Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಿಜೆಪಿ, ಜೆಡಿಎಸ್ ಮೈತ್ರಿಯನ್ನು ದೇಶದ...

ಬಿಜೆಪಿ, ಜೆಡಿಎಸ್ ಮೈತ್ರಿಯನ್ನು ದೇಶದ ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಸೋಲಿಸಬೇಕು : ದಸಂಸ ಐಕ್ಯ ಹೋರಾಟ ಚಾಲನ ಸಮಿತಿ

ವಾರ್ತಾಭಾರತಿವಾರ್ತಾಭಾರತಿ8 April 2024 9:22 PM IST
share

ಬೆಂಗಳೂರು: ಶೋಷಿತ ಸಮುದಾಯಗಳ ಮೇಲೆ ದಮನಕಾರಿ ನೀತಿ ಅನುಸರಿಸುತ್ತಿರುವ, ಬಿಜೆಪಿ, ಜೆಡಿಎಸ್ ಮೈತ್ರಿಯನ್ನು ದೇಶದ ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಲೋಕಸಭೆ ಚುನಾವಣೆಯಲ್ಲಿ ಸೋಲಿಸಬೇಕು ಎಂದು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನ ಸಮಿತಿ ಕರೆ ನೀಡಿದೆ.

ಸೊಮವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಚಾಲಕ ಮಾವಳ್ಳಿ ಶಂಕರ್, ಭ್ರಷ್ಟಾಚಾರದ ವಿರುದ್ಧ ಭಾರತ ಎಂದು ಘೋಷಿಸಿದ್ದ ಪ್ರಧಾನಿ ಮೋದಿ ನಾನು ತಿನ್ನುವುದಿಲ್ಲ. ತಿನ್ನುವವರಿಗೆ ಬಿಡುವುದಿಲ್ಲ ಎಂದು ಹೇಳಿದ್ದರು. ಆದರೆ ಚುನಾವಣಾ ಬಾಂಡ್ ಹೆಸರಿನಲ್ಲಿ ಭ್ರಷ್ಟಾಚಾರವನ್ನು ಕಾನೂನು ರೂಪಗೊಳಿಸಿ ಬಿಜೆಪಿ ದೊಡ್ಡ ಹಗರಣ ಮಾಡಿದೆ. 10 ವರ್ಷಗಳ ಮೋದಿ ಆಡಳಿತದಲ್ಲಿ ದೇಶದ ಅಭಿವೃದ್ಧಿಯಾಗಿಲ್ಲ. ಕೇವಲ ಸುಳ್ಳು ಹೇಳುವುದರಲ್ಲೇ ಕಾಲ ಕಳೆದಿದ್ದಾರೆ ಎಂದು ಆರೋಪಿಸಿದರು.

ಶ್ರೀಮಂತವಾಗಿದ್ದ ರಾಜ್ಯದ ವಿಜಯಾ ಬ್ಯಾಂಕ್‍ನ್ನು ಗುಜರಾತ್‍ನ ಬ್ಯಾಂಕ್ ಆಫ್ ಬರೋಡದೊಂದಿಗೆ ವಿಲೀನಗೊಳಿಸಿ ಬ್ಯಾಂಕ್ ರಾಷ್ಟ್ರೀಕರಣವನ್ನು ಮೂಲೆಗುಂಪು ಮಾಡಿದರು. ಸಂವಿಧಾನದ ಆಶಯಗಳಾದ ಸಮಾಜವಾದಿ, ಜಾತ್ಯಾತೀತ ನಿಲುವುಗಳ ಆಧಾರದಲ್ಲೆ ದೇಶ ಮುನ್ನಡೆಯಬೇಕು. ಆದರೆ ಬಿಜೆಪಿ ಅದರ ವಿರುದ್ಧ ನಡೆಯುತ್ತಿದೆ. ಗೋಲ್ವಾಲ್ಕರ್ ಚಿಂತನೆಯಾದ ದೇಶದಲ್ಲಿ ಅರಾಕತೆ ಇರಬೇಕು. ಬಡವರು ಬಡವರಾಗಿಯೇ ಇರಬೇಕು ಎನ್ನುವುದನ್ನು ಬಿಜೆಪಿ ಮುಂದುವರಿಸುತ್ತಿದೆ. ಅದಕ್ಕಾಗಿ ಯುವಜನರು ದೇಶದ ಅಭಿವೃದ್ಧಿಯ ಚರಿತ್ರೆಯನ್ನು ಅರಿತುಕೊಂಡು ಮತ ಚಲಾಯಿಸಬೇಕು ಎಂದು ಸಲಹೆ ನೀಡಿದರು.

ಹೋರಾಟಗಾರ ಗುರುಪ್ರಸಾದ್ ಕೆರೆಗೋಡು ಮಾತನಾಡಿ, ದೇಶದಲ್ಲಿ 10ವರ್ಷಗಳಿಂದ ಫ್ಯಾಸಿಸ್ಟ್ ಸರಕಾರ ನಡೆಯುತ್ತಿದೆ. ಅದರಲ್ಲಿ ಬ್ರಾಹ್ಮಣಶಾಹಿ ಮತ್ತು ಬಂಡವಾಳಶಾಹಿಗಳು ಸೇರಿಕೊಂಡಿದ್ದು, ಭ್ರಮೆಯಲ್ಲಿ ಭಾರತವನ್ನು ನಡೆಸಲಾಗುತ್ತಿದೆ. ಮೋದಿ ಅವರು 10ವರ್ಷದಿಂದ ಆಡಳಿತ ನಡೆಸಿದ್ದಾರೆ. ಆದರೆ ಈಗ ಮುಂದಿನ 5ವರ್ಷದ ನೀಲನಕ್ಷೆ ತಯಾರಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಹಾಗಾದರೆ 10ವರ್ಷದ ಅಭಿವೃದ್ಧಿ ಏನು? ಎಂದು ಪ್ರಶ್ನಿಸಿದರು.

ಭಾರತ ಒಕ್ಕೂಟ ವ್ಯವಸ್ಥೆಯನ್ನು ಉಳಿಸಿಕೊಳ್ಳಲು ಲೋಕಸಭೆ ಚುನಾವಣೆ ಕೊನೆಯ ಅವಕಾಶವಾಗಿದೆ. ಮತ್ತೆ ಬಿಜೆಪಿ ಗೆದ್ದರೆ ಆರೆಸ್ಸೆಸ್ 100 ವರ್ಷದ ದಾವಂತದಲ್ಲಿರುವುದರಿಂದ ಹಿಂದುತ್ವ ರಾಷ್ಟ್ರ ಘೋಷಿಸುವ ಸಂಚು ರೂಪಿಸಲಾಗುತ್ತದೆ. ಅದಕ್ಕಾಗಿ ಭಾರತವನ್ನು ಉಳಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ರಾಜಕೀಯ ಜನಜಾಗೃತಿಗಾಗಿ ದಸಂಸ ಆಂದೋಲನದ ಕರಪತ್ರ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಎಂ.ಸೋಮಶೇಖರ್, ಜೀವನಹಳ್ಳಿ ಆರ್.ವೆಂಕಟೇಶ್, ಎನ್.ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.

ʼಭಾರತ ಹಿಮ್ಮುಖ ಚಲನೆಯಲ್ಲಿದೆ. ಎಲ್ಲ ಸಮುದಾಯಗಳನ್ನು ಮುಖ್ಯವಾಹಿನಿಗೆ ತರಲು ಕೆಲಸ ಮಾಡಬೇಕು. ಆದರೆ ಮೋದಿ ಅಧಿಕಾರದಲ್ಲಿ ವ್ಯತಿರಿಕ್ತವಾಗಿದೆ. ಸಮುದಾಯಗಳ ನಡುವೆ ಕಂದಕ ಸೃಷ್ಠಿ, ಬೆಲೆ ಏರಿಕೆ, ತೆರಿಗೆ ಹೆಸರಲ್ಲಿ ಸುಲಿಗೆ, ಅಭಿವೃದ್ಧಿ ಕೆಲಸಗಳು ಕುಂಠಿತವಾಗಿವೆ. ಆದರೆ ಬಂಡವಾಳಶಾಹಿಗಳ ಬೆಳವಣಿಗೆಯಾಗಿದೆ. ಸಂವಿಧಾನವನ್ನು ನಾಶ ಮಾಡುವ ಕೆಲಸ ನಡೆಯುತ್ತಿದೆ. ಸಂವಿಧಾನ ನಾಶವಾದರೆ ದೇಶ ಉಳಿಯುವುದಿಲ್ಲ. ಬಿಜೆಪಿಯು ದೇಶದ ಸೌಹಾರ್ದವನ್ನು ನಾಶ ಮಾಡಿ, ವೈದಿಕ ಸಾಮ್ರಾಜ್ಯ ಸ್ಥಾಪಿಸುವ ಹುನ್ನಾರ ಮಾಡುತ್ತಿದೆ. ಅದಕ್ಕಾಗಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ ‘ಇಂಡಿಯಾ’ ಒಕ್ಕೂಟವನ್ನು ಗೆಲ್ಲಿಸಬೇಕಾಗಿದೆ’

ಇಂದೂಧರ ಹೊನ್ನಾಪುರ, ಹಿರಿಯ ಪತ್ರಕರ್ತ


share
ವಾರ್ತಾಭಾರತಿ
ವಾರ್ತಾಭಾರತಿ
Next Story
X