Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹಳ್ಳ ಹಿಡಿದಿರುವ ಗ್ಯಾರಂಟಿಗಳನ್ನು...

ಹಳ್ಳ ಹಿಡಿದಿರುವ ಗ್ಯಾರಂಟಿಗಳನ್ನು ಸರಿದಾರಿಗೆ ತನ್ನಿ: ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ5 Feb 2024 7:14 PM IST
share
ಹಳ್ಳ ಹಿಡಿದಿರುವ ಗ್ಯಾರಂಟಿಗಳನ್ನು ಸರಿದಾರಿಗೆ ತನ್ನಿ: ಕುಮಾರಸ್ವಾಮಿ

ಬೆಂಗಳೂರು: ‘ಹಳ್ಳ ಹಿಡಿದಿರುವ ನಿಮ್ಮ ಗ್ಯಾರಂಟಿಗಳನ್ನು ಸರಿದಾರಿಗೆ ತನ್ನಿ. ಅವುಗಳ ವೈಫಲ್ಯವನ್ನು ಪರಾಮರ್ಶೆ ಮಾಡಿ. ಅಧಿಕಾರಿಗಳ ಕಿವಿ ಹಿಂಡಿ ಕೆಲಸ ಮಾಡಿಸಿ. ನಿಮಗೆ ಆತ್ಮಸಾಕ್ಷಿ ಎನ್ನುವುದು ಇದ್ದರೆ ಮೊದಲು ಈ ಕೆಲಸ ಮಾಡಿ. ಅನ್ನಕ್ಕಾಗಿ ಜೀವತೆತ್ತ ಯುವಕನ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಆ ತಾಯಿಯ ಆರೋಗ್ಯ ಸುಧಾರಿಸಲಿ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಸೋಮವಾರ ಎಕ್ಸ್ ನಲ್ಲಿ ಊಟವಿಲ್ಲದ ಯುವಕ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸರಣಿ ಪೋಸ್ಟ್ ಹಾಕಿರುವ ಅವರು, ‘ಅನ್ನಭಾಗ್ಯ, ಗೃಹಲಕ್ಷ್ಮಿ ಹೆಸರಿನಲ್ಲಿ ಲೋಕೋದ್ಧಾರ ಮಾಡಿದ್ದೇವೆ ಎಂದು ಸುಳ್ಳುಲೆಕ್ಕ ಕೊಟ್ಟು ಜನರ ತೆರಿಗೆ ಹಣದಲ್ಲಿ ಪುಕ್ಕಟೆ ಪ್ರಚಾರ ಪಡೆಯುತ್ತಿರುವ ನಿಮ್ಮ ಲೊಳಲೊಟ್ಟೆ ಬಯಲಾಗಿದೆ ಸಿದ್ದರಾಮಯ್ಯನವರೆ. ನುಡಿದಂತೆ ನಡೆದಿದ್ದೇವೆ ಎಂದರೆ ಇದೇನಾ ಮುಖ್ಯಮಂತ್ರಿಗಳೇ? ಎಂದು ಪ್ರಶ್ನಿಸಿದ್ದಾರೆ.

‘ಅಧಿಕಾರದ ಮದವೇರಿ ಮಂಪರು ಬಿದ್ದಿರುವ ನಿಮ್ಮ ಕಂಗಳು ಆ ನತದೃಷ್ಟನ ಪ್ರಾಣಾರ್ಪಣೆಯಿಂದಲಾದರೂ ತೆರೆದುಕೊಳ್ಳಲಿ. ಇಲ್ಲವಾದರೆ, ಆ ಯುವಕನ ಸಾವಿನ ಶಾಪ ನಿಮಗೆ ತಟ್ಟದೇ ಬಿಡದು. ಎಲ್ಲಿದ್ದಾಳೆ ನಿಮ್ಮ ಗೃಹಲಕ್ಷ್ಮಿ? ಯಾರಿಗೆ ಸಿಕ್ಕಿದೆ ನಿಮ್ಮ ಅನ್ನಭಾಗ್ಯ? ನಾಚಿಕೆ, ಸಂಕೋಚ ಎನ್ನುವುದಿಲ್ಲವೇ? ಇದ್ದರೆ ಈ ಧಾರುಣಕ್ಕೆ ರಾಜ್ಯ ಸಾಕ್ಷಿಯಾಗುತ್ತಿತ್ತಾ?’ ಎಂದು ಹೇಳಿದ್ದಾರೆ.

‘ದುಡಿದು ತಾಯಿಯನ್ನು ಸಲಹಬೇಕೆಂದು ಕನಸು ಕಟ್ಟಿಕೊಂಡು ಹೊರಟ ಹಾವೇರಿ ಜಿಲ್ಲೆ ಯಲಗಚ್ಚು ಗ್ರಾಮದ ಬಸವರಾಜ ವೆಂಕಟ ಎಂಬ ಯುವಕನ ಆತ್ಮಾಹುತಿ ಆಘಾತಕಾರಿ. ನಿಮ್ಮ ಪ್ರಚಾರಪ್ರಿಯ, ಖೊಟ್ಟಿ ಗ್ಯಾರಂಟಿಗಳ ಸರಕಾರದ ಆತ್ಮಸಾಕ್ಷಿಗೆ ಎದುರಾದ ದೊಡ್ಡ ಸವಾಲು. ಟಿಕೆಟ್ ಇಲ್ಲದೆ ರೈಲಿನಿಂದ ಹೊರದಬ್ಬಿಸಿಕೊಂಡ ಈತ, ಧಾರವಾಡ ಆಳ್ನಾವರದಲ್ಲಿ ಹೆತ್ತಮ್ಮಗೆ ಅನ್ನ ಅರಸುತ್ತಾ, ದುಡಿಮೆ ಹುಡುಕುತ್ತಾ ಹೊರಟ. ಎಲ್ಲಿಯೂ ಅವಕಾಶ ಸಿಗದೆ ಕೈಚೆಲ್ಲಿ ನೇಣಿಗೆ ಕೊರಳು ಒಡ್ಡಿದ್ದಾನೆ. ಮೂರು ನಾಲ್ಕು ದಿನ ತಾಯಿ-ಮಗ ಇಬ್ಬರೂ ಅನ್ನಕ್ಕಾಗಿ ಪರಿತಪಿಸಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

‘ಈ ತಾಯಿಯ ಕುಟುಂಬಕ್ಕೆ ಅನ್ನಭಾಗ್ಯ ಏಕೆ ತಲುಪಿಲ್ಲ? ಗೃಹಲಕ್ಷ್ಮಿ ಅವರ ಮನೆ ಬಾಗಿಲಿಗೆ ಹೋಗಿಲ್ಲವೇಕೆ? ಇದಕ್ಕೆ ನೀವೇ ಹೊಣೆ ಸಿದ್ದರಾಮಯ್ಯನವರೇ. 15ನೆ ಬಜೆಟ್ ಮಂಡಿಸುವ ಉಮೇದಿನಲ್ಲಿರುವ ನೀವು ಈ ‘ಸತ್ತ ಸರಕಾರದ ಸಾಹುಕಾರನಷ್ಟೇ. ನಿಮ್ಮ ಸೋಗಲಾಡಿ ಸಮಾಜವಾದ ಬೆತ್ತಲಾಗಿದೆ. ಅನ್ನಕ್ಕಾಗಿ ಸಂಭವಿಸಿದ ಈ ಆತ್ಮಹತ್ಯೆ ಇಡೀ ನಾಡಿಗೇ ಕಪ್ಪುಚುಕ್ಕೆ. ಸ್ವತಃ ನೀವೇ ಈ ಯುವಕನ ಸಾವಿಗೆ ಕಾರಣ ಮತ್ತು ನೇರ ಹೊಣೆ. ರಾಜ್ಯಕ್ಕೆ ನೀವೇ ಸಮಜಾಯಿಷಿ ಕೊಡಬೇಕು ಹಾಗೂ ಶಾಂತವ್ವನಿಗೆ ತಕ್ಷಣವೇ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X