Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಚ್.ಎಸ್.ಶ್ರೀಮತಿ ಕನ್ನಡದ ಬೆಲ್‍ಹುಕ್ಸ್...

ಎಚ್.ಎಸ್.ಶ್ರೀಮತಿ ಕನ್ನಡದ ಬೆಲ್‍ಹುಕ್ಸ್ : ಡಾ.ಅರುಣ್ ಜೋಳದ ಕೂಡ್ಲಿಗಿ

ವಾರ್ತಾಭಾರತಿವಾರ್ತಾಭಾರತಿ26 Oct 2024 9:31 PM IST
share
ಎಚ್.ಎಸ್.ಶ್ರೀಮತಿ ಕನ್ನಡದ ಬೆಲ್‍ಹುಕ್ಸ್ : ಡಾ.ಅರುಣ್ ಜೋಳದ ಕೂಡ್ಲಿಗಿ

ಬೆಂಗಳೂರು : ಬೇರೆ ಭಾಷೆಗಳಿಗೆ ಹೋಲಿಸಿದರೆ ಬೆಲ್‍ಹುಕ್ಸ್ ಅವರ ಕೃತಿಗಳು ಕನ್ನಡದಲ್ಲೇ ಹೆಚ್ಚು ಪ್ರಕಟವಾಗಿವೆ. ಬೆಲ್‍ಹುಕ್ಸ್ ಅವರನ್ನು ಕನ್ನಡದ ವಿವೇಕದ ಭಾಗವಾಗಿ ಮಾಡಿದ ಎಚ್.ಎಸ್.ಶ್ರೀಮತಿ ಅವರು ಕನ್ನಡದ ಬೆಲ್‍ಹುಕ್ಸ್ ಇದ್ದಂತೆ ಎಂದು ಅಂಕಣಕಾರ ಡಾ.ಅರುಣ್ ಜೋಳದಕೂಡ್ಲಿಗಿ ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ನಗರದ ಚಿತ್ರಕಲಾ ಪರಿಷತ್‍ನ ಡಿ.ದೇವರಾಜ ಅರಸು ಗ್ಯಾಲರಿಯಲ್ಲಿ ಜೀರುಂಡೆ ಪ್ರಕಾಶನದ ವತಿಯಿಂದ ಆಯೋಜಿಸಿದ್ದ ಎಚ್.ಎಸ್.ಶ್ರೀಮತಿ ನಿರೂಪಣೆಯ ಬೆಲ್‍ಹುಕ್ಸ್ ಅವರ ಬಂಧಮುಕ್ತ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಿರಂತರವಾಗಿ ಸ್ತ್ರೀವಾದದ ಪಯಣ ಕನ್ನಡ ವಿವೇಕದ ಜತೆಗೆ ಬಂದಿದೆ. ಬೆಲ್‍ಹುಕ್ಸ್ ಆಲೋಚನೆಗಳನ್ನು ಕರ್ನಾಟಕದ ವಿದ್ಯಮಾನದ ಜತೆಗೆ ಬೆಸೆದು ಮಾತನಾಡುವ ನೆಲೆಗೆ ಆಪ್ತವಾಗುತ್ತಿದ್ದಾರೆ ಎಂದು ಅವರು ತಿಳಿಸಿದರು.

ಕನ್ನಡಕ್ಕೆ ಬೆಲ್‍ಹುಕ್ಸ್ ಅವರ 5 ಕೃತಿಗಳು ಬಂದಿರುವುದರಿಂದ ಮುಂದೆ ಹೆಚ್ಚು ಚರ್ಚೆಗೆ ಒಳಗಾಗುವ ಆಶಾವಾದವಿದೆ. ಬಂಧಮುಕ್ತ ಕೃತಿ ತುಂಬಾ ವಿಸ್ತಾರವಾದ ಕೃತಿಯಾಗಿದೆ. ಇಡೀ ಕೃತಿಯೊಳಗೆ ಪ್ರೀತಿ ಪ್ರೇಮದ ವ್ಯಾಖ್ಯಾನವನ್ನು ವಿಶಿಷ್ಟವಾಗಿ ಮಂಡಿಸುತ್ತಾ ಹೋಗುತ್ತಾರೆ. ಇಡೀ ಪುಸ್ತಕದಲ್ಲಿ ಬಿಳಿಯರು ಕಪ್ಪುಜನರ ಬಗ್ಗೆ ಕಟ್ಟಿದ ಮಿಥ್‍ಗಳನ್ನು ಹೊಡೆಯುವ ಕೆಲಸ ಮಾಡಿದ್ದಾರೆ ಎಂದು ಅರುಣ್ ಜೋಳದ ಕೂಡ್ಲಿಗಿ ತಿಳಿಸಿದರು.

ಪತ್ರಕರ್ತ ಗುರುಪ್ರಸಾದ್ ಮಾತನಾಡಿ, ಸ್ತ್ರೀವಾದದ ಕೆಲವು ಪುಸ್ತಕಗಳನ್ನು ಓದಿದರೂ ಕೂಡ ಅದನ್ನು ಆಚರಿಸುವುದು ಸುಲಭವಾದ ಕೆಲಸವಲ್ಲ. ತಿಳುವಳಿಕೆಯಿಂದ ಅವುಗಳನ್ನು ಕಾರ್ಯರೂಪಕ್ಕೆ ತರುವುದು ಸವಾಲಿನ ಕೆಲಸವಾಗಿದೆ. ಅದರಿಂದ ಹಲವು ಸಂಘರ್ಷವಾಗುತ್ತವೆ. ನಮ್ಮ ನಮ್ಮ ಕ್ಷೇತ್ರಗಳಲ್ಲಿ ಬೆಲ್‍ಹುಕ್ಸ್ ಅವರ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಪರ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ, ಲೇಖಕಿ ಎಚ್.ಎಸ್.ಶ್ರೀಮತಿ, ಪ್ರಕಾಶಕ ಧನಂಜಯ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X