Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದಲಿತ ನಾಯಕರ ಬೆಳವಣಿಗೆಯನ್ನು ಬಿಜೆಪಿಗೆ...

ದಲಿತ ನಾಯಕರ ಬೆಳವಣಿಗೆಯನ್ನು ಬಿಜೆಪಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ: ಮಧು ಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ29 Aug 2026 3:19 PM IST
share
ದಲಿತ ನಾಯಕರ ಬೆಳವಣಿಗೆಯನ್ನು ಬಿಜೆಪಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ: ಮಧು ಬಂಗಾರಪ್ಪ

ಬೆಂಗಳೂರು, ಆ.29: ಅನಗತ್ಯ ಆರೋಪದ ಕಾರಣದಿಂದ ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂದರ್ಭದಲ್ಲಿ ಹಾಕಿದ ಕಣ್ಣೀರು ರಾಜ್ಯದಲ್ಲಿ ಬಿಜೆಪಿಯನ್ನು ನಾಶ ಮಾಡಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಬೆಂಗಳೂರಿನ ಗೃಹ ಕಚೇರಿಯಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ವಾಲ್ಮೀಕಿ ಅಭಿವೃದ್ಧಿ ನಿಗಮದ ವಿಚಾರದಲ್ಲಿ ಪ್ರತಿಪಕ್ಷ ಬಿಜೆಪಿ ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡುತ್ತಿದ್ದು, ದಲಿತ ಹಾಗೂ ಪರಿಶಿಷ್ಟ ಜಾತಿಯ ನಾಯಕ, ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬಿ.ನಾಗೇಂದ್ರರ ವಿರುದ್ಧ ರಾಜಕೀಯ ದುರುದ್ದೇಶದಿಂದ ಆರೋಪಗಳನ್ನು ಮಾಡಲಾಗುತ್ತಿದೆ. ಇದಕ್ಕೆ ಬಿಜೆಪಿ ತಕ್ಕೆ ಬೆಲೆಯನ್ನು ತೆರಬೇಕಾಗುತ್ತದೆ”ಎಂದು ಎಚ್ಚರಿಸಿದರು.

“ರಾಜಕಾರಣದಲ್ಲಿ ನಾಗೇಂದ್ರ ನನಗಿಂತ ಹಿರಿಯರು. ದಲಿತ ಮತ್ತು ಪರಿಶಿಷ್ಟ ಜಾತಿಯ ನಾಯಕರು ರಾಜಕೀಯವಾಗಿ ಬೆಳೆಯುತ್ತಿರುವುದು ಬಿಜೆಪಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸತ್ಯಕ್ಕೆ ದೂರವಾದ ಆರೋಪಗಳನ್ನು ಅವರ ಮೇಲೆ ಮಾಡಲಾಗುತ್ತಿದೆ”ಎಂದು ಆರೋಪಿಸಿದರು.

“ನಾಗೇಂದ್ರ ನಿರಪರಾಧಿ. ತನಿಖಾ ವರದಿಗಳನ್ನು ಪರಿಶೀಲಿಸಿ, ಚರ್ಚಿಸಿದ ಬಳಿಕ ಅವರ ಮೇಲಿನ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂಬುದು ನಮಗೆ ತಿಳಿದಿದೆ. ನಾಲ್ಕು ಬಾರಿ ಗೆದ್ದಿರುವ ಒಬ್ಬ ದಲಿತ ನಾಯಕನ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ ನಾಗೇಂದ್ರರಿಗೆ ಮಾತ್ರವಲ್ಲ, ತಳ ಸಮುದಾಯಗಳಿಗೂ ನೋವುಂಟು ಮಾಡಿದೆ”ಎಂದರು.

ಆರ್.ಅಶೋಕ್ ಸಿಬಿಐ ಅಧಿಕಾರಿಯೇ?

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ನಾಗೇಂದ್ರ ವಿಚಾರದಲ್ಲಿ ಮಾಡುತ್ತಿರುವ ಆರೋಪಗಳಿಗೆ ಪ್ರತಿಕ್ರಿಯಿಸಿದ ಸಚಿವರು, “ಆರ್.ಅಶೋಕ್ ಅವರು ನಾಗೇಂದ್ರ ವಿಚಾರದಲ್ಲಿ ವಾದ ಮಾಡಲು ಸಿಬಿಐ ಅಧಿಕಾರಿಯೇ? ತನಿಖಾ ಸಂಸ್ಥೆಗಳು ತಮ್ಮ ಕೆಲಸ ಮಾಡುತ್ತವೆ. ಮುಂದೊಂದು ದಿನ ಅಶೋಕ್ ಅವರ ಬುಡಕ್ಕೂ ಯಾವುದಾದರೂ ವಿಷಯ ಬಂದಾಗ ಬಿಜೆಪಿಯ ಬಣ್ಣ ಏನೆಂಬುದು ಅವರಿಗೆ ತಿಳಿಯುತ್ತದೆ”ಎಂದು ತಿರುಗೇಟು ನೀಡಿದರು.

ನಾಗೇಂದ್ರರ ರಾಜೀನಾಮೆ ವಿಚಾರದಲ್ಲಿ ಬಿಜೆಪಿ ನಾಯಕರು ಸಂಭ್ರಮಿಸುತ್ತಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. “ಇವರಷ್ಟು ಸಾಚಾಗಳು ಬೇರೆ ಯಾರೂ ಇಲ್ಲ ಎಂಬ ರೀತಿಯಲ್ಲಿ ಬಿಜೆಪಿ ನಾಯಕರು ವರ್ತಿಸುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಕಲಿ ಸಹಿ ವಿಚಾರವನ್ನು ಮರೆತಿದ್ದಾರೆಯೇ?” ಎಂದು ಪ್ರಶ್ನಿಸಿದರು.

ಮೊದಲು ಕುಮಾರಸ್ವಾಮಿ ವಿರುದ್ಧ ಪಾದಯಾತ್ರೆ ಮಾಡಲಿ

ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿಚಾರವಾಗಿಯೂ ಸಚಿವರು ವಾಗ್ದಾಳಿ ನಡೆಸಿ, “ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಮೂರು ವರ್ಷಗಳಾದರೂ ರಾಜ್ಯಪಾಲರು ಅನುಮತಿ ನೀಡಿಲ್ಲ. ಈಗ ಅವರು ನಿಮ್ಮ ಜೊತೆ ಮೈತ್ರಿಯಲ್ಲಿದ್ದಾರೆ ಎಂಬ ಕಾರಣಕ್ಕೆ ಅವರಿಗೆ ವಿನಾಯಿತಿಯೇ? ಅವರಿಗೆ ಒಂದು ನ್ಯಾಯ, ನಮಗೆ ಒಂದು ನ್ಯಾಯವೇ? ಮೊದಲು ಬಿಜೆಪಿ-ಜೆಡಿಎಸ್ ನಾಯಕರು ಕುಮಾರಸ್ವಾಮಿ ವಿರುದ್ಧ ಪಾದಯಾತ್ರೆ ಮಾಡಲಿ” ಎಂದು ವ್ಯಂಗ್ಯವಾಡಿದರು.

ಸದನದಲ್ಲಿ ಚರ್ಚೆಗೆ ಅವಕಾಶವಿದ್ದರೂ ವಿಪಕ್ಷಗಳು ಅಡ್ಡಿಪಡಿಸಿದವು

ಮುಂಗಾರು ಅಧಿವೇಶನದಲ್ಲಿ ನಾಗೇಂದ್ರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ನೋಟಿಸ್ ನೀಡಿದ್ದರೆ ಸರ್ಕಾರ ಚರ್ಚೆಗೆ ಸಿದ್ಧವಿತ್ತು. ಆದರೆ, ಸೂಕ್ತ ಚರ್ಚೆಗೆ ಬಾರದೆ ಕೇವಲ ರಾಜಕೀಯ ದುರುದ್ದೇಶದಿಂದ ಸದನದ ಕಲಾಪಕ್ಕೆ ಅಡ್ಡಿಪಡಿಸಲಾಗಿದೆ ಎಂದು ಮಧು ಬಂಗಾರಪ್ಪ ಆರೋಪಿಸಿದರು.

“ನೋಟಿಸ್ ನೀಡಿ, ಸೂಕ್ತ ಚರ್ಚೆ ನಡೆಸಿ ಎಂದು ಸರ್ಕಾರವೇ ಆಹ್ವಾನ ನೀಡಿತ್ತು. ಆದರೆ ವಿಪಕ್ಷಗಳು ಚರ್ಚೆಗೆ ಬರದೆ ಸದನದ ಸಮಯವನ್ನು ಹಾಳು ಮಾಡಿದರು. ಬರಗಾಲ, ಕಾವೇರಿ ನೀರಿನ ಸಮಸ್ಯೆ, ಕಸ್ತೂರಿ ರಂಗನ್ ವರದಿ ಸೇರಿದಂತೆ ರಾಜ್ಯದ ಹಲವಾರು ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅವಕಾಶವಿತ್ತು. ಆದರೆ ಇಲ್ಲದ ವಿಷಯವನ್ನು ಮುಂದಿಟ್ಟುಕೊಂಡು ಸದನದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಿದರು” ಎಂದವರು ಅಸಮಾಧಾನ ವ್ಯಕ್ತಪಡಿಸಿದರು.

Tags

BJPDalit LeadersMadhu Bangarappa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X