Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಜೆಟ್‍ನಲ್ಲಿ ಗ್ರಂಥಾಲಯ ಇಲಾಖೆಯ ಕಡೆಗಣನೆ...

ಬಜೆಟ್‍ನಲ್ಲಿ ಗ್ರಂಥಾಲಯ ಇಲಾಖೆಯ ಕಡೆಗಣನೆ : ಪ್ರೊ.ಬರಗೂರು ರಾಮಚಂದ್ರಪ್ಪ

ವಾರ್ತಾಭಾರತಿವಾರ್ತಾಭಾರತಿ8 Feb 2025 9:27 PM IST
share
ಬಜೆಟ್‍ನಲ್ಲಿ ಗ್ರಂಥಾಲಯ ಇಲಾಖೆಯ ಕಡೆಗಣನೆ : ಪ್ರೊ.ಬರಗೂರು ರಾಮಚಂದ್ರಪ್ಪ

ಬೆಂಗಳೂರು : ಸರಕಾರದ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಇಲಾಖೆಗಳಲ್ಲಿ ಗ್ರಂಥಾಲಯ ಇಲಾಖೆಯೂ ಒಂದಾಗಿದ್ದು, ಬಜೆಟ್‍ನಲ್ಲಿ ಗ್ರಂಥಾಲಯ ಇಲಾಖೆಗೆ ಅನುದಾನ ನೀಡದೆ ಕಡೆಗಣಿಸಲಾಗಿದೆ ಎಂದು ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.

ಶನಿವಾರ ನಗರದ ಗಾಂಧಿಭವನದಲ್ಲಿ ನಡೆದ ಲೇಖಕ ನಿಡಸಾಲೆ ಪುಟ್ಟಸ್ವಾಮಯ್ಯ-75 ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 2020ರಲ್ಲಿ ಗ್ರಂಥಾಲಯ ಇಲಾಖೆಗೆ ಆಯ್ಕೆ ಮಾಡಿದ ಪುಸ್ತಕಗಳಿಗೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಹಣ ಕೊಟ್ಟಿಲ್ಲ. ಗ್ರಂಥಾಲಯ ಇಲಾಖೆಗೆ ದೊಡ್ಡ ಕಾಯಕಲ್ಪ ಮಾಡಬೇಕಿದೆ ಎಂದರು.

2021ರ ಪುಸ್ತಕಗಳು ಗ್ರಂಥಾಲಯ ಇಲಾಖೆಗೆ ಆಯ್ಕೆಯಾಗಿದ್ದರೂ ಸರಕಾರ ಹಣ ನೀಡಿಲ್ಲ. ಪುಸ್ತಕಗಳ ಸಗಟು ಖರೀದಿಯನ್ನು ಗ್ರಂಥಾಲಯ ಇಲಾಖೆ ಮಾಡುತ್ತದೆ. ಆದರೆ ಬಜೆಟ್‍ನಲ್ಲಿ ಗ್ರಂಥಾಲಯ ಇಲಾಖೆಗೆ ಅನುದಾನವನ್ನೇ ನೀಡಿಲ್ಲ. ಒಮ್ಮೆ ಮಾತ್ರ 10 ಕೋಟಿ ರೂ. ಗ್ರಂಥಾಲಯ ಇಲಾಖೆಗೆ ನೀಡಲಾಗಿತ್ತು. ಈಗ ಇಲಾಖೆಯು ಬೇರೆ ಆದಾಯದ ಮೂಲವನ್ನು ನೋಡುವಂತಾಗಿದೆ. ಹೀಗಾದರೆ ಪುಸ್ತಕ ಸಂಸ್ಕೃತಿ ಉಳಿಸುವ ಕೆಲಸವಾಗುವುದು ಹೇಗೆ? ಎಂದು ಪ್ರೊ.ಬರಗೂರು ಬೇಸರ ವ್ಯಕ್ತಪಡಿಸಿದರು.

ಹಂಪಿ ಕನ್ನಡ ವಿ.ವಿ.ಯ ವಿಶ್ರಾಂತ ಪ್ರಾಧ್ಯಾಪಕ ಕರೀಗೌಡ ಬೀಚನಹಳ್ಳಿ ಸಂಪಾದಿಸಿರುವ ಅಮೃತ ಕಥಾನಕ ಗ್ರಂಥವು 75 ಕಿರುಕತೆಗಳನ್ನು ಒಳಗೊಂಡಿದೆ. ಇದು ವಿವಿಧ ಕಾಲಘಟ್ಟ ಪ್ರತಿನಿಧಿಸುವ ಕಿರು ಕಥೆಗಳನ್ನು ಒಳಗೊಂಡಿದೆ. ಇದೊಂದು ಉಪಯುಕ್ತ ಪುಸ್ತಕವಾಗಿದ್ದು, ಕರೀಗೌಡ ಬೀಚನಹಳ್ಳಿಯವರು ಸಾರ್ಥಕ ಕೆಲಸ ಮಾಡಿದ್ದಾರೆ ಎಂದು ಪ್ರೊ.ಬರಗೂರು ಮೆಚ್ಚುಗೆ ಸೂಚಿಸಿದರು.

ಹಿರಿಯ ಕವಿ ಡಾ.ದೊಡ್ಡರಂಗೇಗೌಡ ಮಾತನಾಡಿ, ಪುಸ್ತಕವನ್ನು ಕೇವಲ ಉದ್ಯಮವನ್ನಾಗಿ ಮಾತ್ರ ನೋಡದೆ ಅದನ್ನು ಸಂಸ್ಕೃತಿಯ ಭಾಗವಾಗಿ ನೋಡುವಂತೆ ಮಾಡಬೇಕಾದ ಹೊಣೆ ನಮ್ಮೆಲ್ಲರ ಮೇಲಿದೆ. ಅದಕ್ಕಾಗಿ ಪುಸ್ತಕದ ಗುಣಮಟ್ಟ, ಉತ್ಪಾದನೆಯ ಮೌಲ್ಯ ಹೆಚ್ಚುವಂತೆ ಮಾಡಬೇಕು ಎಂದರು.

ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಎಚ್.ಎಲ್.ಪುಷ್ಪ ಮಾತನಾಡಿ, ಗ್ರಂಥಾಲಯಗಳಲ್ಲಿ ಹೊಸ ಪುಸ್ತಕಗಳನ್ನು ಸೇರ್ಪಡೆ ಮಾಡುತ್ತಿಲ್ಲ. ಇದಕ್ಕೆ ಮುಖ್ಯ ಕಾರಣ ಪುಸ್ತಕ ಖರೀದಿಯಲ್ಲಿ ಆಗುತ್ತಿರುವ ವಿಳಂಬ. ಇದರೊಂದಿಗೆ ಪುಸ್ತಕ ಪ್ರಕಾಶನ ರಂಗ ಎದುರಿಸುತ್ತಿರುವ ಹಲವು ಸಮಸ್ಯೆಗಳತ್ತ ಸರಕಾರ ಗಮನ ಹರಿಸಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಂಸ್ಕೃತ ವಿ.ವಿ.ಯ ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್, ಹಂಪಿ ಕನ್ನಡ ವಿ.ವಿ.ಯ ವಿಶ್ರಾಂತ ಪ್ರಾಧ್ಯಾಪಕ ಡಾ.ಕರೀಗೌಡ ಬೀಚನಹಳ್ಳಿ, ಹಿರಿಯ ಸಾಹಿತಿ, ಪ್ರಕಾಶಕ, ನಟ ನಿಡಸಾಲೆ ಪುಟ್ಟಸ್ವಾಮಯ್ಯ, ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ಡಾ.ವೂಡೇ ಪಿ.ಕೃಷ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X