Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೇಂದ್ರ ಸರಕಾರ ಅಲ್ಪಸಂಖ್ಯಾತರ...

ಕೇಂದ್ರ ಸರಕಾರ ಅಲ್ಪಸಂಖ್ಯಾತರ ಹಕ್ಕುಗಳನ್ನು ದಮನ ಮಾಡುತ್ತಿದೆ : ಖಾಲಿದ್ ಸೈಫುಲ್ಲಾ ರಹ್ಮಾನಿ

ವಾರ್ತಾಭಾರತಿವಾರ್ತಾಭಾರತಿ23 Nov 2024 9:58 PM IST
share
Photo of Program

ಬೆಂಗಳೂರು : ಕೇಂದ್ರ ಸರಕಾರವು ತನ್ನ ನೀತಿಗಳಿಂದ ಬಹಿರಂಗವಾಗಿಯೇ ಅಲ್ಪಸಂಖ್ಯಾತರ ಹಕ್ಕುಗಳನ್ನು ದಮನ ಮಾಡುವಲ್ಲಿ ನಿರತವಾಗಿದೆ ಎಂದು ಅಖಿಲ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿ ಅಧ್ಯಕ್ಷ ಖಾಲಿದ್ ಸೈಫುಲ್ಲಾ ರಹ್ಮಾನಿ ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ನಗರದ ದಾರುಲ್ ಉಲೂಮ್ ಸಬೀಲುರ್ರಶಾದ್(ಅರೇಬಿಕ್ ಕಾಲೇಜು)ನಲ್ಲಿ ಆಯೋಜಿಸಲಾಗಿರುವ ಎರಡು ದಿನಗಳ ಅಖಿಲ ಭಾರತ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿ(ಎಐಎಂಪಿಎಲ್ಬಿ)ಯ 29ನೇ ರಾಷ್ಟ್ರೀಯ ಸಮಾವೇಶದ ಉದ್ಘಾಟನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇಂದು ಅತ್ಯಂತ ಸಂಕಷ್ಟದ ಹಾಗೂ ಸೂಕ್ಷ್ಮ ಪರಿಸ್ಥಿತಿಯಲ್ಲಿ ಈ ಸಮಾವೇಶ ನಡೆಯುತ್ತಿದೆ. ಸರಕಾರವು ಬಹಿರಂಗವಾಗಿ ಅಲ್ಪಸಂಖ್ಯಾತರನ್ನು ಗುರಿಯನ್ನಾಗಿಸಿಕೊಂಡಿದೆ. ಪ್ರಮುಖವಾಗಿ ನಮ್ಮ ಶರೀಅತ್, ವಕ್ಫ್ ಆಸ್ತಿಗಳು, ಸಂಸ್ಥೆಗಳನ್ನು ಗುರಿಯನ್ನಾಗಿಸಲಾಗುತ್ತಿದೆ ಎಂದು ಅವರು ಹೇಳಿದರು.

ನಮ್ಮ ಪೂರ್ವಿಕರು ಮುಸ್ಲಿಮರಲ್ಲಿರುವ ಎಲ್ಲ ಬಗೆಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ದೇಶದ ಎಲ್ಲ ಮುಸ್ಲಿಮರ ಅಭ್ಯುದಯಕ್ಕಾಗಿ 1973ರಲ್ಲಿ ಅಖಿಲ ಭಾರತ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿಯನ್ನು ಸ್ಥಾಪನೆ ಮಾಡಿದರು. ಸಂವಿಧಾನ ಹಾಗೂ ಕಾನೂನಿನ ಚೌಕಟ್ಟಿನಡಿಯಲ್ಲಿಯೇ ಮಂಡಳಿಯೂ ತನ್ನ ಕಾರ್ಯಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆ ಎಂದು ಖಾಲಿದ್ ಸೈಫುಲ್ಲಾ ರಹ್ಮಾನಿ ತಿಳಿಸಿದರು.

ನಮ್ಮ ನ್ಯಾಯಸಮ್ಮತವಾದ ಹಕ್ಕುಗಳನ್ನು ಪಡೆಯಲು ಕಾನೂನು ಹಾಗೂ ಸಾರ್ವಜನಿಕ ಹೋರಾಟವನ್ನು ನಡೆಸಿಕೊಂಡು ಬರಲಾಗುತ್ತಿದೆ. ಉಲಮಾಗಳು ಶರೀಅತ್ ನೀಡಿರುವ ಆದೇಶಗಳನ್ನು ನೆಲದ ಕಾನೂನಿಗೆ ಅನುಗುಣವಾಗಿ ಯಾವ ರೀತಿ ಬಳಕೆ ಮಾಡಬೇಕು ಎಂದು ನಮ್ಮ ಅನ್ಯ ಧರ್ಮೀಯ ಸಹೋದರರು ಹಾಗೂ ವಿಶೇಷವಾಗಿ ಯುವ ಸಮೂಹದಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕು ಎಂದು ಅವರು ಕರೆ ನೀಡಿದರು.

ನಮ್ಮಲ್ಲಿನ ಒಗ್ಗಟ್ಟು ಇಂದಿನ ತುರ್ತು ಅಗತ್ಯವಾಗಿದೆ. ಅಪನಂಬಿಕೆಗಳು, ಭಿನ್ನಾಭಿಪ್ರಾಯಗಳಿಗೆ ಅವಕಾಶ ಇಲ್ಲದಂತಾಗಬೇಕಿದೆ. ಭಿನ್ನಾಭಿಪ್ರಾಯಗಳು ರಾಜಕೀಯವಾಗಿರಲಿ, ಧಾರ್ಮಿಕವಾಗಿರಲಿ, ಸಂಘಟನೆಗಳ ನಡುವೆ ಇರಲಿ, ಜಮಾತ್ಗಳ ನಡುವೆ ಇರಲಿ ಅಥವಾ ಪಂಗಡಗಳ ನಡುವೆ ಇರಲಿ. ಎಲ್ಲೆಡೆಯೂ ನಮ್ಮ ಆಚಾರ, ವಿಚಾರಗಳ ಮೂಲಕ ಬಗೆಹರಿಸಿಕೊಳ್ಳಬೇಕಿದೆ ಎಂದು ಖಾಲಿದ್ ಸೈಫುಲ್ಲಾ ರಹ್ಮಾನಿ ತಿಳಿಸಿದರು.

ಉದ್ಘಾಟನಾ ಸಭೆಯಲ್ಲಿ ಎಐಎಂಪಿಎಲ್ಬಿ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಫಝ್ಲುರ್ರಹೀಮ್ ಮುಜದ್ದಿದಿ ಸ್ವಾಗತ ಭಾಷಣ ಮಾಡಿದರು. ಕಾರ್ಯದರ್ಶಿ ಮಹ್ಫೂಝುರ್ರಹ್ಮಾನ್, ಸಮಾವೇಶದ ಸಂಚಾಲಕ ಅಮೀರೆ ಶರೀಅತ್ ಕರ್ನಾಟಕ ಮೌಲಾನ ಸಗೀರ್ ಅಹ್ಮದ್ ಖಾನ್ ರಶಾದಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X