Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಲೇಖಕರನ್ನು ‘ಅರ್ಬನ್ ನಕ್ಸಲ್’ ಎಂದು...

ಲೇಖಕರನ್ನು ‘ಅರ್ಬನ್ ನಕ್ಸಲ್’ ಎಂದು ದೂರುವುದು ಕಾನೂನು ಬಾಹಿರ : ಸಾಹಿತಿಗಳ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ27 Jan 2025 11:40 PM IST
share

ಬೆಂಗಳೂರು : ಚರ್ಚೆಗೆ ಅರ್ಹವಾದ ಬರಹವನ್ನು ಬರೆದ ಯಾರೆ ಒಬ್ಬ ಲೇಖಕರನ್ನು ‘ಅರ್ಬನ್ ನಕ್ಸಲ್, ದೇಶದ್ರೋಹಿ’ ಎಂದು ದೂರುವುದು ಮತ್ತು ಅವರನ್ನು ದೇಶ ಬಿಟ್ಟು ತೊಲಗಿಸಿ ಎಂದು ಬೆದರಿಸುವುದು ಕಾನೂನು ಬಾಹಿರ ಎಂದು ಪ್ರಗತಿಪರ ಲೇಖಕರು ಹೇಳಿದ್ದಾರೆ.

ಸೋಮವಾರ ಈ ಸಂಬಂಧ ಶಿಕ್ಷಣ ತಜ್ಞ ಡಾ.ಜಿ.ರಾಮಕೃಷ್ಣ, ಹಿರಿಯ ಸಾಹಿತಿ ಡಾ.ಕೆ.ಮರುಳಸಿದ್ಧಪ್ಪ, ಲೇಖಕ ಪ್ರೊ.ಎಸ್.ಜಿ.ಸಿದ್ಧರಾಮಯ್ಯ, ವಿಮರ್ಶಕ ಡಾ.ರಾಜೇಂದ್ರ ಚೆನ್ನಿ, ಹೊಸತು ಪತ್ರಿಕೆ ಸಂಪಾದಕ ಡಾ. ಸಿದ್ಧನಗೌಡ ಪಾಟೀಲ, ಸಾಹಿತಿ ಪ್ರೊ.ಕಾಳೇಗೌಡ ನಾಗವಾರ, ರಾಜ್ಯಸಭಾ ಮಾಜಿ ಸದಸ್ಯ ಡಾ.ಎಲ್. ಹನುಮಂತಯ್ಯ, ಸಂಸ್ಕೃತಿ ಚಿಂತಕ ಡಾ.ಬಂಜಗೆರೆ ಜಯಪ್ರಕಾಶ, ಪ್ರೊ.ಅಗ್ರಹಾರ ಕೃಷ್ಣಮೂರ್ತಿ, ಶ್ರೀಪಾದ ಭಟ್ ಬಿ., ಪ್ರೊ.ಎಲ್.ಎನ್.ಮುಕುಂದರಾಜ, ಡಾ.ವಸುಂಧರಾ ಭೂಪತಿ, ಸಬಿತಾ ಬನ್ನಾಡಿ, ರಘುನಂದನ, ಬಿ.ಯು.ಸುಮಾ ಸೇರಿದಂತೆ ಹಲವು ಲೇಖಕರು ಜಂಟಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಡಾ.ರಾಮಲಿಂಗಪ್ಪ ಟಿ.ಬೇಗೂರು ಅವರ ‘ರಾಷ್ಟ್ರೀಯತೆಯ ಆಚರಣೆಯ ಸುತ್ತ’ ಎಂಬ ಲೇಖನವನ್ನು ಕರ್ನಾಟಕ ವಿವಿ ಬಿಎ ಮತ್ತು ಇತರ ಪದವಿಗಳ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನಿಂದ ಪಠ್ಯವಾಗಿ ಅಳವಡಿಸಲಾಗಿತ್ತು. ಆದರೆ ಕೆಲವು ಬಿಜೆಪಿ ಮತ್ತು ಎಬಿವಿಪಿ ನಾಯಕರ ಮತ್ತು ಕಾರ್ಯಕರ್ತರ ಪ್ರತಿಭಟನೆಯ ಮೇರೆಗೆ ಅದನ್ನು ಹಿಂಪಡೆಯಲಾಗಿದೆ. ವಿವಿಯಲ್ಲಿ ಅದನ್ನು ಪಠ್ಯ ಮಾಡಬೇಕೆ ಬೇಡವೆ ಎಂಬುದು ವಿವಿಯ ಸ್ವಾಯತ್ತತೆಗೆ ಬಿಟ್ಟ ವಿಚಾರ. ಆದರೆ ಲೇಖಕರ ವಿಚಾರವನ್ನು ವಿರೋಧಿಸುವ ಬದಲು ಲೇಖಕರನ್ನು, ಸಂಪಾದಕರನ್ನು ಅವಮಾನಿಸುವುದು ಸರಿಯಾದುದಲ್ಲ ಎಂದು ಅವರುಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ಮಾಡಿದವರು ಮತ್ತು ಮಾಧ್ಯಮದ ಕೆಲವರು ಆಯ್ದ ಪದ ಮತ್ತು ವಾಕ್ಯಗಳನ್ನು ತಮ್ಮ ಮೂಗಿನ ನೇರಕ್ಕೆ ಅರ್ಥೈಸುವ ಕೆಲಸ ಮಾಡಿದ್ದಾರೆ. ಆ ಮೂಲಕ ವಿವಿಯನ್ನು, ಸಂಪಾದಕರನ್ನು ಮತ್ತು ಲೇಖಕರನ್ನು ದೇಶದ್ರೋಹಿಗಳು ಎಂದು ಆರೋಪಿಸಿದ್ದಾರೆ. ರಾಮಲಿಂಗಪ್ಪನವರ ಬರಹ ವೈಯಕ್ತಿಕವಾಗಿ ಯಾರೊಬ್ಬರನ್ನೂ ನಿಂದಿಸುವುದಿಲ್ಲ. ದೇಶಕ್ಕೆ ಅವಮಾನವನ್ನೂ ಮಾಡುವುದಿಲ್ಲ. ನಮ್ಮಲ್ಲಿ ಆಚಾರದಲ್ಲಿರುವ ರಾಷ್ಟ್ರೀಯತೆಯ ವಿವಿಧ ಆಯಾಮಗಳನ್ನು ಅಲ್ಲಿ ಚರ್ಚೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಯಾವುದೆ ಲೇಖಕರ ಅಭಿಪ್ರಾಯ ಬೇರೆ ಬೇರೆ ರೀತಿಯ ಚರ್ಚೆಗಳಿಗೆ ದಾರಿ ಮಾಡಿಕೊಟ್ಟಲ್ಲಿ ಅಂಥದ್ದನ್ನು ವಿಚಾರದ ನೆಲೆಯಲ್ಲಿ ಯಾರೇ ವಿರೋಧಿಸಿ ಪ್ರತಿವಾದ ಹೂಡಲಿ. ಸಾರ್ವಜನಿಕವಾಗಿ ಸೌಹಾರ್ದಯುತವಾಗಿ ಚರ್ಚೆ ಮಾಡಲಿ. ಆದರೆ ಅದಕ್ಕೆ ಬಂದಿರುವ ಮೀಡಿಯಾ ಪ್ರತಿಕ್ರಿಯೆಗಳನ್ನು ನೋಡಿದಾಗ ಅಲ್ಲಿ ಲೇಖಕರ ಮಾನಹರಣ ಮತ್ತು ತೇಜೋವಧೆ ಎದ್ದು ಕಾಣುತ್ತದೆ. ಅವರನ್ನು ಅಪರಾಧಿಯನ್ನಾಗಿ ಬಿಂಬಿಸುವ ಯತ್ನ ಕಾಣುತ್ತದೆ. ಪಕ್ಷ ರಾಜಕೀಯಕ್ಕೆ ವಿದ್ವತ್ ಬರಹವನ್ನು ಸೀಮಿತ ಮಾಡುವ ಮತ್ತು ವೋಟ್ ಬ್ಯಾಂಕ್ ರಾಜಕಾರಣ ಮಾಡುವ ಹುನ್ನಾರ ಕಾಣುತ್ತದೆ ಎಂದು ಹೇಳಿದ್ದಾರೆ.

ಠ್ಯಾಗೋರ್, ಕುವೆಂಪು, ಭಗತ್‍ಸಿಂಗ್ ಹೀಗೆ ಹಲವಾರು ಮಂದಿ ಕಾಲಕಾಲಕ್ಕೆ ರಾಷ್ಟ್ರೀಯತೆಯನ್ನು ಕುರಿತು ವಿಮರ್ಶಾತ್ಮಕವಾಗಿ ಬರೆದಿದ್ದಾರೆ. ಲೇಖಕರ ಮನೋಸ್ಥೈರ್ಯವನ್ನು ಕುಂದಿಸುವ ಕೆಲಸ, ನಿರ್ದಿಷ್ಟ ಕೋಮು ಮತ್ತು ಗುಂಪಿನವರ ಸಿದ್ಧಾಂತಕ್ಕೆ ಅನುಗುಣವಾಗಿಯೆ ಬರೆಯಿರಿ ಮತ್ತು ಬದುಕಿರಿ ಎಂದು ಫರ್ಮಾನು ಹೊರಡಿಸುವ ಕೆಲಸ ಸಂವಿಧಾನ ವಿರೋಧಿ ಆದುದು. ಇದನ್ನು ನಾವೆಲ್ಲ ಖಂಡಿಸುತ್ತೇವೆ. ಹಾಗೆಯೆ ಲೇಖಕರಿಗೆ ಕೋಮುವಾದಿಗಳಿಂದ ಸೂಕ್ತ ರಕ್ಷಣೆ ಒದಗಿಸಬೇಕೆಂದು ಲೇಖಕರು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X