Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಾಮಾಜಿಕ ನ್ಯಾಯ ನೀಡುವ ಸರಕಾರವನ್ನು...

ಸಾಮಾಜಿಕ ನ್ಯಾಯ ನೀಡುವ ಸರಕಾರವನ್ನು ಬೆಂಬಲಿಸಿ : ಬಿ.ಕೆ.ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ11 Sept 2026 6:20 PM IST
share
ಸಾಮಾಜಿಕ ನ್ಯಾಯ ನೀಡುವ ಸರಕಾರವನ್ನು ಬೆಂಬಲಿಸಿ : ಬಿ.ಕೆ.ಹರಿಪ್ರಸಾದ್

ಬೆಂಗಳೂರು : ‘ನಮ್ಮ ಮಕ್ಕಳಿಗೆ ಶಿಕ್ಷಣ, ಆಸ್ಪತ್ರೆ, ಸಾಮಾಜಿಕ ನ್ಯಾಯ ನೀಡುವ ಸರಕಾರಕ್ಕೆ ನೀವು ಶಕ್ತಿ ನೀಡಬೇಕು. ಸಣ್ಣ ಸಮುದಾಯ ಎಂದು ಭಾವಿಸಬೇಡಿ. ನಿಮ್ಮ ಮತ ವಿರುದ್ಧವಾಗಿ ಬಿದ್ದರೆ ಯಾರೂ ಗೆಲ್ಲಲು ಆಗುವುದಿಲ್ಲ. ಹೀಗಾಗಿ ನಿಮ್ಮ ಸಮುದಾಯಕ್ಕೆ ಒಳ್ಳೆಯದು ಮಾಡುವವರಿಗೆ ಮತ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಮನವಿ ಮಾಡಿದ್ದಾರೆ.

ಶುಕ್ರವಾರ ಇಲ್ಲಿನ ಭಾರತ ಜೋಡೋ ಭವನದಲ್ಲಿ ‘ಕೆಪಿಸಿಸಿ ಅಲೆಮಾರಿ, ಅರೆ ಅಲೆಮಾರಿ, ವಿಮುಕ್ತ ಬುಡಕಟ್ಟು ಘಟಕ’ದ ನೂತನ ಉದ್ಘಾಟನೆ ಮತ್ತು ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಲೆಮಾರಿ ಸಮುದಾಯಕ್ಕೆ ಸೇರಿದವರು. ಅವರಿಗೆ ಇರುವ ಶಕ್ತಿ ನಿಮಗೂ(ಅಲೆಮಾರಿ ಸಮುದಾಯಗಳಿಗೂ)ಇದೆ ಎಂದರು.

ಪ್ರಜಾಪ್ರಭುತ್ವ ಇಲ್ಲದೆ ನಾವು ಯಾರೂ ಇಲ್ಲ. ಆಫ್ರಿಕಾದಲ್ಲಿ ಅಲೆಮಾರಿ, ಬುಡಕಟ್ಟು ಜನರನ್ನು ಗುಲಾಮರನ್ನಾಗಿ ಬಳಸುತ್ತಾರೆ. ಇಲ್ಲೂ ಪ್ರಜಾಪ್ರಭುತ್ವ ವ್ಯವಸ್ಥೆ ಇಲ್ಲ ಎಂದರೆ ಗುಲಾಮರನ್ನಾಗಿ ಬಳಸಿಕೊಳ್ಳುತ್ತಾರೆ. ಹೀಗಾಗಿ ಮತ ಹಾಕುವಾಗ ಪ್ರಜ್ಞಾವಂತರಾಗಿ ಮತ ಹಾಕಿ. ಲಂಬಾಣಿ ಸಮುದಾಯದ ರುದ್ರಪ್ಪ ಲಮಾಣಿ ಮಂತ್ರಿಯಾಗಿದ್ದಾರೆ. ಅವರು ಮಂತ್ರಿಯಾಗಲು 3 ವರ್ಷ ಬೇಕಾಯಿತು. ನಿಮ್ಮ ಪರವಾಗಿ ನಿಲ್ಲುವವರಿಗೆ ನೀವು ಬೆಂಬಲ ನೀಡಬೇಕು ಎಂದು ಹರಿಪ್ರಸಾದ್ ಮನವಿ ಮಾಡಿದರು.

ಈ ನೆಲದ ಯಜಮಾನರು ಎಂದರೆ ಆದಿವಾಸಿಗಳು, ಬುಡಕಟ್ಟು ಹಾಗೂ ದಲಿತರು. ಕಾರಣ, ಈ ದೇಶದ ಮೂಲನಿವಾಸಿಗಳು ನೀವು. ನೀವು ಬಂದ ಬಳಿಕ ಬೇರೆಯವರು ಬಂದಿದ್ದಾರೆ. ಈ ದೇಶದ ನಾಯಕತ್ವ, ಮಾಲಕತ್ವ ನಿಮ್ಮ ಕೈಯಲ್ಲಿ ಇರಬೇಕಿತ್ತು. ಆದರೆ ಬೇರೆ ಯಾರೋ ಆಳುತ್ತಿದ್ದರೆ. ಎಲ್ಲರಿಗೂ ಸಮಾನ ಹಕ್ಕು, ಸಮಬಾಳು, ಸಮಪಾಲು ಎಂಬುದು ಸ್ವಾತಂತ್ರ್ಯದ ಆಶಯವಾಗಿತ್ತು. ನಮಗೆ ರಾಜಕೀಯ ಸ್ವಾತಂತ್ರ್ಯ ಸಿಕ್ಕಿದ್ದರೂ ಸಾಮಾಜಿಕ-ಆರ್ಥಿಕ ಸ್ವಾತಂತ್ರ್ಯ ಸಿಕ್ಕಿಲ್ಲ. ಬುಡಕಟ್ಟು, ಅಲೆಮಾರಿ, ಬುಡಕಟ್ಟಿನವರು ಸ್ವಂತ ಕಾಲಿನ ಮೇಲೆ ನಿಲ್ಲಬೇಕು ಎಂದು ಅವರು ನುಡಿದರು.

ನಿಮ್ಮ ಕಲೆ ಅಂತಾರಾಷ್ಟ್ರೀಯ ಮಟ್ಟದ ಕಲೆಗಿಂತ ಕಡಿಮೆ ಏನಿಲ್ಲ. ದೇಶದ ಅಲೆಮಾರಿ, ಬುಡಕಟ್ಟು ಜನರನ್ನು ನೋಡಿದ್ದೇನೆ. ಜಾರ್ಖಂಡ್‌ ನಲ್ಲಿ ಘೋಂಡ್ ಸಮುದಾಯದಲ್ಲಿ ಲಿಪಿ, ಸಾಂಸ್ಕೃ ತಿಕ ಚಟುವಟಿಕೆ ಇದೆ. ಗುಜರಾತಿನಲ್ಲಿ ಸಿದ್ಧಿ ಸಮುದಾಯದ ನೃತ್ಯ ಪ್ರಪಂಚದಲ್ಲೇ ಪ್ರಸಿದ್ಧ. ನಿಮ್ಮ ಕಲೆಯನ್ನು ನೀವು ಹೊರ ದೇಶದಲ್ಲಿ ಹೋಗಿ ಪ್ರದರ್ಶನ ಮಾಡಬೇಕು. ನಮ್ಮ ದೇಶದಲ್ಲಿ ರಾಜಕೀಯದ ಜತೆಗೆ ಸಾಮಾಜಿಕ-ಆರ್ಥಿಕ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ಸ್ವಾಭಿಮಾನವಾಗಿ ಬದುಕಬಹುದು ಎಂದು ಗಾಂಧೀಜಿ, ಅಂಬೇಡ್ಕರ್ ಹಾಗೂ ನೆಹರೂ ಅವರು ಹೇಳಿದ್ದಾರೆ ಎಂದರು.

ಸೋನಿಯಾ ಗಾಂಧಿ ಅವರು ಅರಣ್ಯ ಹಕ್ಕು ಕಾಯ್ದೆ ತಂದು ನಿಮಗೆ ಹಕ್ಕು ಕೊಡಿಸಿದ್ದಾರೆ. ಮಕ್ಕಳು ಹಸಿವಿನಿಂದ ಮಲಗಬಾರದು ಎಂದು ಆಹಾರ ಭದ್ರತಾ ಕಾಯ್ದೆ ತಂದಿದ್ದು ಮನಮೋಹನ್ ಸಿಂಗ್. ಅವರು ಕಾಯ್ದೆ ಜಾರಿಗೆ ಬಂದ ನಂತರ ಬೇರೆ ಬೇರೆ ನಾಯಕರು ಈ ಯೋಜನೆಗೆ ತಮ್ಮ ಫೋಟೋ ಹಾಕಿಕೊಳ್ಳುತ್ತಾರೆ. ನಮ್ಮ ಪಕ್ಷ ಇಂತಹ ಕಾರ್ಯಕ್ರಮಗಳನ್ನು ನೀಡುತ್ತಲೇ ಇರುತ್ತದೆ. ಕಾಂಗ್ರೆಸ್ ಪಕ್ಷದ ಬಾಗಿಲು ಸದಾ ತೆರಿದಿರುತ್ತದೆ. ನಿಮ್ಮ ಕಾರ್ಯಕ್ರಮಕ್ಕೆ ನಾವು ಈ ವೇದಿಕೆಯನ್ನು ಉಚಿತವಾಗಿ ನೀಡುತ್ತೇವೆ. ಎ.ಯಲ್ಲಪ್ಪ ಅವರು ಅಲೆಮಾರಿ ಹಾಗೂ ಅಲೆ ಅರೆಮಾರಿ ಘಟಕದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದು ಅವರಿಗೆ ಶುಭವಾಗಲಿ ಎಂದು ಅವರು ಕೋರಿದರು.

ಈ ವೇಳೆ ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್, ರಾಜ್ಯಸಭಾ ಮಾಜಿ ಸದಸ್ಯ ಡಾ.ಎಲ್. ಹನುಮಂತಯ್ಯ, ಅಲೆಮಾರಿ ಹಾಗೂ ಅಲೆ ಅರೆಮಾರಿ ಘಟಕದ ನೂತನ ಅಧ್ಯಕ್ಷ ಎ.ಯಲ್ಲಪ್ಪ, ಶಾಸಕ ಮಂಜುನಾಥ್, ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್ ಸೇರಿದಂತೆ ಮತ್ತಿತರರು ಹಾಜರಿದ್ದರು.

Tags

BK Hariprasad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X