Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. BENGALURU | ಕಳಪೆ ಆಹಾರ...

BENGALURU | ಕಳಪೆ ಆಹಾರ ಪ್ರಶ್ನಿಸಿದ್ದಕ್ಕೆ ಬ್ಲ್ಯಾಕ್ ಮೇಲ್ ಆರೋಪ: ರಾಮೇಶ್ವರಂ ಕೆಫೆ ಮಾಲಕರ ವಿರುದ್ಧ ಎಫ್ಐಆರ್

ವಾರ್ತಾಭಾರತಿವಾರ್ತಾಭಾರತಿ3 Dec 2025 10:18 AM IST
share
BENGALURU | ಕಳಪೆ ಆಹಾರ ಪ್ರಶ್ನಿಸಿದ್ದಕ್ಕೆ ಬ್ಲ್ಯಾಕ್ ಮೇಲ್ ಆರೋಪ: ರಾಮೇಶ್ವರಂ ಕೆಫೆ ಮಾಲಕರ ವಿರುದ್ಧ ಎಫ್ಐಆರ್

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಗ್ರಾಹಕರೊಬ್ಬರಿಗೆ ನೀಡಿದ್ದ ಕಳಪೆಯಾಗಿರುವುದನ್ನು ಪ್ರಶ್ನಿಸಿದ್ದಕ್ಕೆ ಬ್ಲ್ಯಾಕ್ ಮೇಲೆ ಮಾಡಿದ ಆರೋಪದಡಿ ಕೆಫೆಯ ಮಾಲಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಕಳಪೆ ಆಹಾರವನ್ನು ನೀಡಲಾಗಿದೆ ಎಂದು ಕೆಫೆಯ ಮಾಲಕ ರಾಘವೇಂದ್ರ ರಾವ್, ಅವರ ಪತ್ನಿ ದಿವ್ಯಾ ರಾಘವೇಂದ್ರ ರಾವ್ ಮತ್ತು ಹಿರಿಯ ವ್ಯವಸ್ಥಾಪಕ ಸುಮಂತ್ ಲಕ್ಷ್ಮೀನಾರಾಯಣ್ ವಿರುದ್ದ ಗ್ರಾಹಕರೊಬ್ಬರು ದೂರು ನೀಡಿದ್ದಾರೆ. ಕ್ರಿಮಿನಲ್ ಪಿತೂರಿ, ಸುಳ್ಳು ಮಾಹಿತಿ ಒದಗಿಸುವುದು, ಸಾಕ್ಷ್ಯಗಳನ್ನು ರೂಪಿಸುವುದು ಮತ್ತು ಕಲಬೆರಕೆ ಅಥವಾ ಹಾನಿಕಾರಕ ಆಹಾರವನ್ನು ಮಾರಾಟ ಮಾಡುವುದು ಸೇರಿದಂತೆ ಇತರ ಆರೋಪಗಳನ್ನು ಕೆಫೆ ವಿರುದ್ಧ ಹೊರಿಸಲಾಗಿದೆ.

ದೂರುದಾರ ನಿಖಿಲ್ ಜು.24ರಂದು ಟರ್ಮಿನಲ್ 1ರಲ್ಲಿ ಗುವಾಹಟಿಗೆ ತೆರಳಲು ತಯಾರಿ ನಡೆಸುತ್ತಿದ್ದಾಗ ಕೆಫೆಯ ವಿಮಾನ ನಿಲ್ದಾಣದ ಕೌಂಟರ್ನಲ್ಲಿ 'ಪೊಂಗಲ್' ಮತ್ತು ಫಿಲ್ಟರ್ ಕಾಫಿ ಆರ್ಡರ್ ಮಾಡಿದ್ದರು. ಪೊಂಗಲ್ ನಲ್ಲಿ ಹುಳ ಪತ್ತೆಯಾಗಿದೆ ಎಂದು ಹೇಳಿಕೊಂಡಿದ್ದರು. ಹೋಟೆಲ್ ಸಿಬ್ಬಂದಿಗೆ ತಕ್ಷಣ ಮಾಹಿತಿ ನೀಡಿದ್ದೆ ಅವರು ಬದಲಿ ಆಹಾರ ನೀಡುವುದಾಗಿ ತಿಳಿಸಿದರು. ಆದರೆ ಬೋರ್ಡಿಂಗ್ ಗೆ ಆತುರ ಇದ್ದುದರಿಂದ ನಿರಾಕರಿಸಿದ್ದೆ ಎಂದು ನಿಖಿಲ್ ಹೇಳಿದ್ದಾರೆ. ಇತರ ಗ್ರಾಹಕರು ಚಿತ್ರ, ವೀಡಿಯೊ ತೆಗೆದುಕೊಂಡಿದ್ದರು ಎಂದು ವರದಿಯಾಗಿದೆ. ನಿಖಿಲ್ ಯಾವುದೇ ಸಮಸ್ಯೆ ಉಂಟುಮಾಡದೆ ಸುಮ್ಮನೆ ಹೊರಟು ಹೋಗಿದ್ದರು. ಆದರೆ, ಆಹಾರದಲ್ಲಿ ಹುಳ ಸಿಕ್ಕಿರುವ ವೀಡಿಯೊ, ಚಿತ್ರಗಳು ಮರುದಿನ ವೈರಲ್ ಆಗಿದ್ದವು. ಇದರ ಬೆನ್ನಲ್ಲೇ ಹೋಟೆಲ್ ನವರು ನಿಖಿಲ್ ವಿರುದ್ದ ಬ್ರಾಂಡ್ ಹೆಸರಿಗೆ ಕಳಂಕ ತಂದಿರುವುದಾಗಿ ಬೆದರಿಕೆಯೊಡ್ಡಿ, 25 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಪೊಲೀಸ್ ದೂರು ದಾಖಲಿಸಿದ್ದರು.

ಕೆಫೆಯ ಆರೋಪಗಳ ಆಧಾರದ ಮೇಲೆ ಪೊಲೀಸರು ನಿಖಿಲ್ ಮತ್ತು ಅವರ ಸ್ನೇಹಿತರನ್ನು ವಿಚಾರಣೆಗೆ ಕರೆಸಿದ್ದರು. ಆದರೆ ನಿಖಿಲ್ ತಾನು ಎಂದಿಗೂ ಪರಿಹಾರ ಅಥವಾ ಮರುಪಾವತಿ ಕೇಳಿಲ್ಲ. ಕೆಫೆ ಮಾಡಿರುವ ಆರೋಪಗಳಿಗೂ ತನಗೂ ಸಂಬಂಧ ಇಲ್ಲ. ಆ ಹೊತ್ತಿನಲ್ಲಿ ವಿಮಾನದಲ್ಲಿದ್ದೆ ಎಂದು ದಾಖಲೆಗಳನ್ನು ತೋರಿಸಿದ್ದರು. ಹಾಗೆಯೇ ನಿಖಿಲ್ ಪ್ರತಿದೂರು ದಾಖಲಿಸಿ, ಈ ಘಟನೆಯನ್ನು 'ಗಂಭೀರ ಆಹಾರ ಸುರಕ್ಷತೆಯ ವೈಫಲ್ಯ' ಎಂದು ಉಲ್ಲೇಖಿಸಿದ್ದಾರೆ. ಅಲ್ಲದೆ, ಕೆಫೆಯು ತನ್ನ ವರ್ಚಸ್ಸಿಗೆ ಕಳಂಕ ತರುವ ಮತ್ತು ತನ್ನನ್ನು ಬೆದರಿಸುವ ಸಲುವಾಗಿ ಸುಳ್ಳು ಪ್ರಕರಣವನ್ನು ದಾಖಲಿಸಿದೆ ಎಂದು ಆರೋಪಿಸಿದ್ದಾರೆ.

Tags

FIRRameshwaram Cafe
share
ವಾರ್ತಾಭಾರತಿ
ವಾರ್ತಾಭಾರತಿ
Next Story
X