Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮೇ 16 ರಂದು ಬೆಂಗಳೂರಿನಲ್ಲಿ ಕರ್ನಾಟಕ...

ಮೇ 16 ರಂದು ಬೆಂಗಳೂರಿನಲ್ಲಿ ಕರ್ನಾಟಕ ಮುಸ್ಲಿಮ್ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ13 May 2026 2:17 PM IST
share
ಮೇ 16 ರಂದು ಬೆಂಗಳೂರಿನಲ್ಲಿ ಕರ್ನಾಟಕ ಮುಸ್ಲಿಮ್ ಸಮಾವೇಶ
ʼಕಾಂಗ್ರೆಸ್ ಸರಕಾರ ಹೇಳಿದ್ದೇನು ? ಮಾಡಿದ್ದೇನು? ಮುಂದೇನು?ʼ ವರದಿ ಬಿಡುಗಡೆ

ಬೆಂಗಳೂರು: ರಾಜ್ಯದ ಮುಸ್ಲಿಮ್ ಸಮುದಾಯದ ಕಲ್ಯಾಣಕ್ಕಾಗಿ ರಾಜ್ಯ ಸರಕಾರದ ಗಮನ ಸೆಳೆಯುವ ಉದ್ದೇಶದಿಂದ ಮೇ 16ರಂದು ಬೆಂಗಳೂರಿನ ಪುರಭವನ ಸಭಾಂಗಣದಲ್ಲಿ 'ಕರ್ನಾಟಕ ಮುಸ್ಲಿಮ್ ಸಮಾವೇಶ' ಏರ್ಪಡಿಸಲಾಗಿದ್ದು, ಅಂದೇ ಕಾಂಗ್ರೆಸ್ ಸರಕಾರ ಹೇಳಿದ್ದೇನು? ಮಾಡಿದ್ದೇನು? ಮುಂದೇನು? ಎಂಬ ವರದಿ ಬಿಡುಗಡೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಮುಸ್ಲಿಂ ಸಂಘಟನೆಗಳ ಒಕ್ಕೂಟ ತಿಳಿಸಿದೆ.

ಬುಧವಾರ ನಗರದ ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಸಮಾವೇಶದ ಸಂಚಾಲಕರಲ್ಲಿ ಒಬ್ಬರಾದ ಸುಹೇಲ್ ಅಹ್ಮದ್ ಮರೂರ್ ಅವರು, ಕಾಂಗ್ರೆಸ್ ಸರಕಾರದ ಮೂರು ವರ್ಷಗಳ ಕಾರ್ಯವೈಖರಿ ಮಾತ್ರವಲ್ಲದೆ ಅತ್ಯಂತ ಪ್ರಮುಖ ಹತ್ತು ವಿಷಯಗಳಲ್ಲಿ ಕಾಂಗ್ರೆಸ್ ಮುಸ್ಲಿಮರಿಗೆ ನೀಡಿದ್ದ ಭರವಸೆಗಳು, ಅದರಲ್ಲಿ ಈಡೇರಿದ್ದೆಷ್ಟು, ಈಡೇರದೇ ಇರುವ ಭರವಸೆಗಳು ಎಷ್ಟು ಎಂಬ ಪ್ರಶ್ನೆ ಸಮುದಾಯದಲ್ಲಿದೆ. ಕಾಂಗ್ರೆಸ್ ಸರಕಾರದಲ್ಲಿ ಪ್ರಾತಿನಿಧ್ಯದ ವಿಷಯದಲ್ಲಿ ಮುಸ್ಲಿಮರು ಎದುರಿಸಿದ ತಾರತಮ್ಯ ಹಾಗು ಈಗ ಸರಕಾರಕ್ಕೆ ನಮ್ಮ ಬೇಡಿಕೆಗಳ ಕುರಿತು ದನಿಗೂಡಿಸಲು ಮೇ.16ರಂದು ಸಮಾವೇಶ ಏರ್ಪಡಿಸಲಾಗಿದ್ದು, ಅಂದು ರಾಜ್ಯದ ವಿವಿಧೆಡೆಗಳ ಸಾಮುದಾಯಿಕ ಸಂಘಟನೆಗಳ ನಾಯಕರು, ಹಿರಿಯ ಉಲೇಮಾಗಳು, ಜಮಾಅತ್ ಗಳ ಮುಖಂಡರು, ವಕೀಲರು, ನಿವೃತ್ತ ಅಧಿಕಾರಿಗಳು, ಪತ್ರಕರ್ತರು, ಹೋರಾಟಗಾರರು ಗಳು ಭಾಗಲಿದ್ದಾರೆ ಎಂದರು.

ಪ್ರಮುಖವಾಗಿ ಹಿಜಾಬ್ ನಿರ್ಬಂಧ, ಮೀಸಲಾತಿ ರದ್ದತಿ, ದ್ವೇಷ ಭಾಷಣ - ದ್ವೇಷ ಅಪರಾಧ, ಬಜೆಟ್ ಹಂಚಿಕೆ, ರಾಜಕೀಯ ಪ್ರಾತಿನಿಧ್ಯ, ವಕ್ಫ್ ವಿಷಯ, ಗೋ ಹತ್ಯೆ ನಿಷೇಧ ಕಾಯ್ದೆ, ಮತಾಂತರ ನಿರ್ಬಂಧ ಕಾಯ್ದೆ, ವಿದ್ಯಾರ್ಥಿ ವೇತನ - ಶಿಕ್ಷಣ ಕ್ಷೇತ್ರದ ಅನುದಾನ ಸಹಿತ ವಿವಿಧ ವಿಷಯಗಳ ಕುರಿತ ವರದಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದರು.

ವೆಲ್ಫೇರ್ ಆಫ್ ಹ್ಯುಮಾನಿಟಿ ಫೌಂಡೇಶನ್ ಅಧ್ಯಕ್ಷ ಮೌಲಾನ ಶಬ್ಬೀರ್ ಅಹ್ಮದ್ ಹುಸೇನ್ ನದ್ವಿ ಮಾತನಾಡಿ, ಸಮಾವೇಶಕ್ಕೆ ಯಾವುದೇ ರಾಜಕಾರಣಿಗಳಿಗೆ ಆಹ್ವಾನ ಇರುವುದಿಲ್ಲ. ಜತೆಗೆ ಈ ಸಮಾವೇಶದ ಮೂಲಕ ಯಾರ ಜೊತೆಗೂ ಸಂಘರ್ಷದ ಉದ್ದೇಶ ಇಟ್ಟುಕೊಂಡಿಲ್ಲ. ಆದರೆ, ಮುಸ್ಲಿಮ್ ಸಮುದಾಯದ ಏಳಿಗೆಗೆ ರಾಜ್ಯ ಕಾಂಗ್ರೆಸ್ ಸರಕಾರ ಯಾವ ರೀತಿ ಕೆಲಸ ಮಾಡುತ್ತಿದೆ ಎಂದು ಕೇಳಬೇಕಾಗಿದೆ ಎಂದು ಹೇಳಿದರು.

ಬೆಂಗಳೂರಿನ ಬಿಲಾಲ್ ಮಸೀದಿಯ ಮೌಲಾನಾ ಖಾರಿ ಝುಲ್ಫಿಖರ್ ರಝಾ ನೂರಿ ಮಾತನಾಡಿ, ನಾವು ಯಾರನ್ನು ಟೀಕಿಸಿಸುವ ಹಾಗೂ ಗುರಿ ಮಾಡುವ ಸಲುವಾಗಿ ಈ ಸಮಾವೇಶ ನಡೆಸುತ್ತಿಲ್ಲ.ಆದರೆ, ರಾಜ್ಯದಲ್ಲಿ 1 ಕೋಟಿಗೂ ಅಧಿಕ ಜನಸಂಖ್ಯೆ ಇರುವ ಮುಸ್ಲಿಮರು ಪೂರ್ಣ ಪ್ರಮಾಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದರು. ಆದರೆ, ಆ ಸಮುದಾಯಕ್ಕೆ ಸೂಕ್ತ ನ್ಯಾಯ ಒದಗಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಇದನ್ನು ಪ್ರಶ್ನೆ ಮಾಡಬೇಕಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಮಿತಿ ಸಂಚಾಲಕರಾದ ತನ್ವೀರ್ ಅಹ್ಮದ್, ಯಹ್ಯಾ ದಾಮೂದಿ ಸೇರಿದಂತೆ ಉಲೇಮಾಗಳು,ಸಾಮಾಜಿಕ ಕಾರ್ಯಕರ್ತರು ಉಪಸ್ಥಿತರಿದ್ದರು.

Tags

Karnataka Muslim ConventionBengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X