Bengaluru | ನೂತನ ಸಿಎಂ ಪ್ರಮಾಣ ವಚನ: ನಗರದೆಲ್ಲೆಡೆ ರಾರಾಜಿಸುತ್ತಿರುವ ಕಟೌಟ್, ಫ್ಲೆಕ್ಸ್, ಬ್ಯಾನರ್ಗಳು

ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬೆಂಗಳೂರಿನಲ್ಲಿ ಭರ್ಜರಿ ಸಿದ್ಧತೆ ನಡೆದಿದ್ದು, ನಾಳೆ(ಜೂ.3) ಸಂಜೆ 4:05 ಗಂಟೆಗೆ ಲೋಕಭವನದಲ್ಲಿ ಸಿಎಂ, ಸಂಪುಟ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಆ ಹಿನ್ನೆಲೆಯಲ್ಲಿ ನಗರದಲ್ಲಿ ಫ್ಲೆಕ್ಸ್, ಬ್ಯಾನರ್ಗಳು ರಾರಾಜಿಸುತ್ತಿವೆ.
ಬೆಂಗಳೂರು ನಗರದ ಪ್ರಮುಖ ವೃತ್ತಗಳು, ಜನಸಂದಣಿ ಪ್ರದೇಶಗಳಲ್ಲಿ ದೊಡ್ಡ ದೊಡ್ಡ ಕಟೌಟ್ಗಳು, ಬ್ಯಾನರ್ಗಳು, ಫ್ಲೆಕ್ಸ್ ಗಳನ್ನು ಅಳವಡಿಸುತ್ತಿದ್ದು, ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳ ಮಹಾಪೂರವನ್ನೆ ಹರಿಸುತ್ತಿದ್ದಾರೆ. ‘ಫ್ಲೆಕ್ಸ್, ಬ್ಯಾನರ್ ಗಳ ಮೂಲಕ ಬೆಂಗಳೂರು ನಗರದ ಅಂದ ಕೆಡಿಸಬೇಡಿ’ ಎಂದು ಡಿ.ಕೆ.ಶಿವಕುಮಾರ್ ಹಲವು ಬಾರಿ ಮನವಿ ಮಾಡಿದರೂ, ಪಕ್ಷದ ಕಾರ್ಯಕರ್ತರು ತಲೆಕೆಡಿಸಿಕೊಂಡಿಲ್ಲ.
ಬೆಂಗಳೂರು, ಮೈಸೂರು, ರಾಮನಗರ ಸೇರಿದಂತೆ ರಾಜ್ಯದ ವಿವಿಧೆಡೆಗಳ್ಲಲಿನ ಪ್ರಮುಖ ಮುಖ್ಯರಸ್ತೆಗಳು ಹಾಗೂ ವೃತ್ತಗಳಲ್ಲಿ ಫ್ಲೆಕ್ಸ್ ಗಳು, ಕಟೌಟ್ಗಳು, ಬ್ಯಾನರ್ಗಳು ರಾರಾಜಿಸುತ್ತಿವೆ. ಸಣ್ಣ-ಪುಟ್ಟ ನಾಯಕರಿಂದ ಹಿಡಿದು ದೊಡ್ಡ ದೊಡ್ಡ ಮುಖಂಡರವರೆಗೆ ತಮ್ಮ ಭಾವಚಿತ್ರಗಳ ಸಹಿತ ಬ್ಯಾನರ್ ಗಳ ಮೂಲಕ ಶುಭಾಶಯ ಕೋರುತ್ತಿದ್ದಾರೆ.




