Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ಬಿಎಂಟಿಸಿ ಬಸ್‌ಗಳಲ್ಲಿ...

Bengaluru | ಬಿಎಂಟಿಸಿ ಬಸ್‌ಗಳಲ್ಲಿ ದಿಢೀರ್ ಸಂಚರಿಸಿ ವ್ಯವಸ್ಥೆಯ ರಿಯಾಲಿಟಿ ಚೆಕ್‌ ನಡೆಸಿದ ಸಚಿವ ಬೈರತಿ ಸುರೇಶ್

ವಾರ್ತಾಭಾರತಿವಾರ್ತಾಭಾರತಿ12 July 2026 8:30 AM IST
share
Bengaluru | ಬಿಎಂಟಿಸಿ ಬಸ್‌ಗಳಲ್ಲಿ ದಿಢೀರ್ ಸಂಚರಿಸಿ ವ್ಯವಸ್ಥೆಯ ರಿಯಾಲಿಟಿ ಚೆಕ್‌ ನಡೆಸಿದ ಸಚಿವ ಬೈರತಿ ಸುರೇಶ್
►2 ಗಂಟೆಯಲ್ಲಿ 10ಕ್ಕೂ ಅಧಿಕ ಬಸ್‌ಗಳಲ್ಲಿ ಪ್ರಯಾಣ; ಮಾಸ್ಕ್ ಧರಿಸಿ ವ್ಯವಸ್ಥೆ ಪರಿಶೀಲನೆ ► ಚಿಲ್ಲರೆ ಇಲ್ಲದಿದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್ ►ಪ್ರಯಾಣಿಕರಿಗೆ ನಿಲ್ಲಿಸದ ಬಸ್ ಚಾಲಕ-ನಿರ್ವಾಹಕರ ಅಮಾನತಿಗೆ ಸೂಚನೆ

ಬೆಂಗಳೂರು: ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಶನಿವಾರ ರಾತ್ರಿ ಬಿಎಂಟಿಸಿ ಬಸ್‌ಗಳಲ್ಲಿ ದಿಢೀರ್ ಪ್ರಯಾಣ ನಡೆಸಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ರಿಯಾಲಿಟಿ ಚೆಕ್‌ ನಡೆಸಿದರು.

ರಾತ್ರಿ 7.10ರಿಂದ 9.10ರವರೆಗೆ ಜಯಮಹಲ್‌ನಿಂದ ಟಿವಿ ಟವರ್, ಟಿವಿ ಟವರ್‌ನಿಂದ ಆರ್.ಟಿ.ನಗರ, ಆರ್.ಟಿ.ನಗರದಿಂದ ಸಿಬಿಐ ರಸ್ತೆ, ಸಿಬಿಐ ಜಂಕ್ಷನ್‌ನಿಂದ ಮುಂದಿನ ನಿಲ್ದಾಣ, ಸಿಬಿಐ ಸ್ಟಾಪ್‌ನಿಂದ ಮಸೀದಿ ಸ್ಟಾಪ್, ಅಲ್ಲಿಂದ ಬಳ್ಳಾರಿ ಮುಖ್ಯರಸ್ತೆ, ಬಳಿಕ ಆಟೋದಲ್ಲಿ ಹೆಬ್ಬಾಳಕ್ಕೆ, ಹೆಬ್ಬಾಳದಿಂದ ಭೂಪಸಂದ್ರ, ಹೆಬ್ಬಾಳ ರಿಂಗ್ ರಸ್ತೆಯಿಂದ ಮಾನ್ಯತಾ ಟೆಕ್ ಪಾರ್ಕ್, ನಾಗವಾರ, ನಾಗವಾರದಿಂದ ಹೆಣ್ಣೂರು, ಹೆಣ್ಣೂರಿನಿಂದ ಹೆಣ್ಣೂರು ಬಂಡೆ, ಬಂಡೆಯಿಂದ ಬೈರತಿ ಬಂಡೆ ಹಾಗೂ ಬೈರತಿ ಬಂಡೆಯಿಂದ ಗೆದ್ಲಹಳ್ಳಿವರೆಗೆ 10ಕ್ಕೂ ಹೆಚ್ಚು ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸಿ ವ್ಯವಸ್ಥೆಯನ್ನು ಕಣ್ಣಾರೆ ಅವಲೋಕಿಸಿದರು.

ಮಾಸ್ಕ್ ಧರಿಸಿ ಪ್ರಯಾಣ ಮಾಡಿದ್ದರಿಂದ ಬಸ್‌ನಲ್ಲಿದ್ದ ಪ್ರಯಾಣಿಕರಿಗಾಗಲಿ, ಚಾಲಕ ಹಾಗೂ ಕಂಡಕ್ಟರ್‌ಗಾಗಲಿ ಇವರು ಸಚಿವರು ಎಂಬುದು ಗಮನಕ್ಕೆ ಬಂದಿರಲಿಲ್ಲ. ಪ್ರತಿಯೊಂದು ಬಸ್‌ಗೂ ನಿಗದಿತ ಹಣ ನೀಡಿ ಪ್ರಯಾಣಿಸಿದ ಸಚಿವರು, ಕೆಲವು ಪ್ರಯಾಣಿಕರೊಂದಿಗೆ ಬಸ್ ಸಂಚಾರದ ಕುರಿತು ಮಾಹಿತಿ ಪಡೆದು ಸಮಸ್ಯೆಗಳ ಬಗ್ಗೆ ವಿಚಾರಿಸಿದರು.

ಪ್ರಯಾಣಿಕರಿಗೆ ನಿಲ್ಲಿಸದ ಬಸ್; ಚಾಲಕ–ಕಂಡಕ್ಟರ್ ಅಮಾನತಿಗೆ ಸೂಚನೆ

ಜಯಮಹಲ್‌ನಿಂದ ಸಾಗುತ್ತಿದ್ದ ಕೆಎ 57 ಎಫ್ 3372 ಸಂಖ್ಯೆಯ ಬಸ್, ಫನ್ ವರ್ಲ್ಡ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ಕೈ ತೋರಿಸಿದರೂ ನಿಲ್ಲಿಸದೆ ಮುಂದುವರಿದಿತ್ತು. ಈ ವೇಳೆ ಹಿಂದಿನ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸಚಿವ ಬೈರತಿ ಸುರೇಶ್ ಅವರು, ಸದರಿ ಬಸ್‌ನ ಕಂಡಕ್ಟರ್ ದಯಾನಂದ್ ಹಾಗೂ ಚಾಲಕ ಮುಸ್ತಾಕ್ ಅವರನ್ನು ಅಮಾನತು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

30 ರೂಪಾಯಿ ಬದಲು 36 ರೂಪಾಯಿ ಕೇಳಿದ ಆಟೋ ಚಾಲಕ

ನಾಗಶೆಟ್ಟಿಯಲ್ಲಿ ಆಟೋ ಏರಿದ ಸಚಿವರು ಸುಮಾರು ಒಂದು ಕಿಲೋಮೀಟರ್ ಪ್ರಯಾಣಿಸಿ ಇಳಿದರು. ಈ ವೇಳೆ ಆಟೋ ಮೀಟರ್‌ನಲ್ಲಿ 30 ರೂಪಾಯಿ ತೋರಿಸಿದ್ದರೂ ಚಾಲಕ 36 ರೂಪಾಯಿ ನೀಡುವಂತೆ ಕೇಳಿದ. ಹೆಚ್ಚುವರಿ ಹಣ ಯಾಕೆ ಎಂದು ಸಚಿವರು ಪ್ರಶ್ನಿಸಿದಾಗ, ಮೀಟರ್ ಸರಿಪಡಿಸುವುದಾಗಿ ಚಾಲಕ ತಿಳಿಸಿದ. ಕೊನೆಗೆ ಸಚಿವರು 40 ರೂಪಾಯಿ ನೀಡಿ ಅಲ್ಲಿಂದ ತೆರಳಿದರು.

ಚಿಲ್ಲರೆ ಇಲ್ಲದಿದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್

ಹೆಬ್ಬಾಳದಿಂದ ನಾಗಶೆಟ್ಟಿಹಳ್ಳಿಗೆ ತೆರಳುವ ಬಸ್ ಹತ್ತಿದ ಸಚಿವ ಬೈರತಿ ಸುರೇಶ್ ಅವರು ಎರಡು ಟಿಕೆಟ್ ನೀಡುವಂತೆ ಕೇಳಿ 100 ರೂಪಾಯಿ ನೋಟು ನೀಡಿದರು. ಈ ವೇಳೆ ಕಂಡಕ್ಟರ್ ಚಿಲ್ಲರೆ ನೀಡುವಂತೆ ಕೇಳಿದ. ಸಚಿವರು ತಮ್ಮ ಬಳಿ ಚಿಲ್ಲರೆ ಇಲ್ಲ ಎಂದು ತಿಳಿಸಿದಾಗ, ತನ್ನ ಬಳಿಯೂ ಚಿಲ್ಲರೆ ಇಲ್ಲ ಎಂದು ಬ್ಯಾಗ್ ತೋರಿಸಿದ ಕಂಡಕ್ಟರ್, ಚಿಲ್ಲರೆ ಇಲ್ಲದಿದ್ದರೆ ಬಸ್‌ನಿಂದ ಕೆಳಗೆ ಇಳಿಯುವಂತೆ ಸೂಚಿಸಿದ್ದಾನೆ. ಇದಕ್ಕೆ ಮರುಮಾತನಾಡದೇ ಸಚಿವ ಬೈರತಿ ಸುರೇಶ್ ಬಸ್‌ನಿಂದ ಕೆಳಗಿಳಿದರು.

Tags

BengaluruBairati SureshBMTC buses
share
ವಾರ್ತಾಭಾರತಿ
ವಾರ್ತಾಭಾರತಿ
Next Story
X