Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು | 9.93 ಕೋಟಿ ರೂ. ಮೌಲ್ಯದ...

ಬೆಂಗಳೂರು | 9.93 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ : ಇಬ್ಬರು ವಿದೇಶಿಗರ ಸಹಿತ 7 ಮಂದಿ ಬಂಧನ

ವಾರ್ತಾಭಾರತಿವಾರ್ತಾಭಾರತಿ29 Sept 2025 6:26 PM IST
share
ಬೆಂಗಳೂರು | 9.93 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ : ಇಬ್ಬರು ವಿದೇಶಿಗರ ಸಹಿತ 7 ಮಂದಿ ಬಂಧನ

ಬೆಂಗಳೂರು, ಸೆ.29: ಇಬ್ಬರು ವಿದೇಶಿ ಪ್ರಜೆಗಳ ಸಹಿತ 7 ಜನ ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಬರೋಬ್ಬರಿ 9.93 ಕೋಟಿ ರೂ. ಮೌಲ್ಯದ ವಿವಿಧ ಮಾದಕ ಪದಾರ್ಥಗಳನ್ನು ಜಪ್ತಿ ಮಾಡಿರುವುದಾಗಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಒಟ್ಟು 3 ಕೆ.ಜಿ. 858 ಗ್ರಾಂ ಎಂಡಿಎಂಎ ಕ್ರಿಸ್ಟೆಲ್, 41 ಗ್ರಾಂ ಎಕ್ಸ್‌ ಟಸಿ ಪಿಲ್ಸ್, 1 ಕೆ.ಜಿ. 82 ಗ್ರಾಂ ಹೈಡ್ರೋಗಾಂಜಾ, 6 ಕೆ.ಜಿ. ಗಾಂಜಾ ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ 1 ಕಾರು ಮತ್ತು 1 ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಸೀಮಂತ್ ಕುಮಾರ್ ಸಿಂಗ್ ವಿವರಿದ್ದಾರೆ.

ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದ ಸಾಫ್ಟ್‌ ವೇರ್ ಉದ್ಯೋಗಿ ಕೆವಿನ್ ರೋಜರ್ ಎಂಬುವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೋಜು-ಮಸ್ತಿಯ ಜೀವನ ನಡೆಸಲು ಹಾಗೂ ಅಧಿಕ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಕೇರಳದಿಂದ ಕಡಿಮೆ ಬೆಲೆಗೆ ಹೈಡ್ರೋಗಾಂಜಾ ತಂದು ಬೆಂಗಳೂರಿನಲ್ಲಿ ಪರಿಚಯದ ಗಿರಾಕಿಗಳಿಗೆ ಕೆವಿನ್ ರೋಜರ್ ಮಾರಾಟ ಮಾಡುತ್ತಿದ್ದ. ಆತನಿಂದ 500 ಗ್ರಾಂ ಹೈಡ್ರೋಗಾಂಜಾ ಮತ್ತು ಕೃತ್ಯಕ್ಕೆ ಬಳಸಲಾಗುತ್ತಿದ್ದ ಒಂದು ಕಾರು, ಒಂದು ಬೈಕ್ ಹಾಗೂ ಒಂದು ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ ಎಂದು ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಅಲ್ಲದೆ, ಮಾದಕ ಪದಾರ್ಥಗಳ ಮಾರಾಟದಲ್ಲಿ ತೊಡಗಿದ್ದ ಡೆಂಟಲ್ ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. ರಂಜಿತ್ ಆ್ಯಂಟೋನಿ ಬಂಧಿತ ಆರೋಪಿ. ಈತನೂ ಸಹ ಮೋಜಿನ ಜೀವನ ನಡೆಸಲು ಹಾಗೂ ಅಧಿಕ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಕಡಿಮೆ ಬೆಲೆಗೆ ಹೈಡ್ರೋಗಾಂಜಾ ತಂದು ಪರಿಚಯದ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ. ಆರೋಪಿಯಿಂದ 300 ಗ್ರಾಂ ಹೈಡ್ರೋಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಇನ್ನು, ವಿದೇಶಿ ಅಂಚೆ ಕಚೇರಿಗೆ ಪಾರ್ಸಲ್ ಮೂಲಕ ಬಂದಿದ್ದ 1 ಕೋಟಿ ರೂ. ಮೌಲ್ಯದ ಮಾದಕ ಪದಾರ್ಥಗಳನ್ನು ಕೆ.ಜಿ.ನಗರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. 1 ಕೆ.ಜಿ. 22 ಗ್ರಾಂ ಹೈಡ್ರೋ ಗಾಂಜಾ ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಪಾರ್ಸಲ್ ಬುಕ್ ಮಾಡಿದ್ದ ಆರೋಪಿಯ ವಿರುದ್ಧ ಕೆ.ಜಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡ್ರಗ್ ಪೆಡ್ಲಿಂಗ್‍ನಲ್ಲಿ ತೊಡಗಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಎನ್‍ಗ್ವು ಕಿಂಗ್‍ಸ್ಲೆ ಹಾಗೂ ಥಾಮಸ್ ನವೀದ್ ಚಿಮೆ ಬಂಧಿತ ಆರೋಪಿಗಳು. ದಿಲ್ಲಿಯಲ್ಲಿ ನೆಲೆಸಿರುವ ಇತರ ವಿದೇಶಿ ಪ್ರಜೆಗಳಿಂದ ಮಾದಕ ಪದಾರ್ಥಗಳನ್ನು ಖರೀದಿಸಿ ತರುತ್ತಿದ್ದ ಆರೋಪಿಗಳು, ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು.

ಆರೋಪಿಗಳ ಪೈಕಿ ಓರ್ವ ಆನ್‍ಲೈನ್ ವಂಚನೆ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದು, ಗುಜರಾತ್‍ನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು ದಾಖಲಾಗಿದ್ದವು. ನ್ಯಾಯಾಲಯದಿಂದ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ ಆರೋಪಿ 2 ತಿಂಗಳ ಹಿಂದೆ ಬೆಂಗಳೂರಿಗೆ ಬಂದು ಡ್ರಗ್ ಪೆಡ್ಲಿಂಗ್‍ನಲ್ಲಿ ತೊಡಗಿಕೊಂಡಿದ್ದ ಎಂದು ಸೀಮಂತ್ ಕುಮಾರ್ ಸಿಂಗ್ ವಿವರಿಸಿದ್ದಾರೆ.

ಒಟ್ಟಾರೆ ಇಬ್ಬರು ವಿದೇಶಿಗರ ಸಹಿತ 7 ಮಂದಿಯನ್ನು ಬಂಧಿಸಲಾಗಿದ್ದು, 9.93 ಕೋಟಿ ರೂ. ಮೌಲ್ಯದ ವಿವಿಧ ಮಾದಕ ಪದಾರ್ಥಗಳನ್ನು ಜಪ್ತಿ ಮಾಡಲಾಗಿದೆ ಎಂದು ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X