Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ಕೆಎಎಸ್ ನೇಮಕಾತಿ ಫಲಿತಾಂಶ...

Bengaluru | ಕೆಎಎಸ್ ನೇಮಕಾತಿ ಫಲಿತಾಂಶ ಪ್ರಕಟಿಸಲು ಒತ್ತಾಯಿಸಿ ಆಕಾಂಕ್ಷಿಗಳ ಧರಣಿ

ವಾರ್ತಾಭಾರತಿವಾರ್ತಾಭಾರತಿ4 Sept 2026 6:13 PM IST
share
Bengaluru | ಕೆಎಎಸ್ ನೇಮಕಾತಿ ಫಲಿತಾಂಶ ಪ್ರಕಟಿಸಲು ಒತ್ತಾಯಿಸಿ ಆಕಾಂಕ್ಷಿಗಳ ಧರಣಿ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ(ಕೆಪಿಎಸ್‍ಸಿ) ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಕೂಡಲೇ ಪ್ರಕಟಿಸಬೇಕು ಎಂದು ಕರ್ನಾಟಕ ಆಡಳಿತ ಸೇವೆ (ಕೆಎಎಸ್) ಆಕಾಂಕ್ಷಿಗಳು ಶುಕ್ರವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ಧರಣಿ ನಡೆಸಿದರು.

ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಆಕಾಂಕ್ಷಿ ಹಿತೇಶ್, ಈ ನೇಮಕಾತಿ ಅಧಿಸೂಚನೆ ಹೊರಡಿಸಿ ಮೂರು ವರ್ಷಗಳಾಗಿವೆ ಹಾಗೂ ಸಂದರ್ಶನ/ ವ್ಯಕ್ತಿತ್ವ ಪರೀಕ್ಷೆ ಮುಕ್ತಾಯಗೊಂಡು ಎರಡು ತಿಂಗಳು ಕಳೆದಿವೆ. ಮೀಸಲಾತಿ ನಿಯಮಾವಳಿ ವಿಚಾರವು ಹೈಕೋರ್ಟ್‍ನಲ್ಲಿದ್ದು, ನಿರಂತರ ಮುಂದೂಡಿಕೆಯಿಂದಾಗಿ ಸಾವಿರಾರು ಆಕಾಂಕ್ಷಿಗಳು ಹಾಗೂ ಅವರ ಕುಟುಂಬಗಳು ತೀವ್ರ ಮಾನಸಿಕ, ಆರ್ಥಿಕ ಮತ್ತು ಭವಿಷ್ಯದ ಆತಂಕವನ್ನು ಎದುರಿಸುತ್ತಿದ್ದಾರೆ ಎಂದರು.

ಆದುದರಿಂದ ರಾಜ್ಯ ಸರಕಾರ ಮಧ್ಯಪ್ರವೇಶಿಸಿ, ಯಾವುದೇ ಆಡಳಿತಾತ್ಮಕ ವಿಳಂಬವಿಲ್ಲದೆ ಕೆಎಎಸ್ 384 ಹುದ್ದೆಗಳ ಅಂತಿಮ ಆಯ್ಕೆ/ ಮೆರಿಟ್ ಪಟ್ಟಿಯನ್ನು ಕೆಪಿಎಸ್‍ಸಿ ಕೂಡಲೇ ಪ್ರಕಟಿಸಬೇಕು. ಅಡ್ವೊಕೇಟ್ ಜನರಲ್ ಮೂಲಕ ಹೈಕೋರ್ಟ್‍ನಲ್ಲಿ ತುರ್ತು ಅರ್ಜಿ ಸಲ್ಲಿಸಿ, ನ್ಯಾಯಾಲಯದ ಅನುಮತಿ ಅಥವಾ ನಿರ್ದೇಶನ ಪಡೆದು ಕೆಪಿಎಸ್‍ಸಿ ಮೂಲಕ ಕಾನೂನು ಚೌಕಟ್ಟಿನಲ್ಲಿ ಮೇನ್ಸ್ ಫಲಿತಾಂಶ ಹೊರಡಿಸಬೇಕು. ಮೀಸಲಾತಿ ಗೊಂದಲವಿರುವ ಸಂದರ್ಭಗಳಲ್ಲಿ ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಟ್ಟು ನೇಮಕಾತಿ ಮುಂದುವರಿಸುವ ಹೋಟಾ ಸಮಿತಿ ಮಾದರಿಯನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ನ್ಯಾಯಾಲಯದ ಅಂತಿಮ ತೀರ್ಪಿಗೆ ಬದ್ಧವಾಗಿರತಕ್ಕದ್ದು ಎಂಬ ಷರತ್ತಿನೊಂದಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಲು ಸಚಿವ ಸಂಪುಟ ನಿರ್ಧಾರ ಮಾಡಬೇಕು ಅಥವಾ ಸುಗ್ರೀವಾಜ್ಞೆ ಹೊರಡಿಸಬೇಕು. ಕಾಲಹರಣ ತಡೆಯಲು ಅಭ್ಯರ್ಥಿಗಳಿಗೆ ಶರತ್ತುಬದ್ಧ ಮುಚ್ಚಳಿಕೆ ಪಡೆದು ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯಂತಹ ಮುಂದಿನ ಪ್ರಕ್ರಿಯೆಗಳನ್ನು ನಡೆಸಬೇಕು. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕಾನೂನು ಇಲಾಖೆ ಹಾಗೂ ಕೆಪಿಎಸ್‍ಸಿ ಸಮನ್ವಯದೊಂದಿಗೆ ಈ ನೇಮಕಾತಿ ಪ್ರಕ್ರಿಯೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಹಿತೇಶ್ ಆಗ್ರಹಿಸಿದರು.

ಧರಣಿಯಲ್ಲಿ ಆಕಾಂಕ್ಷಿಗಳಾದ ಭಾಗ್ಯ, ಇಮಾಮ್ ಸಾಬ್, ಸ್ವರ್ಣ, ಸಿರಿ, ಗಂಗಾ ಸೇರಿದಂತೆ ನೂರಾರು ಅಭ್ಯರ್ಥಿಗಳು ಪಾಲ್ಗೊಂಡಿದ್ದರು.

Tags

BengaluruKASprotestrecruitmentresults
share
ವಾರ್ತಾಭಾರತಿ
ವಾರ್ತಾಭಾರತಿ
Next Story
X