Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹಣ ಪಡೆದು ಸಚಿವ ಸ್ಥಾನ ಹಂಚಿಕೆ ಆರೋಪ;...

ಹಣ ಪಡೆದು ಸಚಿವ ಸ್ಥಾನ ಹಂಚಿಕೆ ಆರೋಪ; ಆಡಿಯೋ ಬಿಡುಗಡೆ ಮಾಡಿದ ಛಲವಾದಿ ನಾರಾಯಣಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ5 Aug 2026 8:08 PM IST
share
ಹಣ ಪಡೆದು ಸಚಿವ ಸ್ಥಾನ ಹಂಚಿಕೆ ಆರೋಪ; ಆಡಿಯೋ ಬಿಡುಗಡೆ ಮಾಡಿದ ಛಲವಾದಿ ನಾರಾಯಣಸ್ವಾಮಿ
‘ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡೆವು’

ಬೆಂಗಳೂರು : ಸಂಪುಟ ವಿಸ್ತರಣೆ ಆಡಳಿತ ಪಕ್ಷದಲ್ಲಿ ಗೊಂದಲ ಸೃಷ್ಟಿಸಿದೆ. ಈ ಮಧ್ಯೆ ‘ಹಣ ಪಡೆದು ಸಚಿವ ಸ್ಥಾನ ಹಂಚಿಕೆ ಮಾಡಲಾಗಿದೆ’ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆರ್.ಬಿ.ತಿಮ್ಮಾಪುರ ಮತ್ತು ಮಾಜಿ ಶಾಸಕ ಎಸ್.ಜಿ.ನಂಜಯ್ಯನಮಠ್ ಅವರ ನಡುವೆ ನಡೆದಿದೆ ಎನ್ನಲಾದ ಆಡಿಯೋ ಸಂಭಾಷಣೆ ವೈರಲ್ ಆಗಿದೆ.

ಬುಧವಾರ ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಆಡಿಯೋ ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ತಿಮ್ಮಾಪುರ ಮತ್ತು ಮಾಜಿ ಶಾಸಕ ನಂಜಯ್ಯನಮಠ ಕಾರಿನಲ್ಲಿ ಮಾತನಾಡಿದ ವಿಡಿಯೋ ಇದಾಗಿದೆ ಎಂದರು.

‘ಇವರ ಬಳಿ ಹಣ ಇಲ್ಲ, ಪ್ರಾಮಾಣಿಕರಿದ್ದಾರೆ’ ಎಂದು ಕೆ.ಸಿ.ವೇಣುಗೋಪಾಲ್‍ಗೆ ತಿಳಿಸಿದಾಗ, ‘ಹಣ ಮಾಡದೇ ಪ್ರಾಮಾಣಿಕರಾಗಿ ಇರಿ ಎಂದು ನಿಮಗೆ ಯಾರು ಹೇಳಿದ್ದಾರೆ’ ಎಂದು ಪ್ರಶ್ನಿಸಿದ್ದಾರೆ. ಹೀಗಾಗಿ ‘ಕಾಂಗ್ರೆಸ್ ನಾಯಕರೇ ಭ್ರಷ್ಟಾಚಾರಿಗಳನ್ನು ಉತ್ಪತ್ತಿ ಮಾಡುವವರು ಎಂಬುದು ಇದರಿಂದ ಸಾಬೀತಾಗಿದೆ. ಇವರು ದೇಶ ಉದ್ಧಾರ ಮಾಡಲು ಅಧಿಕಾರಕ್ಕೆ ಬಂದಿಲ್ಲ, ಬದಲಿಗೆ ಇರುವ ದೇಶ ಲೂಟಿ ಮಾಡುವವರು ಇವರು’ ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.

‘ಸಂಪುಟ ವಿಸ್ತರಣೆ ವೇಳೆ ಎಂತೆಂತಹ ಸಚಿವರನ್ನು ಆಯ್ಕೆ ಮಾಡಿದ್ದಾರೆಂದರೆ ಇವರಿಗೆ ಕನ್ನಡವೂ ಬರುವುದಿಲ್ಲವೇ?. ಹಲವರಿಗೆ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಿಲ್ಲ, ಇಂತಹವರನ್ನೆಲ್ಲ ಇವರು ಸಚಿವರನ್ನಾಗಿ ಮಾಡಿದ್ದಾರೆ. ನಿಮಗೆ ಭಾಷೆ ಬಾರದೇ ಇದ್ದರೆ ಪರವಾಗಿಲ್ಲ, ಸರಿಯಾಗಿ ಲೂಟಿ ಮಾಡಲು ಬಂದರೆ ಸಾಕೆಂಬ ಉದ್ದೇಶವೇ?. ಭ್ರಷ್ಟರನ್ನು ಬಿಜೆಪಿ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ಎಚ್ಚರಿಕೆ ನೀಡಿದರು.

ಸದನ ನಡೆಸಲು ಬಿಡೆವು: ‘ನೂತನ ಸಚಿವ ಬಿ.ನಾಗೇಂದ್ರರ ಮೇಲೆ ಕೋರ್ಟಿನಲ್ಲಿ ಪ್ರಕರಣವಿದೆ. ಅವರು ದಿಲ್ಲಿಗೆ ತೆರಳುವಂತಿಲ್ಲ. ಇಂತಹ ಕಳಂಕಿತರು ಸಚಿವ ಸಂಪುಟದಲ್ಲಿರಲು ಸಾಧ್ಯವಿಲ್ಲ. ಹೀಗಾಗಿ ಅವರು ರಾಜೀನಾಮೆ ಕೊಡುವವರೆಗೆ ನಾವು ವಿರಮಿಸುವುದಿಲ್ಲ. ಆ.13ರಿಂದ ವಿಧಾನ ಮಂಡಲ ಅಧಿವೇಶನ ಪ್ರಾರಂಭವಾಗಲಿದೆ. ಅವರ ರಾಜೀನಾಮೆ ಇಲ್ಲದೆ ಸದನ ನಡೆಸಲು ಬಿಡುವುದಿಲ್ಲ ಎಂದು ಅವರು ಎಚ್ಚರಿಸಿದರು.

ವಾಲ್ಮೀಕಿ ನಿಗಮದಲ್ಲಿ 187ಕೋಟಿ ರೂ.ಹಣ ದುರುಪಯೋಗ ಪಡಿಸಿಕೊಂಡ ಬಿ.ನಾಗೇಂದ್ರ, ಬಿಜೆಪಿಯ ಹೋರಾಟದ ಫಲವಾಗಿ ರಾಜೀನಾಮೆ ನೀಡಿ, ಜೈಲಿಗೆ ಹೋಗಿದ್ದರು. ಇಂದಿಗೂ ಜಾಮೀನಿನ ಮೇಲೆ ಹೊರಗಿದ್ದಾರೆ. ಜಾಮೀನಿನಲ್ಲಿ ಇದ್ದರೂ ಕಾಂಗ್ರೆಸ್ ಪಕ್ಷ ಅವರಿಗೆ ಮಂತ್ರಿ ಸ್ಥಾನವನ್ನು ಉಡುಗೊರೆಯಾಗಿ ನೀಡಿದೆ ಎಂದು ಛಲವಾದಿ ನಾರಾಯಣಸ್ವಾಮಿ ಆಕ್ಷೇಪಿಸಿದರು.

ರಾಜೀನಾಮೆ ಕೇಳಿದ್ದು ಸಲ್ಲ: ಸಲೀಂ ಅಹ್ಮದ್ ಸಭಾಪತಿ ಭೇಟಿ ಮಾಡಿ ರಾಜೀನಾಮೆ ಕೇಳಿದ್ದಾರೆ. ರಾಜೀನಾಮೆ ಕೇಳಲು ಅವರು ಯಾರು. ವಿಧಾನಸಭೆ ಅವಧಿ 5 ವರ್ಷ. ವಿಧಾನ ಪರಿಷತ್ ಯಾವತ್ತೂ ವಿಸರ್ಜನೆ ಆಗುವುದಿಲ್ಲ. ಅವರಾಗಿ ಸಭಾಪತಿ ರಾಜೀನಾಮೆ ಕೊಟ್ಟರೆ ಆ ಸ್ಥಾನ ಖಾಲಿ ಆಗುತ್ತದೆ. ಸಭಾಪತಿ ಸ್ಥಾನವು ಪಕ್ಷದ ಆಸ್ತಿಯೇ?. ಕಾಂಗ್ರೆಸ್ಸಿಗೆ ನೀತಿ, ತತ್ವ ಇಲ್ಲವೇ? ಎಂದು ಅವರು ಟೀಕಿಸಿದರು.

Tags

Chalavadi Narayanaswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X