Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕನ್ನಡವನ್ನು ಬೆಳೆಸಲು ಇರುವ ಅವಕಾಶಗಳನ್ನು...

ಕನ್ನಡವನ್ನು ಬೆಳೆಸಲು ಇರುವ ಅವಕಾಶಗಳನ್ನು ವೈದ್ಯರು ಬಳಸಿಕೊಳ್ಳಬೇಕು: ಪುರುಷೋತ್ತಮ ಬಿಳಿಮಲೆ

ವಾರ್ತಾಭಾರತಿವಾರ್ತಾಭಾರತಿ26 March 2025 8:07 PM IST
share
ಕನ್ನಡವನ್ನು ಬೆಳೆಸಲು ಇರುವ ಅವಕಾಶಗಳನ್ನು ವೈದ್ಯರು ಬಳಸಿಕೊಳ್ಳಬೇಕು: ಪುರುಷೋತ್ತಮ ಬಿಳಿಮಲೆ

ಬೆಂಗಳೂರು : ಕನ್ನಡವನ್ನು ಬೆಳೆಸಲು ಇರುವ ಅವಕಾಶಗಳನ್ನು ವೈದ್ಯರು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ.

ನಗರದ ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ವೈದ್ಯಕೀಯ ಕ್ಷೇತ್ರದಲ್ಲಿ ಕನ್ನಡವನ್ನು ಬಳಸುವ ಸಾಧ್ಯತೆ ಮತ್ತು ಅದರ ಇತಿಮಿತಿಗಳ ಬಗ್ಗೆ ಅರಿವಿದ್ದು, ಕಿದ್ವಾಯಿ ಆಸ್ಪತ್ರೆಯಂತಹ ಜಾಗತಿಕ ಪ್ರಸಿದ್ಧಿಯನ್ನು ಹೊಂದಿರುವ ಸಂಸ್ಥೆಯಲ್ಲಿ ಅಲ್ಲಿನ ವೈದ್ಯರಿಂದ ಭಾಷಾ ಮತಾಂಧತೆಯನ್ನು ನಿರೀಕ್ಷಿಸುವುದಿಲ್ಲ. ಆದರೂ ದಿನೇ ದಿನೇ ಬಳಕೆಯಲ್ಲಿ ಇಳಿಮುಖವಾಗುತ್ತಿರುವ ಕನ್ನಡ ಭಾಷೆಯನ್ನು ವೈದ್ಯಕೀಯ ಕ್ಷೇತ್ರದಲ್ಲಿ ಉಳಿಸುವ ಮತ್ತು ಬೆಳೆಸುವ ನಿಟ್ಟಿನಲ್ಲಿ ವೈದ್ಯರು ಇನ್ನಷ್ಟು ಪರಿಣಾಮಕಾರಿಯಾಗಿ ಆಲೋಚಿಸಬಹುದಾಗಿದೆ ಎಂದರು.

ಮುಂದಿನ 50 ವರ್ಷಗಳಲ್ಲಿ ಪ್ರಪಂಚದ ಶೇ.92ರಷ್ಟು ಜನರಿಗೆ ಇಂದು ಕೇವಲ ಶೇ.6ರಷ್ಟು ಜನರು ಬಳಸುತ್ತಿರುವ ಭಾಷೆಯನ್ನು ಮಾತನಾಡುವ ಅನಿವಾರ್ಯತೆ ಸೃಷ್ಟಿಯಾಗಲಿದೆ. ಇದು ಕನ್ನಡ ಭಾಷೆಯ ಭವಿಷ್ಯಕ್ಕೆ ಕಂಟಕವಾಗಲಿದೆ. ಹಾಗಾಗಿ ಕನ್ನಡವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲರ ಮೇಲಿದೆ ಎಂದು ತಿಳಿಸಿದರು.

ವೈದ್ಯಕೀಯ ಕ್ಷೇತ್ರದಲ್ಲಿ ಕನ್ನಡ ಜ್ಞಾನವನ್ನು ಹೆಚ್ಚಿಸಲು ನಾವು ಏನು ಮಾಡಬಹುದೆನ್ನುವ ಕುರಿತಂತೆ ಕಿದ್ವಾಯಿ ಸಂಸ್ಥೆಯು ಒಂದು ಪ್ರಸ್ತಾವವನ್ನು ಸಲ್ಲಿಸಿದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಅದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಿದೆ. ವೈದ್ಯಕೀಯ ಕ್ಷೇತ್ರದಲ್ಲಿ, ವಿಶೇಷವಾಗಿ ಕ್ಯಾನ್ಸರ್ ಕ್ಷೇತ್ರದಲ್ಲಿ ವಿಶ್ವದ ಶ್ರೇಷ್ಠ ಪುಸ್ತಕಗಳನ್ನು ಅನುವಾದಿಸುವ ಮೂಲಕ ಸಾಮಾನ್ಯ ಕನ್ನಡಿಗರಿಗೆ ಉಪಯುಕ್ತವಾಗಬಹುದು. ಈ ಕಾರ್ಯಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ನೈತಿಕ ಬೆಂಬಲ ನೀಡಲಿದೆ ಎಂದರು.

ಸಂಸ್ಥೆಯಲ್ಲಿ ಬಹುಪಾಲು ವೈದ್ಯರು ಕನ್ನಡಿಗರಾಗಿದ್ದು, ಶುಶ್ರೂಷಕಿಯರಲ್ಲಿ ಗಣನೀಯ ಸಂಖ್ಯೆಯ ಕನ್ನಡೇತರರು ಇದ್ದಾರೆ ಎಂಬ ಅಂಶವನ್ನು ಗಮನಿಸಿದ ಬಳಿಕ ಕನ್ನಡೇತರರಿಗೆ ಕನ್ನಡವನ್ನು ಕಲಿಸುವ ಪ್ರಯತ್ನಕ್ಕೆ ಕಿದ್ವಾಯಿ ಆಸ್ಪತ್ರೆ ಮುಂದಾಗಬೇಕಿದೆ. ಈ ನಿಟ್ಟಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಹಾಯ ನೀಡಲು ಸಿದ್ಧವಿದೆ. ಕಿದ್ವಾಯಿ ಆಸ್ಪತ್ರೆಯಲ್ಲಿ ಕನ್ನಡಿಗರ ಹಿತರಕ್ಷಣೆ ಮಾಡಲು ಕನ್ನಡ ಘಟಕವನ್ನು ಆರಂಭಿಸಬೇಕು. ಪ್ರತಿ ವರ್ಷ ರಾಜ್ಯೋತ್ಸವ ಕಾರ್ಯಕ್ರಮ ನಡೆಸಲು ಮುಂದಾಗಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಡಾ.ವಿ.ಪಿ.ನಿರಂಜನಾರಾಧ್ಯ, ಕಾರ್ಯದರ್ಶಿ ಡಾ.ಸಂತೋಷ ಹಾನಗಲ್ಲ, ಅಧ್ಯಕ್ಷರ ಆಪ್ತಕಾರ್ಯದರ್ಶಿ ಟಿ.ಎಸ್. ಫಣಿಕುಮಾರ್, ಕಿದ್ವಾಯಿ ಸಂಸ್ಥೆಯ ನಿರ್ದೇಶಕ ಡಾ. ನವೀನ್.ಟಿ, ಮೆಡಿಕಲ್ ಅಂಕಾಲಜಿ ವಿಭಾಗದ ಮುಖ್ಯಸ್ಥ ಡಾ.ಸುರೇಶ್ ಬಾಬು, ರೇಡಿಯಾಲಜಿ ವಿಭಾಗದ ಮುಖ್ಯಸ್ಥ ಡಾ. ಮಧು ಎಸ್.ಡಿ., ಹಿರಿಯ ವೈದ್ಯಾಧಿಕಾರಿ ಡಾ. ಮಹಂತೇಶ್ ಎ.ಎನ್, ಡಾ.ಸಿ.ಎ.ಕಿಶೋರ್ ಮತ್ತಿತರರು ಹಾಜರಿದ್ದರು.

ಡಾ.ವಿಜಯಲಕ್ಷ್ಮಿ ದೇಶಮಾನೆ ಹೆಸರಿಡಿ: ಸಂಸ್ಥೆಯ ಆವರಣದಲ್ಲಿರುವ ಹಲವು ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಶೇ.60ರ ಪ್ರಾತಿನಿಧ್ಯ ನೀಡಿಲ್ಲವೆಂಬ ಅಂಶವನ್ನು ಅವಲೋಕಿಸಿ ಈ ಕುರಿತು ಕೂಡಲೇ ಕ್ರಮಕ್ಕೆ ಮುಂದಾಗಬೇಕು. ಸಂಸ್ಥೆಯ ಕಟ್ಟಡ ಸಂಕೀರ್ಣಗಳು, ರಸ್ತೆಗಳಿಗೆ ನಾಡಿನ ಖ್ಯಾತ ವೈದ್ಯರು, ಕನ್ನಡ ಸಾಹಿತಿಗಳ ಹೆಸರುಗಳನ್ನು ಇಡಬೇಕು. ಇತ್ತೀಚಿಗಷ್ಟೇ ಕಲಬುರಗಿಯ ಕ್ಯಾನ್ಸರ್ ತಜ್ಞೆ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಕೇಂದ್ರದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿದ್ದು, ಸಂಸ್ಥೆಯ ಯಾವುದಾದರೂ ಪ್ರಮುಖ ಸಂಕೀರ್ಣಕ್ಕೆ ಅವರ ಹೆಸರನ್ನು ಇಡಬಹುದಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X