಷಣ ಕ್ಷೇತ್ರವು ತಾರತಮ್ಯ ರಹಿತವಾಗುವಂತೆ, ಎಲ್ಲರಿಗೂ ಸಮಾನ ಅವಕಾಶ ಸಿಗುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಜಾತಿ ವಿನಾಶವೇ ನಮ್ಮ ಅಂತಿಮ ಗುರಿ, ಅದಕ್ಕೆ ಸೂಕ್ತ ಕ್ರಮವನ್ನು ಸರಕಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X