Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜಿಂದಾಲ್‌ಗೆ ಕಡಿಮೆ ಬೆಲೆಯಲ್ಲಿ ಭೂಮಿ...

ಜಿಂದಾಲ್‌ಗೆ ಕಡಿಮೆ ಬೆಲೆಯಲ್ಲಿ ಭೂಮಿ ನೀಡುತ್ತಿರುವ ಸರಕಾರದ ತೀರ್ಮಾನದ ಹಿಂದೆ ದೊಡ್ಡ ಹಗರಣ ಅಡಗಿದೆ : ಅರವಿಂದ ಬೆಲ್ಲದ್

ವಾರ್ತಾಭಾರತಿವಾರ್ತಾಭಾರತಿ24 Aug 2024 9:56 PM IST
share
ಜಿಂದಾಲ್‌ಗೆ ಕಡಿಮೆ ಬೆಲೆಯಲ್ಲಿ ಭೂಮಿ ನೀಡುತ್ತಿರುವ ಸರಕಾರದ ತೀರ್ಮಾನದ ಹಿಂದೆ ದೊಡ್ಡ ಹಗರಣ ಅಡಗಿದೆ : ಅರವಿಂದ ಬೆಲ್ಲದ್

ಬೆಂಗಳೂರು : ಜಿಂದಾಲ್ ಕಂಪೆನಿಗೆ ಕಡಿಮೆ ಬೆಲೆಯಲ್ಲಿ ಸಾವಿರಾರು ಎಕರೆ ಖನಿಜಯುಕ್ತ ಭೂಮಿಯನ್ನು ನೀಡುತ್ತಿರುವ ಸರಕಾರದ ತೀರ್ಮಾನದ ಹಿಂದೆ ದೊಡ್ಡ ಹಗರಣ ಅಡಗಿದೆ ಎಂದು ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ್ ಆರೋಪಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಂದಾಲ್ ಕಂಪೆನಿ ಜೊತೆ ಏನು ಒಳ ಒಪ್ಪಂದ ಆಗಿದೆ? ಸರಕಾರದ ನೂರಾರು ಕೋಟಿ ರೂಪಾಯಿ ಬೆಲೆ ಬಾಳುವ ಆಸ್ತಿಯನ್ನು ಕೇವಲ 20 ಕೋಟಿ ರೂ.ಗೆ ಜಿಂದಾಲ್ ಕಂಪೆನಿಗೆ ಕೊಡುತ್ತಿದ್ದಾರೆ. ಇದರ ಹಿಂದೆ ಬಹಳ ದೊಡ್ಡ ಗೋಲ್‍ಮಾಲ್ ಇದೆ ಎಂದು ಆರೋಪಿಸಿದರು.

ಜಿಂದಾಲ್ ಕಂಪೆನಿಯ ಈ ಭೂಮಿ 1970-71ರಲ್ಲಿ ಕೇಂದ್ರ ಸರಕಾರ ತೆಗೆದುಕೊಂಡ ಭೂಮಿ. ಆಗ ವಿಜಯನಗರ ಸ್ಟೀಲ್ ಲಿಮಿಟೆಡ್ ಕಂಪೆನಿಗೆ ಕೇಂದ್ರ ಸರಕಾರದಿಂದ ಸ್ಟೀಲ್ ಕಂಪೆನಿ ಮಾಡುವ ಉದ್ದೇಶದಿಂದ ಈ ಭೂಮಿ ತೆಗೆದುಕೊಳ್ಳಲಾಗಿತ್ತು ಎಂದು ಅವರು ಹೇಳಿದರು.

ದೇಶದಲ್ಲಿ ಖಾಸಗೀಕರಣದ ಸಂದರ್ಭದಲ್ಲಿ ಈ ಭೂಮಿಯನ್ನು ಕೇಂದ್ರ ಸರಕಾರವು ಕರ್ನಾಟಕ ಸರಕಾರಕ್ಕೆ ಕೊಟ್ಟಿತ್ತು. ಕರ್ನಾಟಕ ಸರಕಾರಕ್ಕೆ ಅತ್ಯಂತ ಕಡಿಮೆ ದರದಲ್ಲಿ ಅಂದರೆ 13 ಕೋಟಿ ರೂ. ಮೊತ್ತಕ್ಕೆ 9,600 ಎಕರೆ ಭೂಮಿಯನ್ನು ಕೇಂದ್ರ ಸರಕಾರ ಕೊಟ್ಟಿತ್ತು. ರಾಜ್ಯ ಸರಕಾರವು ಜೆಎಸ್‍ಡಬ್ಲ್ಯೂ ಸ್ಟೀಲ್ ಸಂಸ್ಥೆ(ಜಿಂದಾಲ್)ಗೆ ಸ್ಟೀಲ್ ಪ್ಲಾಂಟ್ ಮಾಡಲು 2006ರಲ್ಲಿ 2 ಸಾವಿರ ಎಕರೆ, 2007ರಲ್ಲಿ ಸುಮಾರು 1700 ಎಕರೆ ಭೂಮಿಯನ್ನು ಕೊಟ್ಟಿತ್ತು ಎಂದು ಅರವಿಂದ ಬೆಲ್ಲದ್ ತಿಳಿಸಿದರು.

ಲೀಸ್ ಕಮ್ ಸೇಲ್ ಡೀಡ್ ಅನ್ನು ಖಾಯಂ ಮಾಡುವ ವೇಳೆ ಆಗಿನ ಕಾಂಗ್ರೆಸ್ ಸರಕಾರವು ಪ್ರತಿ ಎಕರೆಗೆ 1.20 ಲಕ್ಷ ರೂಪಾಯಿಗೆ ಭೂಮಿ ನೋಂದಣಿ ಮಾಡುವ ನಿರ್ಧಾರ ತೆಗೆದುಕೊಂಡಾಗ ಬಿಜೆಪಿ ಸದಸ್ಯರು ಅದರ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡಿದ್ದೆವು. ನಮ್ಮ ಸರಕಾರ ಅಧಿಕಾರಕ್ಕೆ ಬಂದಾಗಲೂ ಕಡಿಮೆ ಬೆಲೆಗೆ ಖನಿಜಯುಕ್ತ ಈ ಭೂಮಿ ಕೊಡುವ ನಿರ್ಧಾರ ಬೇಡ ಎಂದು ನಿರ್ಧರಿಸಿದ್ದೆವು ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X