Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜನರ ಪ್ರಜ್ಞೆಯನ್ನು ರೂಪಿಸಲು ಅಂಬೇಡ್ಕರ್...

ಜನರ ಪ್ರಜ್ಞೆಯನ್ನು ರೂಪಿಸಲು ಅಂಬೇಡ್ಕರ್ ಜಗತ್ತು ಸಹಾಯಕ : ರಹಮತ್ ತರೀಕೆರೆ

ವಾರ್ತಾಭಾರತಿವಾರ್ತಾಭಾರತಿ13 April 2024 10:43 PM IST
share
ಜನರ ಪ್ರಜ್ಞೆಯನ್ನು ರೂಪಿಸಲು ಅಂಬೇಡ್ಕರ್ ಜಗತ್ತು ಸಹಾಯಕ : ರಹಮತ್ ತರೀಕೆರೆ

ಬೆಂಗಳೂರು: ‘ಅಂಬೇಡ್ಕರ್ ಜಗತ್ತು’ ಪುಸ್ತಕ ಮೂಲ ಆಶಯದೊಂದಿಗೆ ಅನುವಾದ ಮಾಡಲಾಗಿದ್ದು, ನಾಡಿನ ಜನರ ಪ್ರಜ್ಞೆಯನ್ನು ರೂಪಿಸಲು ಸಹಾಯಕವಾಗುತ್ತದೆ ಎಂದು ಚಿಂತಕ ಡಾ.ರಹಮತ್ ತರೀಕೆರೆ ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ನಗರದ ಬೀಟೆಲ್ ಪುಸ್ತಕ ಮಳಿಗೆಯಲ್ಲಿ ಆಯೊಜಿಸಲಾಗಿದ್ದ ಜೀರುಂಡೆ ಪ್ರಕಾಶನದ ಮೊದಲ ಪುಸ್ತಕ ‘ಅಂಬೇಡ್ಕರ್ ಜಗತ್ತು’ ಕುರಿತು ಸಂವಾದ ಮತ್ತು 2ನೇ ಮುದ್ರಣದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡದಲ್ಲಿ ಅಂಬೇಡ್ಕರ್ ಕುರಿತು ಆರಾಧನ ಮತ್ತು ನಿರಾಕರಣೆ ಮಾಡುವ ಪುಸ್ತಕಗಳು ಹೆಚ್ಚಿವೆ. ಆದರೆ ಅಂಬೇಡ್ಕರ್ ಜಗತ್ತು ವಸ್ತುನಿಷ್ಠವಾಗಿ ಯಾವುದೇ ಭಾವಾವೇಶವಿಲ್ಲದೆ ಮುಖಾಮುಖಿಯಾಗಿದೆ ಎಂದು ತಿಳಿಸಿದರು.

ಪತ್ರಕರ್ತ ಇಂಧೂದರ ಹೊನ್ನಾಪುರ ಮಾತನಾಡಿ, ನಾವು ದುರಿತ ಕಾಲದಲ್ಲಿ ಇರುವುದರಿಂದ ತಪ್ಪಿತಸ್ತರು ಯಾರು ಎನ್ನುವ ಪ್ರಶ್ನೆ ಎದುರಾಗಿದೆ. ಆಳುವ ವರ್ಗವನ್ನು ಸದಾ ದೂಷಿಸುತ್ತೇವೆ. ಆದರೆ ನಮ್ಮ ಕೆಲಸವನ್ನು ಸರಿಯಾಗಿ ನಿರ್ವಹಿಸಬೇಕಿದೆ. ಬಾಬಾ ಸಾಹೇಬ ಅಂಬೇಡ್ಕರ್ ರನ್ನು ಭಾವನಾತ್ಮಕವಾಗಿ ನೋಡುವಲ್ಲಿ ನಮ್ಮ ಶಕ್ತಿಯನ್ನು ಕುಂದಿಸುತ್ತಿದ್ದೇವೆ. ಆದರೆ ಅವರ ಹಾದಿಯಲ್ಲಿ ನಡೆಯುವಲ್ಲಿ ಸೊಲುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

ಚಿಂತಕ ಶ್ರೀಪಾದ ಭಟ್ ಮಾತನಾಡಿ, ಯಾಕೆ ಶೋಷಣೆ ನಡೆಯುತ್ತಿದೆ. ಹೇಗೆ ನಡೆಯುತ್ತಿದೆ ಎನ್ನುವುದು ಅಂಬೇಡ್ಕರ್ ಅವರ ಪ್ರಶ್ನೆಯಾಗಿತ್ತು. ಜಾತಿ ದೌರ್ಜನ್ಯ ಗೋಚರ ಮತ್ತು ಅಗೋಚರ ಎರಡೂ ರೀತಿಯಲ್ಲಿ ಇರುತ್ತದೆ. ಅಂಬೇಡ್ಕರ್ ಜಗತ್ತು ಪುಸ್ತಕವನ್ನು ಕಾಲಘಟ್ಟಕ್ಕೆ ತಕ್ಕ ಹಾಗೆ ವಿಸ್ತರಿಸಿಕೊಂಡು ಓದಬೇಕು ಎಂದು ಹೇಳಿದರು.

ಇದೇ ವೇಳೆ ಮೇಘನಾ ಹೋರಾಟದ ಗೀತೆಗಳನ್ನು ಹಾಡಿದರು. ಹೋರಾಟಗಾರ ಹುಲಿಕುಂಟೆ ಮೂರ್ತಿ, ಅಶ್ವಿನಿ ಓಬುಳೇಶ್, ಲೇಖಕ ವಿಕಾಸ್.ಆರ್.ಮೌರ್ಯಮ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X