Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು | ಅಧಿಕ ಬಡ್ಡಿ ವಸೂಲಿ ಆರೋಪ:...

ಬೆಂಗಳೂರು | ಅಧಿಕ ಬಡ್ಡಿ ವಸೂಲಿ ಆರೋಪ: ದಂಪತಿ ವಿರುದ್ಧ ಎಫ್‍ಐಆರ್

ವಾರ್ತಾಭಾರತಿವಾರ್ತಾಭಾರತಿ9 Feb 2025 6:34 PM IST
share
ಬೆಂಗಳೂರು | ಅಧಿಕ ಬಡ್ಡಿ ವಸೂಲಿ ಆರೋಪ: ದಂಪತಿ ವಿರುದ್ಧ ಎಫ್‍ಐಆರ್

ಬೆಂಗಳೂರು : 1.60 ಲಕ್ಷ ರೂ. ಸಾಲಕ್ಕೆ ಬಡ್ಡಿ ರೂಪದಲ್ಲಿ 3.80 ಲಕ್ಷ ರೂ. ಪಾವತಿಸಿದ್ದರೂ ಸಹ ಮತ್ತೆ ಬಡ್ಡಿ ನೀಡುವಂತೆ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ದಂಪತಿ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋ-ಆಪರೇಟೀವ್ ಡೆಪ್ಯೂಟಿ ರಿಜಿಸ್ಟ್ರಾರ್ ಗಂಗಾಧರ್ ಎಂಬವರು ನೀಡಿದ ದೂರಿನ ಮೇರೆಗೆ, ಶಶೀಂದ್ರಾ ಮತ್ತು ಅಶೋಕ್ ದಂಪತಿ ವಿರುದ್ಧ ರಾಜ್ಯ ಅಕ್ರಮ ಹಣ ವರ್ಗಾವಣೆ ಕಾಯ್ದೆ ಮತ್ತು ಅಧಿಕ ಬಡ್ಡಿ ವಸೂಲಿ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಜಯನಗರ ಸಿದ್ಧಾಪುರ ಕೆ.ಎಂ.ಕಾಲೊನಿ ನಿವಾಸಿ ಸಮ್ರೀನ್ ತಾಜ್ ಅವರು ತಮ್ಮ ಸಹೋದರಿಯ ಮದುವೆ ಸಲುವಾಗಿ ಶಶೀಂದ್ರಾ ಎಂಬ ಮಹಿಳೆಯಿಂದ 2021ರ ಜುಲೈನಲ್ಲಿ ಶೇ.5ರಷ್ಟು ಮಾಸಿಕ ಬಡ್ಡಿಗೆ 1.60 ಲಕ್ಷ ರೂ., ಸಾಲ ಪಡೆದಿದ್ದರು. ಸಾಲ ಪಡೆಯುವಾಗ ಸಮ್ರೀನ್ ಒಂದು ಖಾಲಿ ಚೆಕ್‍ಅನ್ನು ಶಶೀಂದ್ರಾಗೆ ನೀಡಿದ್ದಾರೆ. ಬಳಿಕ ಪ್ರತಿ ತಿಂಗಳು 8 ಸಾವಿರ ರೂ.ನಂತೆ ಒಂದೂವರೆ ವರ್ಷಗಳ ಕಾಲ ಸುಮಾರು 1.44 ಲಕ್ಷ ರೂ. ಹಣವನ್ನು ಶಶೀಂದ್ರಾಗೆ ನೀಡಿದ್ದಾರೆ ಎಂದು ಪೊಲೀಸರಿಗೆ ಕೊಟ್ಟ ದೂರಿನಲ್ಲಿ ತಿಳಿಸಲಾಗಿದೆ.

ಬಳಿಕ ಸಮ್ರೀನ್‍ಗೆ ಪ್ರತಿ ತಿಂಗಳು ಸರಿಯಾಗಿ ಬಡ್ಡಿ ಕಟ್ಟಲು ಸಾಧ್ಯವಾಗದೆ, ತಡವಾಗಿ ಬಡ್ಡಿ ಕಟ್ಟಿದ್ದಾರೆ. ಬಡ್ಡಿ ಕಟ್ಟುವುದು ವಿಳಂಬವಾದಾಗ ಶಶೀಂದ್ರಾ, ಸಮ್ರೀನ್‍ಗೆ ಕರೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು ದೂರಲಾಗಿದೆ. ಬಳಿಕ ಸಮ್ರೀನ್ ಅವರು ಎರಡು-ಮೂರು ಬಾರಿ ಶಶೀಂದ್ರಾ ಅವರ ಮನೆ ಬಳಿ ಹೋಗಿ ಬಡ್ಡಿ ಕಟ್ಟಲು ಆಗುತ್ತಿಲ್ಲ. ಅಸಲು ಹಣವನ್ನು ಮಾತ್ರ ಕಟ್ಟಿ ತೀರಿಸುವುದಾಗಿ ಮನವಿ ಮಾಡಿದ್ದಾರೆ.

ಈ ವೇಳೆ ಶಶೀಂದ್ರಾ, ಯಾವುದೇ ಕಾರಣಕ್ಕೂ ಬಡ್ಡಿ ಬಿಡುವುದಿಲ್ಲ, ಪ್ರತಿ ತಿಂಗಳು 10 ಸಾವಿರ ರೂ. ಅಸಲು ಮತ್ತು 5 ಸಾವಿರ ರೂ. ಬಡ್ಡಿ ಸೇರಿ 15 ಸಾವಿರ ರೂ. ಕಟ್ಟಲು ಒತ್ತಡ ಹೇರಲಾಗಿದೆ. ಜತೆಗೆ, ಲೇವಾದೇವಿ ನಡೆಸಲು ಈ ದಂಪತಿ ಯಾವುದೇ ಪರವಾನಗಿ ಪಡೆದಿಲ್ಲ ಎಂದು ಆರೋಪಿಸಿರುವ ಸಮ್ರೀನ್, ದಂಪತಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕೋ-ಆಪರೇಟೀವ್ ಡೆಪ್ಯೂಟಿ ರಿಜಿಸ್ಟ್ರಾರ್‍ಗೆ ದೂರು ನೀಡಿದ್ದರು.

ಈ ಸಂಬಂಧ ಡೆಪ್ಯೂಟಿ ರಿಜಿಸ್ಟ್ರಾರ್ ಅವರು ಸಿಸಿಬಿಗೆ ದೂರು ಸಲ್ಲಿಸಿದ್ದಾರೆ. ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X