Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಿಇಟಿ: ವಿಶೇಷ ಕ್ಯಾಟಗರಿ ಪ್ರಮಾಣಪತ್ರ...

ಸಿಇಟಿ: ವಿಶೇಷ ಕ್ಯಾಟಗರಿ ಪ್ರಮಾಣಪತ್ರ ಖುದ್ದು ಸಲ್ಲಿಕೆ ಮೇ 5ರಿಂದ ಆರಂಭ

ವಾರ್ತಾಭಾರತಿವಾರ್ತಾಭಾರತಿ30 April 2025 9:23 PM IST
share
ಸಿಇಟಿ: ವಿಶೇಷ ಕ್ಯಾಟಗರಿ ಪ್ರಮಾಣಪತ್ರ ಖುದ್ದು ಸಲ್ಲಿಕೆ ಮೇ 5ರಿಂದ ಆರಂಭ

ಬೆಂಗಳೂರು: ಸಿಇಟಿ-25ರ ಪರೀಕ್ಷೆಗೆ ಅರ್ಜಿ ಸಲ್ಲಿಕೆ ವೇಳೆ ವಿಶೇಷ ಕ್ಯಾಟಗರಿಗಳ ಅಡಿ ಸೀಟು ಹಂಚಿಕೆಗೆ ಕ್ಲೇಮು ಮಾಡಿರುವ ಅಭ್ಯರ್ಥಿಗಳಿಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಮೇ 5 ರಿಂದ ಮೇ 14ರೊಳಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಲ್ಲೇಶ್ವರಂ ಕಚೇರಿಗೆ ಖುದ್ದು ಸಲ್ಲಿಸಬೇಕು ಎಂದು ಸೂಚನೆ ನೀಡಲಾಗಿದೆ.

ಡಿಫೆನ್ಸ್, ಎಕ್ಸ್-ಡಿಫೆನ್ಸ್, ಸಿಎಪಿಎಫ್, ಸಿಆರ್‍ಪಿಎಫ್, ಸಿಐಎಸ್‍ಎಫ್, ಬಿಎಎಫ್, ಐಟಿಬಿಪಿ, ಎಕ್ಸ್-ಸಿ ಎ ಪಿ ಎಫ್, ಸ್ಕೌಟ್ಸ್ ಮತ್ತು ಗೈಡ್ಸ್, ಆಂಗ್ಲೋ ಇಂಡಿಯನ್ ಹಾಗೂ ಎನ್‍ಸಿಸಿ ಕೋಟಾದಡಿ ಸೀಟು ಕ್ಲೇಮು ಮಾಡಿರುವ ಅಭ್ಯರ್ಥಿಗಳಿಗೆ ಇದು ಅನ್ವಯವಾಗುತ್ತದೆ.

ಸಿಎಪಿಎಫ್/ಸಿಆರ್‍ಪಿಎಫ್/ಸಿಐಎಸ್‍ಎಫ್/ಬಿಎಸ್‍ಎಫ್/ಐಟಿಬಿಪಿ ಕ್ಲೇಮು ಮಾಡಿರುವವರು ಮೇ 5ರಂದು ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕು. ಎಕ್ಸ್- ಡಿಫೆನ್ಸ್/ಎಕ್ಸ್-ಸಿಎಪಿಎಫ್ ಅಭ್ಯರ್ಥಿಗಳು ಮೇ 6 ಹಾಗೂ 7ರಂದು, ಡಿಫೆನ್ಸ್ ಕ್ಲೇಮು ಮಾಡಿರುವವರು ಮೇ 8 ಹಾಗೂ 9ರಂದು, ಸ್ಕೌಟ್ಸ್ & ಗೈಡ್ಸ್/ಆಂಗ್ಲೋ ಇಂಡಿಯನ್ ಕೋಟಾ ಕೋರಿರುವವರು ಮೇ 12ರಂದು ಮತ್ತು ಎನ್‍ಸಿಸಿ ಕ್ಲೇಮು ಮಾಡಿರುವವರು ಮೇ 13 ಹಾಗೂ 14ರಂದು ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕು.

ಈ ದಿನಗಳಂದು ಅಭ್ಯರ್ಥಿಗಳು ಬೆಳಿಗ್ಗೆ 10.30 ರಿಂದ ಸಂಜೆ 5:30ರ ಒಳಗೆ ಕಚೇರಿಯ ಅವಧಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಖುದ್ದು ಹಾಜರಾಗಿ ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕು. ಕ್ರೀಡಾ ಕೋಟಾದಡಿಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಸಲ್ಲಿಸುವ ಬಗ್ಗೆ ನಂತರದಲ್ಲಿ ದಿನಾಂಕ ಪ್ರಕಟಿಸಲಾಗುವುದು.

ಕ್ಲಾಸ್ ಬಿ ಇಂದ ಓ: ಮೂಲದಾಖಲೆ ಪರಿಶೀಲನೆ: ಸಿಇಟಿ- 25ರ ಅರ್ಜಿ ನಮೂನೆಯಲ್ಲಿ ಅರ್ಹತಾ ಕಂಡಿಕೆ ಬಿ, ಸಿ, ಡಿ, ಇ, ಎಫ್, ಜಿ, ಎಚ್, ಐ, ಜೆ, ಕೆ, ಎಲ್, ಎಮ್, ಎನ್ ಮತ್ತು ಓ ಗಳನ್ನು ಕ್ಷೇಮ್ ಮಾಡಿರುವ ಅಭ್ಯರ್ಥಿಗಳಿಗೆ ಮೇ 5ರಿಂದ ಮೇ 15ರ ವರೆಗೆ ಮೂಲ ದಾಖಲೆಗಳ ಖುದ್ದು ಪರಿಶೀಲನೆಯು ಮಲ್ಲೇಶ್ವರಂ ಕಚೇರಿಯಲ್ಲಿ ನಡೆಯಲಿದೆ.

ಅಭ್ಯರ್ಥಿಗಳು ದಾಖಲಾತಿ ಪರಿಶೀಲನೆಗೆ ಹಾಜರಾಗುವ ಮೊದಲು ಅರ್ಹತಾ ಕ್ಲಾಸ್ ಕೋಡ್ ಅಡಿಯಲ್ಲಿ ಪ್ರಮಾಣ ಪತ್ರಗಳನ್ನು ಸಲ್ಲಿಸುವ ಬಗ್ಗೆ ಕೆಇಎ ವೆಬ್ ಸೈಟ್ http://kea.kar.nic.in ನಲ್ಲಿ ಹಾಗೂ ಇ-ಬ್ರೋಷರ್ ನಲ್ಲಿ ವಿವರಿಸಲಾಗಿದೆ. ಅಭ್ಯರ್ಥಿಗಳು ದಾಖಲೆ ಪರಿಶೀಲನೆಗೆ ಖುದ್ದು ಹಾಜರಾಗಬೇಕು. ಪರಿಶೀಲನೆಗೆ ಸಲ್ಲಿಸಬೇಕಾದ ಮೂಲ ದಾಖಲೆಗಳ ವಿವರಗಳನ್ನು ಪ್ರಾಧಿಕಾರದ ವೆಬ್ಸೈಟಿನಲ್ಲಿ ಪ್ರಚುರಪಡಿಸಿರುವ ಇ-ಮಾಹಿತಿ ಪುಸ್ತಕದಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ತಮ್ಮ ಅರ್ಹತಾ ಕಂಡಿಕೆಗನುಸಾರವಾಗಿ ಎಲ್ಲಾ ಅಗತ್ಯ ಮೂಲ ದಾಖಲೆಗಳು ಹಾಗೂ ಒಂದು ಸೆಟ್ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕೆಂದು ಸೂಚಿಸಲಾಗಿದೆ.

ದಾಖಲಾತಿ ಪರಿಶೀಲನೆಗೆ ಬರುವ ಮೊದಲು ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ನೀಡಿರುವ ಲಿಂಕ್‍ನಲ್ಲಿ ಸ್ಲಾಟ್ ಅನ್ನು ಬುಕ್ ಮಾಡಿಕೊಂಡು ನಿಗದಿಯಾದ ದಿನದಂದೇ ಪರಿಶೀಲನೆಗೆ ಹಾಜರಾಗಬೇಕು.

ಕ್ಲಾಸ್ ‘ಎ’ ಅಭ್ಯರ್ಥಿಗಳು ಕೈಮ್ ಸರ್ಟಿಫಿಕೇಟ್‍ನಲ್ಲಿ ಸೂಚಿಸಿರುವಂತೆ ಅಗತ್ಯವಿದ್ದಲ್ಲಿ ಪರಿಶೀಲನೆಯನ್ನು ಆಯಾ ಕಾಲೇಜಿನಲ್ಲಿ ಮಾಡಿಸಿಕೊಳ್ಳಬೇಕು ಹಾಗೂ 'ವೈ' ಕ್ಲಾಸ್ ಕ್ಲೇಮು ಮಾಡಿರುವ ಅಭ್ಯರ್ಥಿಗಳು ದಾಖಲೆಗಳ ಪರಿಶೀಲನೆಗೆ ಹಾಜರಾಗುವ ಅಗತ್ಯವಿಲ್ಲ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X