Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅಮಾವಾಸ್ಯೆ, ಹುಣ್ಣಿಮೆ, ಗ್ರಹಣಗಳಿಂದ...

ಅಮಾವಾಸ್ಯೆ, ಹುಣ್ಣಿಮೆ, ಗ್ರಹಣಗಳಿಂದ ಸಮಸ್ಯೆ ಆಗುವುದಿಲ್ಲ: ಬಿ.ಟಿ.ಲಲಿತಾ ನಾಯಕ್

‘ಗ್ರಹಣ ಸಮಯದಲ್ಲೇ ತಿಂಡಿ-ತಿನಿಸು ಸೇವಿಸಿ ಪ್ರತಿಭಟನೆ’

ವಾರ್ತಾಭಾರತಿವಾರ್ತಾಭಾರತಿ29 March 2025 9:33 PM IST
share
ಅಮಾವಾಸ್ಯೆ, ಹುಣ್ಣಿಮೆ, ಗ್ರಹಣಗಳಿಂದ ಸಮಸ್ಯೆ ಆಗುವುದಿಲ್ಲ: ಬಿ.ಟಿ.ಲಲಿತಾ ನಾಯಕ್

ಬೆಂಗಳೂರು : ಅಮಾವಾಸ್ಯೆ, ಹುಣ್ಣಿಮೆ, ಗ್ರಹಣಗಳೆಲ್ಲವೂ ಸೌರವ್ಯೂಹದಲ್ಲಿ ನಡೆಯುವ ಪ್ರಕೃತಿಯ ಚಲನೆಗಳು. ಇದರಿಂದ ಯಾರಿಗೂ ಸಮಸ್ಯೆ ಆಗುವುದಿಲ್ಲ ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ತಿಳಿಸಿದ್ದಾರೆ.

ಶನಿವಾರ ನಗರದ ಪುರಭವನದ ಮುಂಭಾಗದಲ್ಲಿ ‘ಸೂರ್ಯ ಗ್ರಹಣ’ದ ಪ್ರಯುಕ್ತ ಜನರಲ್ಲಿರುವ ಮೌಢ್ಯ, ಮೂಢನಂಬಿಕೆಗಳನ್ನು ಹೋಗಲಾಡಿಸುವ ಸಲುವಾಗಿ ‘ಮೂಢನಂಬಿಕೆ ವಿರೋಧಿ ಒಕ್ಕೂಟದ’ ವತಿಯಿಂದ ನಡೆದ ‘ವೈಜ್ಞಾನಿಕ ಮನೋಧರ್ಮದೊಂದಿಗೆ ಸೂರ್ಯಗ್ರಹಣ’ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಅಮಾವಾಸ್ಯೆ, ಹುಣ್ಣಿಮೆ, ಗ್ರಹಣದ ದಿನಗಳಲ್ಲಿ ಮನೆಯಿಂದ ಹೊರಗೆ ಹೋಗಬಾರದೆನ್ನುವ ಕಟ್ಟಲೆಗಳನ್ನು ಹಾಕಿಕೊಂಡು, ಶಾಸ್ತ್ರಗಳನ್ನು ಸೃಷ್ಟಿಮಾಡಿ ಅವುಗಳನ್ನು ಪಾಲಿಸಿದಿದ್ದರೆ ಒಳಿತಾಗುವುದಿಲ್ಲ ಎನ್ನುವ ಭೀತಿಯನ್ನು ಜನರಲ್ಲಿ ಹುಟ್ಟಿಸಲಾಗಿದೆ. ಜನರು ಸ್ವತಂತ್ರವಾಗಿ ಚಿಂತಿಸಲು ಸಾಧ್ಯವಾಗದ ರೀತಿಯಲ್ಲಿ ಪುರೋಹಿತಶಾಹಿಗಳು, ಜ್ಯೋತಿಷ್ಯರು ಮಾಡಿದ್ದಾರೆ. ಇಂದು ಸಮಾಜದಲ್ಲಿ ಮೌಢ್ಯ, ಮೂಢನಂಬಿಕೆಗಳು ಎಗ್ಗಿಲ್ಲದಂತೆ ಹರಡುತ್ತಿವೆ. ಅಂತಹ ಮೌಢ್ಯವನ್ನು ಬಿತ್ತುವವರ ವಿರುದ್ಧ ನಿರಂತರ ಹೋರಾಟ ಮಾಡಬೇಕು. ಜನರಿಗೆ ವೈಜ್ಞಾನಿಕತೆಯ ಅರಿವು ಮೂಡಿಸಬೇಕು ಎಂದು ಲಲಿತಾ ನಾಯಕ್ ತಿಳಿಸಿದರು.

ವಕೀಲ ನರಸಿಂಹಮೂರ್ತಿ ಮಾತನಾಡಿ, ಕೋಟ್ಯಾಂತರ ವರ್ಷಗಳಿಂದ ಗ್ರಹಣಗಳು ನಡೆಯುತ್ತಿವೆ. ಇದೆಲ್ಲವೂ ಪ್ರಕೃತಿಯ ನಿಯಮ. ಗ್ರಹಣದಿಂದ ಜನರಿಗೆ ಯಾವ ತೊಂದರೆಯೂ ಇಲ್ಲ. ಆದರೂ, ಜನ ಭಯಭೀತರಾಗಿ ಬದುಕುತ್ತಿದ್ದಾರೆ. ಜ್ಯೋತಿಷ್ಯರು ಗ್ರಹಣ ಸಂದರ್ಭದಲ್ಲಿ ಊಟ, ನೀರು ಸೇವಿಸಬಾರದು, ಮನೆಯಿಂದ ಹೊರಬಾರದು ಎನ್ನುವ ಮೌಢ್ಯವನ್ನು ಜನರಲ್ಲಿ ಬಿತ್ತಿರುವುದು ಸಂವಿಧಾನ ವಿರೋಧಿಯಾಗಿದೆ ಎಂದು ಖಂಡಿಸಿದರು.

ಕಾರ್ಯಕ್ರಮದಲ್ಲಿ ಪ್ರಕೃತಿಯಲ್ಲಿ ಸಹಜವಾಗಿ ನಡೆಯುವ ಪ್ರಕ್ರಿಯೆಗಳಿಗೆ ಸಮಾಜದಲ್ಲಿ ಮೂಢನಂಬಿಕೆಯನ್ನು ಬಿತ್ತಿರುವುದನ್ನು ವಿರೋಧಿಸಿ, ವೆಜಿಟೆಬಲ್ ಪಲಾವ್, ಒಬ್ಬಟ್ಟು, ಸಮೋಸ, ಹಣ್ಣುಗಳು, ಬಿಸ್ಕೇಟ್ ಮತ್ತು ಇನ್ನಿತರ ತಿಂಡಿ-ತಿನಿಸುಗಳನ್ನು ತಿನ್ನುತ್ತಾ ‘ನಮ್ಮ ನಡಿಗೆ ವಿಜ್ಞಾನದೆಡೆಗೆ, ಮೌಢ್ಯ ತೊಳಗಲಿ-ವಿಜ್ಞಾನ ಬೆಳಗಲಿ’ ಎಂದು ಘೋಷಣೆಗಳನ್ನು ಕೂಗಲಾಯಿತು.

ಇದೇ ವೇಳೆಯಲ್ಲಿ ನಟ ಚೇತನ್ ಅಹಿಂಸಾ, ವಿಚಾರವಾದಿ ಟ್ರಸ್ಟ್ ಕಾರ್ಯದರ್ಶಿ ನಾಗೇಶ್ ಅರಳಕುಪ್ಪೆ, ಮಹಿಳಾ ಹೋರಾಟಗಾರ್ತಿ ಗೌರಿ, ಕರ್ನಾಟಕ ಜನಶಕ್ತಿ ಗೌರವಾಧ್ಯಕ್ಷ ಪ್ರೊ.ನಗರಗೆರೆ ರಮೇಶ್, ಜನಶಕ್ತಿ ಸಂಘಟನೆಯ ರವಿ ಮೋಹನ್, ಮಲ್ಲು ಕುಂಬಾರ್, ಬಾಬು ಸೇರಿದಂತೆ ಹಲವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X