Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಆಗಸ್ಟ್ 8 ರಿಂದ 15ರ ವರೆಗೆ ‘ಸಂಘಟನ್...

ಆಗಸ್ಟ್ 8 ರಿಂದ 15ರ ವರೆಗೆ ‘ಸಂಘಟನ್ ಸೃಜನ್ ಅಭಿಯಾನ’ : ಚಾಂಡಿ ಉಮ್ಮನ್

ವಾರ್ತಾಭಾರತಿವಾರ್ತಾಭಾರತಿ30 July 2026 12:57 AM IST
share
ಆಗಸ್ಟ್ 8 ರಿಂದ 15ರ ವರೆಗೆ ‘ಸಂಘಟನ್ ಸೃಜನ್ ಅಭಿಯಾನ’ : ಚಾಂಡಿ ಉಮ್ಮನ್

ಬೆಂಗಳೂರು : ‘ಸಂಘಟನ್ ಸೃಜನ್ ಅಭಿಯಾನ’ದ ಭಾಗವಾಗಿ ಬೆಂಗಳೂರು ದಕ್ಷಿಣ ಜಿಲ್ಲೆಯ ಅಧ್ಯಕ್ಷರ ನೇಮಕಕ್ಕಾಗಿ 17 ಬ್ಲಾಕ್ ಮಟ್ಟದ ಸಭೆಗಳನ್ನು ಆಗಸ್ಟ್ 8ರಿಂದ ಆ.15ರ ವರೆಗೆ ನಡೆಸಲಿದ್ದೇವೆ. ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಜಿಲ್ಲಾಧ್ಯಕ್ಷರ ನೇಮಕಕ್ಕೆ ಹೆಸರುಗಳನ್ನು ಶಿಫಾರಸು ಮಾಡಲಾಗುವುದು ಎಂದು ಎಐಸಿಸಿ ವೀಕ್ಷಕ ಚಾಂಡಿ ಉಮ್ಮನ್ ತಿಳಿಸಿದ್ದಾರೆ.

ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆನೇಕಲ್, ಸರ್ಜಾಪುರ, ಅತ್ತಿಬೆಲೆ, ಹೆಬ್ಬಗೋಡಿ, ಉತ್ತರಹಳ್ಳಿ, ಗೊಟ್ಟಿಗೆರೆ, ಬೇಗೂರು, ಜಿಗಣಿ, ಬನಶಂಕರಿ, ಬೊಮ್ಮನಹಳ್ಳಿ, ಬಿಟಿಎಂ, ಕೋರಮಂಗಲ, ಜಯನಗರ, ಜೆ.ಪಿ ನಗರದಲ್ಲಿ ಸಭೆ ಮಾಡಲಾಗುವುದು. ಪಕ್ಷದ ಎಲ್ಲ ಕಾರ್ಯಕರ್ತರು ಈ ಅಭಿಯಾನದಲ್ಲಿ ಭಾಗವಹಿಸಿ ನಿಮ್ಮ ಜಿಲ್ಲಾಧ್ಯಕ್ಷರು ಯಾರಾಗಬೇಕು ಎಂದು ನಿಮ್ಮ ಅಭಿಪ್ರಾಯವನ್ನು ತಿಳಿಸಬಹುದು ಎಂದರು.

ರಾಜ್ಯದಲ್ಲಿ ಈ ಪ್ರಕ್ರಿಯೆಯನ್ನು ನಡೆಸುತ್ತಿದ್ದು, ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ನೂತನ ಅಧ್ಯಕ್ಷರ ನೇಮಕ ಮಾಡಲಾಗುವುದು. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಕಾರ್ಯಕರ್ತರು, ಮುಖಂಡರ ಅಭಿಪ್ರಾಯ ಸಂಗ್ರಹಿಸಿ ನಂತರ ಜಿಲ್ಲಾಧ್ಯಕ್ಷರ ಆಯ್ಕೆ ಸಂಬಂಧ ಹೈಕಮಾಂಡ್ ನಾಯಕರಿಗೆ ಹೆಸರುಗಳನ್ನು ಶಿಫಾರಸು ಮಾಡಲಾಗುವುದು. ತಳಮಟ್ಟದಲ್ಲಿ ನಾಯಕತ್ವವನ್ನು ಬಲಗೊಳಿಸಲು ಈ ಅಭಿಯಾನ ಮಾಡಲಾಗುತ್ತಿದೆ ಎಂದರು.

2023ರಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಕ್ತಿ ತುಂಬಿದೆ. ಮುಂದಿನ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದ್ದು, ಇನ್ನೂ 3 ವರ್ಷಗಳಲ್ಲಿ ಲೋಕಸಭೆ ಚುನಾವಣೆಯನ್ನು ಎದುರಿಸಲಿದ್ದೇವೆ. ಹೀಗಾಗಿ ಪಕ್ಷ ಸಂಘಟನೆ ಮಾಡಬೇಕಾಗಿದೆ. ಕಾರ್ಯಕರ್ತರು ಪಕ್ಷವನ್ನು ಮುನ್ನಡೆಸಬೇಕೆಂಬುದು ರಾಹುಲ್ ಗಾಂಧಿ ಉದ್ದೇಶ. ಹೀಗಾಗಿ ಆ.8ರಿಂದ ಅಭಿಯಾನ ಆರಂಭವಾಗಲಿದೆ ಎಂದು ಹೇಳಿದರು.

ಇತ್ತೀಚೆಗೆ ಜೆನ್ ಝೀ ವಿದ್ಯಾರ್ಥಿಗಳ ಪ್ರತಿಭಟನೆಗೆ ರಾಹುಲ್ ಗಾಂಧಿ ಶಕ್ತಿ ತುಂಬಿದ್ದಾರೆ. ಇದೀಗ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಲ್ಲಿ ಸಂಘಟಿಸಲು ಆದ್ಯತೆ ನೀಡಲಾಗುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತರಿಗೆ ಮೊದಲ ಆದ್ಯತೆ ನೀಡುವ ಗುರಿ ಇದೆ ಎಂದರು. ಈ ವೇಳೆ ಮಾಜಿ ಸಂಸದ ಡಿ.ಕೆ.ಸುರೇಶ್, ಖಜಾಂಚಿ ವಿನಯ್ ಕಾರ್ತೀಕ್, ದಕ್ಷಿಣ ಜಿಲ್ಲಾಧ್ಯಕ್ಷ ಒ.ಮಂಜುನಾಥ, ಪ್ರಧಾನ ಕಾರ್ಯದರ್ಶಿ ಎಂ.ರಾಜಕುಮಾರ್ ಉಪಸ್ಥಿತರಿದ್ದರು.

Tags

Chandy Oommen
share
ವಾರ್ತಾಭಾರತಿ
ವಾರ್ತಾಭಾರತಿ
Next Story
X