Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಉರ್ದು ಬದಿಗೊತ್ತಿ ದೇಶದ ಶಾಸ್ತ್ರೀಯ...

ಉರ್ದು ಬದಿಗೊತ್ತಿ ದೇಶದ ಶಾಸ್ತ್ರೀಯ ಸಂಸ್ಕೃತಿಯನ್ನು ಕಲ್ಪನೆ ಮಾಡಲು ಸಾಧ್ಯವಿಲ್ಲ : ಡಾ.ಅಜಯ್ ಕುಮಾರ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ8 Feb 2025 9:36 PM IST
share
ಉರ್ದು ಬದಿಗೊತ್ತಿ ದೇಶದ ಶಾಸ್ತ್ರೀಯ ಸಂಸ್ಕೃತಿಯನ್ನು ಕಲ್ಪನೆ ಮಾಡಲು ಸಾಧ್ಯವಿಲ್ಲ : ಡಾ.ಅಜಯ್ ಕುಮಾರ್ ಸಿಂಗ್

ಬೆಂಗಳೂರು : ದೇಶದ ಸಂಸ್ಕೃತಿಯಲ್ಲಿ ಉರ್ದು ಭಾಷೆಯ ದೊಡ್ಡ ಕೊಡುಗೆಯಿದೆ. ಉರ್ದು ಭಾಷೆಯನ್ನು ಬದಿಗೊತ್ತಿ ದೇಶದ ಶಾಸ್ತ್ರೀಯ ಸಂಸ್ಕೃತಿಯನ್ನು ಕಲ್ಪನೆ ಮಾಡಲು ಸಾಧ್ಯವಿಲ್ಲ ಎಂದು ರಾಜ್ಯದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಡಾ.ಅಜಯ್ ಕುಮಾರ್ ಸಿಂಗ್ ಅಭಿಪ್ರಾಯಪಟ್ಟರು.

ಶನಿವಾರ ನಗರದ ಕೋರಮಂಗಲದಲ್ಲಿರುವ ಒಳಾಂಗಣ ಕ್ರೀಡಾಂಣದಲ್ಲಿ ಯುನೈಟೆಡ್ ಕೌನ್ಸಿಲ್ ಫಾರ್ ಎಜುಕೇಷನ್ ಅಂಡ್ ಕಲ್ಚರ್ ಹಾಗೂ ಮೆಹೆಫಿಲ್ ಎ ನಿಸಾ ಸಂಘಟನೆ ವತಿಯಿಂದ ಆಯೋಜಿಸಿದ್ದ ‘ಉರ್ದು ದಿನ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಉರ್ದು ಯಾವುದೋ ಒಂದು ವರ್ಗದ ಭಾಷೆಯಲ್ಲ. ಇದು ದೇಶದ ಇತರ ಭಾಷೆಗಳ ಪೈಕಿ ಒಂದು ಉತ್ತಮ ಭಾಷೆಯಾಗಿದೆ. ಇದನ್ನು ದೇಶದ ಪ್ರತಿಯೊಬ್ಬ ನಾಗರಿಕರು ನೆನಪಿನಲ್ಲಿಟ್ಟುಕೊಳ್ಳಬೇಕು. ದೇವನಾಗರಿ ಲಿಪಿಯ ಮೂಲಕ ನಾನು ಉರ್ದು ಭಾಷೆಯ ಸಾಹಿತ್ಯವನ್ನು ಓದಿದ್ದೇನೆ. ನಮ್ಮ ಸೌಹಾರ್ದತೆಯ ಪರಂಪರೆಯನ್ನು ಮುನ್ನಡೆಸುವ ಅಗತ್ಯ ಹಿಂದೆಂದಿಗಿಂತಲೂ ಇಂದು ಹೆಚ್ಚಿದೆ. ಇವತ್ತು ಉರ್ದು ದಿನ ಆಯೋಜನೆ ಮಾಡುವ ಮೂಲಕ ಉರ್ದು ಭಾಷೆಯ ಮಹತ್ವವನ್ನು ಎತ್ತಿ ಹಿಡಿದಿದ್ದು ಶ್ಲಾಘನೀಯವಾದದ್ದು ಎಂದು ಅವರು ತಿಳಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ದೇಶದ ಹಲವೆಡೆ ಉರ್ದು ಭಾಷಿಕರ ಸಂಖ್ಯೆ ಅಪಾರವಾಗಿದೆ. ಕೆಲವೊಂದು ರಾಜ್ಯಗಳಲ್ಲಿ ಅಲ್ಲಿನ ಸರಕಾರಗಳು ಉರ್ದು ಭಾಷೆಯನ್ನು ಆಡಳಿತದ ಎರಡನೆ ಭಾಷೆಯ ಸ್ಥಾನಮಾನವನ್ನು ಕೊಟ್ಟಿವೆ. ಉರ್ದು ಭಾಷೆಗೆ ಸಿಗಬೇಕಾದ ಗೌರವ ಲಭಿಸಬೇಕು ಎಂದು ತಿಳಿಸಿದರು.

ಉರ್ದು ಭಾಷೆ ತನ್ನ ಭಾಷಾ ಸಂಪನ್ನತೆ ಮತ್ತು ಮಾತಿನ ಶೈಲಿಯಿಂದ ಜನರನ್ನು ತನ್ನತ್ತ ಆಕರ್ಷಿಸುವ ಶಕ್ತಿಯನ್ನು ಹೊಂದಿದೆ. ಉರ್ದು ಭಾಷೆಯು ಅತ್ಯಂತ ಆಕರ್ಷಕ ಭಾಷೆಯಾಗಿದೆ. ಈ ಭಾಷೆಯ ಸಾಹಿತ್ಯವು ಬಹಳ ಶ್ರೀಮಂತವಾಗಿದೆ ಎಂದು ನಸೀರ್ ಅಹ್ಮದ್ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೆಹೆಫಿಲ್ ಎ ನಿಸಾ ಸಂಘಟನೆಯ ಅಧ್ಯಕ್ಷೆ ಡಾ.ಶಾಯಿಸ್ತಾ ಯೂಸುಫ್ ವಹಿಸಿದ್ದರು. ಅತಿಥಿಗಳಾಗಿ ಸಾಹಿತಿಗಳಾದ ಏಜಾಝ್ ಅಲಿ ಜೊಹರಿ, ಡಾ.ಅಝ್ಲಾ ನಖ್ವಿ, ಇಕ್ಬಾಲ್ ಅಹ್ಮದ್ ಬೇಗ್, ಪ್ರೊ.ಅಲೋಕ್ ರಾಯ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ನಿವೃತ್ತ ಪ್ರಾಧ್ಯಾಪಕಿ ಪ್ರೊ.ಸಬೀಹಾ ಝುಬೇರ್ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಶಾಲೆಯ ಮಕ್ಕಳು ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರದರ್ಶನ ಮಾಡಿದರು.

ನಿವೃತ್ತ ಐಎಎಸ್ ಅಧಿಕಾರಿಗಳಾದ ಡಾ.ಅಝೀಝುಲ್ಲಾ ಬೇಗ್, ಅದೋನಿ ಸಲೀಮ್, ಮೀರ್ ಅನೀಸ್ ಅಹ್ಮದ್, ಡಾ.ಸಲಾವುದ್ದೀನ್, ನಿವೃತ್ತ ಕೆಎಎಸ್ ಅಧಿಕಾರಿ ಎಂ.ಎ.ಖಾಲಿದ್, ಅವರಿಗೆ ‘ಉರ್ದು ದೋಸ್ತ್’, ಗುಲ್ಬರ್ಗಾದ ಮುಹಮ್ಮದ್ ಅಝೀಝುದ್ದೀನ್ ಪಟೇಲ್ ಅವರಿಗೆ ‘ಮುಮ್ತಾಝ್ ಶಿರೀನ್’, ಮುಂಬೈನ ಮೀರ್ ಹಾಮಿದ್ ಇಕ್ಬಾಲ್ ಸಿದ್ಧೀಖಿ ಅವರಿಗೆ ‘ಮಹ್ಮೂದ್ ಅಯಾಝ್’ ಹಾಗೂ ಬೀದರ್ ಶಾಹೀನ್ ಕಾಲೇಜಿನ ನಿರ್ದೇಶಕಿ ಶಾಯಿಸ್ತಾ ನಾಝ್ ಅವರಿಗೆ ‘ಉರೂಜೆ ನಿಸಾ’ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X