Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಒಳ ಮೀಸಲಾತಿ’ ಅಲೆಮಾರಿ ಸಮುದಾಯವನ್ನು...

‘ಒಳ ಮೀಸಲಾತಿ’ ಅಲೆಮಾರಿ ಸಮುದಾಯವನ್ನು ಪರಿಗಣಿಸಿ: ಅಲೆಮಾರಿ ಬುಡಕಟ್ಟು ಮಹಾಸಭಾ

ವಾರ್ತಾಭಾರತಿವಾರ್ತಾಭಾರತಿ16 Jan 2025 10:00 PM IST
share
‘ಒಳ ಮೀಸಲಾತಿ’ ಅಲೆಮಾರಿ ಸಮುದಾಯವನ್ನು ಪರಿಗಣಿಸಿ: ಅಲೆಮಾರಿ ಬುಡಕಟ್ಟು ಮಹಾಸಭಾ

ಬೆಂಗಳೂರು : ಒಳ ಮೀಸಲಾತಿಯಲ್ಲಿರುವ ಜಾತಿಗಳ ವರ್ಗೀಕರಣದ ಕುರಿತು ಸರಕಾರಕ್ಕೆ ಸಲಹೆ ನೀಡುವ ವೇಳೆ ಪರಿಶಿಷ್ಟ ಜಾತಿಯಲ್ಲಿನ ಅಲೆಮಾರಿ ಸಮುದಾಯಗಳನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾದ ರಾಜ್ಯಾಧ್ಯಕ್ಷ ಬಿ.ಎಲ್.ಹನುಮಂತಪ್ಪ ಒಳ ಮೀಸಲಾತಿ ಕುರಿತ ಏಕಸದಸ್ಯ ಆಯೋಗದ ಅಧ್ಯಕ್ಷ ನ್ಯಾ.ನಾಗಮೋಹನ್ ದಾಸ್‍ಗೆ ಮನವಿ ಮಾಡಿದ್ದಾರೆ.

ಗುರುವಾರ ನಗರದ ಯವನಿಕದಲ್ಲಿರುವ ಒಳ ಮೀಸಲಾತಿ ಆಯೋಗದ ಕಚೇರಿಯಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಇಂದಿಗೂ ಶಿಕ್ಷಣ, ಆರೋಗ್ಯ ವಸತಿ ಮತ್ತು ಯಾವುದೇ ಸರಕಾರಿ ಸೌಲಭ್ಯಗಳನ್ನು ಪಡೆಯದೆ ಟೆಂಟ್ ಮತ್ತು ಗುಡಿಸಲುಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಸಮುದಾಯ ಸಮಾಜದ ಕಟ್ಟಕಡೆಯ ಸಮುದಾಯವಾಗಿದೆ. ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಸಮುದಾಯಗಳಲ್ಲಿ 49 ಸಮುದಾಯಗಳು ಅಲೆಮಾರಿಗಳ ಆಗಿದ್ದಾರೆ ಎಂದು ತಿಳಿಸಿದರು.

ಕರ್ನಾಟಕ ಸರಕಾರದ ಬಳಿ ಯಾವುದೇ ಸಮುದಾಯದ ಅಧಿಕೃತ ದತ್ತಾಂಶವಿಲ್ಲ ಮತ್ತು ಈ ಸಮುದಾಯದ ಕುರಿತಂತೆ ಕುಲಶಾಸ್ತ್ರೀಯ ಅಧ್ಯಯನವೂ ಇಲ್ಲ. ಸದ್ಯಕ್ಕೆ ಕೇಂದ್ರ ಸರಕಾರ ಅಲೆಮಾರಿಗಳ ಕುರಿತಂತೆ 2008ರಲ್ಲಿ ನೇಮಿಸಿದ ಬಾಲಕೃಷ್ಣ ರೇಣುಕೆ ರಾಷ್ಟ್ರೀಯ ಆಯೋಗ ಹಾಗೂ 2015ರಲ್ಲಿ ಕಂಡುಬಂದ ಬಿಕ್ಕು ರಾಮ್ ಜೀ ಇದಾರೆ ನೇತೃತ್ವದ ಈ ಎರಡೂ ಆಯೋಗಗಳು ಪ್ರಕಾರ ಕರ್ನಾಟಕದಲ್ಲಿ ಶೇ.10ರಷ್ಟು ಅಲೆಮಾರಿ ಸಮುದಾಯಗಳಿರುವುದು ದಾಖಲಾಗಿದೆ ಎಂದು ಮಾಹಿತಿ ನೀಡಿದರು.

ಇಡೀ ಅಲೆಮಾರಿಗಳನ್ನು ಒಂದೇ ಸೂರಿನಡಿ ತರಬೇಕು ಎಂಬುದು ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ‘ಮಹಾಸಭಾ'ದ ಆಶಯ. ಆದ್ದರಿಂದ ಎಸ್.ಸಿ/ಎಸ್.ಟಿ. ಹಿಂದುಳಿದ ವರ್ಗಗಳಿಗೆ ಸೇರಿದ ಅಲೆಮಾರಿಗಳ ಅಸ್ಮಿತೆಗಾಗಿ ‘ಅಲೆಮಾರಿ ಬುಡಕಟ್ಟು ಆಯೋಗ'ವನ್ನು ರಚಿಸುವಂತೆ ಸರಕಾರವನ್ನು ಮನವಿ ಮಾಡಿದ್ದೇವೆ. ಸರಕಾರ ಕೂಡ ನಮ್ಮ ಮನವಿಗೆ ಓಗೊಟ್ಟು ಇಡೀ ಅಲೆಮಾರಿಗಳನ್ನು ಒಂದೇ ಸೂರಿನಡಿ ತರುವ ಪ್ರಯತ್ನದಲ್ಲಿದೆ. ಈ ಕಾರಣಕ್ಕೆ ನಾವು ಶೇ.7ರಷ್ಟು ಮೀಸಲಾತಿ ಕೇಳಿದ್ದೇವೆ. ಹಾಗೇನಾದರು ಎಸ್.ಸಿ ಅಲೆಮಾರಿಗಳನ್ನು ಮಾತ್ರ ತಾವು ಪರಿಗಣಿಸುವುದಾದರೆ ಕನಿಷ್ಠ ಶೇ.3ರಷ್ಟು ಮೀಸಲಾತಿ ನೀಡಬೇಕು ಎಂದು ತಿಳಿಸಿದರು.

ಅಲೆಮಾರಿ ಬುಡಕಟ್ಟು ಮಹಾಸಭಾದ ಪ್ರಧಾನ ಕಾರ್ಯದರ್ಶಿ ನಾಗರಾಜ್ ಮಾತನಾಡಿ, ಪರಿಶಿಷ್ಟ ಜಾತಿಯಲ್ಲಿರುವ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಪಟ್ಟಿಯನ್ನು ಕಲ್ಪಿಸಿ ಕನಿಷ್ಠ ಶೇ.3ರಷ್ಟು ಮೀಸಲಾತಿಯನ್ನು ಕಲ್ಪಿಸಬೇಕು. ಅತ್ಯಂತ ಕೆಳದರ್ಜೆಯಲ್ಲಿರುವ ಅತಿಸೂಕ್ಷ್ಮ ಜಾತಿಗಳಾದ ವರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯಗಳಿಗೆ ಈವರೆಗೆ ಯಾವುದೇ ಸೌಲಭ್ಯ ದೊರಕದಿರುವುದರಿಂದ ಸದರಿ ಸಮುದಾಯಗಳ ಸ್ಥಿತಿಗತಿಗಳನ್ನು ಗಮನಿಸಿ ತಾವು ಈ ಸಮುದಾಯಗಳ ಶ್ರೇಯೋಭಿವೃದ್ಧಿಗೆ ನ್ಯಾಯ ಒದಗಿಸಬೇಕು ಎಂದು ನಾಗಮೋಹನ್‍ದಾಸ್‍ಗೆ ಮನವಿ ಮಾಡಿದರು.

ಸಭೆಯಲ್ಲಿ ಅಲೆಮಾರಿ ಬುಡಕಟ್ಟು ಸಮುದಾಯದ ಮುಖಂಡರಾದ ರಂಗಮುನಿದಾಸ್, ಮುತ್ತುರಾಜ್, ಧನಂಜಯ್, ಮಾತಾಂಡಪ್ಪ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X