Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು | ಕಡೆಲೆಕಾಯಿ ಪರಿಷೆ : ಮೊದಲ...

ಬೆಂಗಳೂರು | ಕಡೆಲೆಕಾಯಿ ಪರಿಷೆ : ಮೊದಲ ದಿನವೇ ವ್ಯಾಪಾರ ಜೋರು

ವಾರ್ತಾಭಾರತಿವಾರ್ತಾಭಾರತಿ25 Nov 2024 9:01 PM IST
share
ಬೆಂಗಳೂರು | ಕಡೆಲೆಕಾಯಿ ಪರಿಷೆ : ಮೊದಲ ದಿನವೇ ವ್ಯಾಪಾರ ಜೋರು

ಬೆಂಗಳೂರು : ಪ್ರತಿವರ್ಷ ಕಾರ್ತಿಕ ಮಾಸದ ಕೊನೆ ಎರಡು ದಿನಗಳ ಕಾಲ ಬಸವನಗುಡಿಯ ಕಡೆಲೆಕಾಯಿ ಪರಿಷೆ ನೆಡೆಯುತ್ತಿದ್ದು, ಅದೇ ಮಾದರಿಯಲ್ಲಿ ಪರಿಷೆಗೆ ಚಾಲನೆ ಸಿಕ್ಕ ಮೊದಲ ದಿನವಾದ ಸೋಮವಾರ ಜನಸಾಗರವೇ ಹರಿದು ಬಂದಿತ್ತು.

ಬಸವನಗುಡಿಯ ಬುಲ್ ಟೆಂಪಲ್ ರಸ್ತೆ ಸೇರಿ ಸುತ್ತಮುತ್ತ ಕಡಲೆಕಾಯಿ ವ್ಯಾಪಾರ ಜೋರಾಗಿದೆ. ಮಳಿಗೆಗಳಲ್ಲಿ, ಬರಿ ನೆಲದಲ್ಲಿ ವಿವಿಧ ಬಗೆಯ ಕಡಲೆಕಾಯಿಗಳನ್ನು ರಾಶಿ ಹಾಕಿಕೊಂಡು ವ್ಯಾಪಾರಿಗಳು ವ್ಯಾಪಾರ ಮಾಡುತ್ತಿದ್ದರು.

ಹಸಿ ಹಾಗೂ ಹುರಿದ ಕಡಲೆಕಾಯಿಗೆ ಸೇರಿಗೆ 60 ರಿಂದ 80 ರೂಪಾಯಿಯ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಕಡಲೆಕಾಯಿ ಮಾತ್ರವಲ್ಲದೇ ಹಲವು ಬಗೆಯ ಚಾಟ್ಸ್, ಮುಸುಕಿನ ಜೋಳ, ಕರಿದ ತಿಂಡಿ ತಿನಿಸು, ಮಕ್ಕಳ ಆಟಿಕೆಗಳು, ಮನೆಗಳಿಗೆ ಬಳಸುವ ಅಲಂಕಾರಿಕ ವಸ್ತುಗಳು, ಬಗೆ ಬಗೆಯ ಸರ, ಬಟ್ಟೆಬರೆ, ಗೃಹೋಪಯೋಗಿ ವಸ್ತುಗಳು, ಬೊಂಬೆಗಳು ಹೀಗೆ ವಿವಿಧ ರೀತಿಯ ಮಳಿಗೆಗಳು ಜನರನ್ನು ಆಕರ್ಷಿಸುತ್ತಿವೆ.

ಬೆಂಗಳೂರು ಸುತ್ತಮುತ್ತಲಿನ ವಿವಿಧ ಜಿಲ್ಲೆಗಳಿಂದ ಹಾಗು ಕರ್ನಾಟಕದ ಸುತ್ತ ಮುತ್ತಲಿನ ರಾಜ್ಯಗಳಿಂದ ಬಂದಿರುವ ವ್ಯಾಪಾರಿಗಳು ರಸ್ತೆ ಬದಿ ತಳ್ಳುವ ಗಾಡಿ, ಮಳಿಗೆಗಳಲ್ಲಿ ಕಡಲೆಕಾಯಿ ಮಾರಾಟ ಮಾಡುತ್ತಿದ್ದಾರೆ.

ಈ ಬಾರಿಯ ಬಸವನಗುಡಿಯ ಕಡಿಲೆಕಾಯಿ ಪರಿಷೆಯಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಚಿಂತಾಮಣಿ ಸೇರಿ ನೆರೆಯ ರಾಜ್ಯಗಳಿಂದ ರೈತರು ಬಂದಿದ್ದು ಅವರು ನಾಟಿ, ಫಾರಂ, ಬಾದಮಿ ಸೇರಿದಂತೆ ವಿವಿಧ ಬಗೆಯ ಕಡಲೆಕಾಯಿಗಳನ್ನು ಮಾರಾಟ ಮಾಡುತ್ತಿದ್ದಾರೆ.

ಬಸವನಗುಡಿ ದೊಡ್ಡಗಣಪತಿ ಮತ್ತು ಬಸವಣ್ಣ ದೇಗುಲಗಳಲ್ಲಿ ಒಳ ಮತ್ತು ಹೊರ ಭಾಗದಲ್ಲಿ ಐದು ದಿನಗಳ ಕಾಲ ದೀಪಾಲಂಕಾರ ಮಾಡಲಾಗಿದೆ. ಈ ಬಾರಿ ರಾಮಕೃಷ್ಣ ಆಶ್ರಮ ವೃತ್ತ ಹಾಗೂ ಸುತ್ತುಮುತ್ತಲಿನ ರಸ್ತೆಗಳೆಲ್ಲ ಸಹ ದೀಪಾಲಂಕಾರ ಮಾಡಲಾಗಿದೆ. ಪರಿಷೆಗೆ ಆಗಮಿಸುತ್ತಿರುವ ಭಕ್ತರಿಗೆ ಕುಡಿಯುವ ನೀರಿನ ಅನುಕೂಲಕ್ಕಾಗಿ ಹೆಚ್ಚುವರಿ 2 ಟ್ಯಾಂಕರ್‌ ಗಳ ವ್ಯವಸ್ಥೆ ಮಾಡಲಾಗಿದ್ದು, ಇವುಗಳನ್ನು ಪಕ್ಕದ ಧರ್ಮಸ್ಥಳ ಮಂಜುನಾಥ ಕಲ್ಯಾಣ ಮಂಟಪದಲ್ಲಿ ತಾತ್ಕಾಲಿಕವಾಗಿ ಸ್ಥಾಪಿಸಲಾಗಿದೆ.

ಕಡಲೆಕಾಯಿ ಪರಿಷೆಯಲ್ಲಿ ಈ ಬರಿ ಕೂಡ ಬಿಬಿಎಂಪಿ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಪ್ಲಾಸ್ಟಿಕ್ ವಿರುದ್ಧ ಜನ ಜಾಗೃತಿ ಕಾರ್ಯವನ್ನು ಮಾಡುತ್ತಿದ್ದು, ಈ ನಿಟ್ಟಿನಲ್ಲಿ ಕಡಲೆಕಾಯಿ ವ್ಯಾಪಾರಿಗಳು ಸಹ ಮುಜರಾಯಿ ಇಲಾಖೆ ವತಿಯಿಂದ ಪೇಪರ್ ಕವರ್‌ ಗಳನ್ನು ವಿತರಿಸಲಾಗಿದೆ ಹಾಗೂ ಪರಿಷೆಗೆ ಬರುವವರು ಬಟ್ಟೆಯ ಬ್ಯಾಗ್ ಹಾಗೂ ಕೈ ಜೀಲಗಳನ್ನು ತರುವಂತೆ ಮನವಿ ಮಾಡಲಾಗುತ್ತಿದೆ.

Tags

Bangalorekadalekai parishe
share
ವಾರ್ತಾಭಾರತಿ
ವಾರ್ತಾಭಾರತಿ
Next Story
X