ಸ್ಮಾರ್ಟ್ ಸಿಟಿ ಯೋಜನೆ ಅವ್ಯವಹಾರಗಳ ಬಗ್ಗೆ ಯಾವುದೇ ದೂರಿಲ್ಲ: ಬೈರತಿ ಸುರೇಶ್

ಬೆಂಗಳೂರು : ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಭಾಗಿತ್ವದ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅವ್ಯವಹಾರಗಳ ಕುರಿತು ಯಾವುದೇ ದೂರುಗಳು ದಾಖಲಾಗಿರುವುದಿಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.
ಮಂಗಳವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಎಂ.ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅವ್ಯವಹಾರಗಳು ನಡೆದಿರುವ ಬಗ್ಗೆ ಇಲ್ಲಿಯವರೆಗೂ ಯಾವುದೇ ದೂರುಗಳು ದಾಖಲಾಗಿರುವುದಿಲ್ಲ. ದೂರುಗಳನ್ನು ಬಂದಲ್ಲಿ ಪರಿಶೀಲಿಸಿ ವರದಿಯನ್ನು ನೀಡಲು ಈಗಾಗಲೇ ಸಮಿತಿಯನ್ನು ಸಹ ರಚಿಸಲಾಗಿದೆ ಎಂದರು.
ಸ್ಮಾರ್ಟ್ ಸಿಟಿ ಅಭಿಯಾನದಡಿ ರಾಜ್ಯದ 7 ನಗರಗಳಾದ ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಶಿವಮೊಗ್ಗ, ತುಮಕೂರು ಮತ್ತು ಬೆಂಗಳೂರು ನಗರಗಳು ಆಯ್ಕೆಯಾಗಿವೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಇಲ್ಲಿಯವರೆಗೂ ಬಿಡುಗಡೆಯಾದ 6,854 ಕೋಟಿ ರೂ. ಅನುದಾನದಲ್ಲಿ 6472 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ ಎಂದು ಬೈರತಿ ಸುರೇಶ್ ಹೇಳಿದರು.
Next Story





