Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಚಿಕ್ಕಮಗಳೂರು | ಕೊಲ್ಕತ್ತಾ ಯುವವೈದ್ಯೆ...

ಚಿಕ್ಕಮಗಳೂರು | ಕೊಲ್ಕತ್ತಾ ಯುವವೈದ್ಯೆ ಅತ್ಯಾಚಾರ ಖಂಡಿಸಿ ವೈದ್ಯರಿಂದ ಶಾಂತಿಯುತ ಪ್ರತಿಭಟನೆ

ತುರ್ತು ಸೇವೆ ಹೊರತು ಪಡಿಸಿ ಎಲ್ಲ ಆರೋಗ್ಯ ಸೇವೆ ಸ್ಥಗಿತ

ವಾರ್ತಾಭಾರತಿವಾರ್ತಾಭಾರತಿ17 Aug 2024 6:48 PM IST
share
ಚಿಕ್ಕಮಗಳೂರು | ಕೊಲ್ಕತ್ತಾ ಯುವವೈದ್ಯೆ ಅತ್ಯಾಚಾರ ಖಂಡಿಸಿ ವೈದ್ಯರಿಂದ ಶಾಂತಿಯುತ ಪ್ರತಿಭಟನೆ

ಚಿಕ್ಕಮಗಳೂರು : ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಯುವ ವೈದ್ಯೆಯ ಅತ್ಯಾಚಾರ ಘಟನೆ ಖಂಡಿಸಿ ದೇಶಾದ್ಯಂತ ಐಎಂಎ ಕರೆ ನೀಡಿದ್ದ ಪ್ರತಿಭಟನೆ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾದ್ಯಂತ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆ ಸ್ಥಗಿತಗೊಳಿಸಿ ವೈದ್ಯರು ಕಪ್ಪುಪಟ್ಟಿ ಧರಿಸಿ ಸಾಂಕೇತಿಕವಾಗಿ ಶಾಂತಿಯುವ ಪ್ರತಿಭಟನೆ ನಡೆಸಿದರು.

ಯುವ ವೈದ್ಯೆಯ ಅತ್ಯಾಚಾರ ಘಟನೆ ಖಂಡಿಸಿ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್‍ನ ಜಿಲ್ಲಾ ಘಟಕ ಜಿಲ್ಲಾದ್ಯಂತ ವೈದ್ಯಕೀಯ ಸೇವೆಯನ್ನು ಸ್ಥಗಿತಗೊಳಿಸಲು ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದ ಜಿಲ್ಲಾಸ್ಪತ್ರೆ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳು ಹಾಗೂ ಎಲ್ಲ ಖಾಸಗಿ ಆಸ್ಪತ್ರೆಗಳು ಬೆಳಗ್ಗೆಯಿಂದ ಸಂಜೆವರೆಗೆ ತುರ್ತು ಚಿಕಿತ್ಸೆ ಹೊರತುಪಡಿಸಿ ಉಳಿದೆಲ್ಲ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಆಸ್ಪತ್ರೆಯಲ್ಲಿ ಓಪಿಡಿ ಸೇವೆಯನ್ನು ಸ್ಥಗಿತಗೊಳಿಸಿದ್ದರಿಂದ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಸಾರ್ವಜನಿಕರಿಲ್ಲದೇ ಬಿಕೋ ಎನ್ನುತ್ತಿದ್ದವು.

ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರಿಂದ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಆರೋಗ್ಯ ಸೇವೆ ಸಿಗದೇ ಪರದಾಡುವಂತಾಗಿತ್ತು. ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರ ಸಂಖ್ಯೆ ಶನಿವಾರ ಅತ್ಯಂತ ವಿರಳವಾಗಿತ್ತು. ತುರ್ತು ಸೇವೆಗಳ ಆವಶ್ಯಕತೆ ಇದ್ದವರಿಗೆ ವೈದ್ಯರು ಮತ್ತು ಸಿಬ್ಬಂದಿ ವೈದ್ಯಕೀಯ ಸೇವೆ ನೀಡುತ್ತಿದ್ದ ದೃಶ್ಯಗಳು ಎಲ್ಲ ಆಸ್ಪತ್ರೆಗಳಲ್ಲಿ ಸಾಮಾನ್ಯವಾಗಿದ್ದವು. ನಗರ ಹಾಗೂ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿದ್ದ ಬಹುತೇಕ ಕ್ಲಿನಿಕ್‍ಗಳನ್ನು ಮುಚ್ಚಲಾಗಿತ್ತು. ಗ್ರಾಮೀಣ ಭಾಗದ ಸರಕಾರಿ ಆಸ್ಪತ್ರೆಗಳಲ್ಲೂ ಸಾರ್ವಜನಿಕರ ಸಂಖ್ಯೆ ಕಡಿಮೆ ಇತ್ತು.

ಪ್ರತಿಭಟನೆ ಹಿನ್ನೆಲೆಯಲ್ಲಿ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಜಿಲ್ಲಾಧ್ಯಕ್ಷ ಡಾ.ಚೈತನ್ಯ ಸವೂರ್, ಉಪಾಧ್ಯಕ್ಷ ಹಾಗೂ ಜಿಲ್ಲಾ ಸರ್ಜನ್ ಡಾ.ಮೋಹನ್‍ಕುಮಾರ್, ಕಾರ್ತಿಕ ವಿಜಯ್, ಖಜಾಂಚಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವಥ್‍ಬಾಬು ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಸಾಂಕೇತಿಕವಾಗಿ ಧರಣಿ ನಡೆಸಿದರು. ನಂತರ ಕಾಲ್ನಡಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಶಿರಸ್ತೇದಾರ್ ಹೇಮಂತ್ ಅವರ ಮೂಲಕ ರಾಷ್ಟ್ರಪತಿ ಹಾಗೂ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿ, ಯುವ ವೈದ್ಯೆಯ ಅತ್ಯಾಚಾರ ಪ್ರಕರಣದ ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿದರು.

ಮನವಿ ಸಲ್ಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಐಎಂಎ ಜಿಲ್ಲಾಧ್ಯಕ್ಷ ಚೈತನ್ಯ ಸವೂರ್, ಕೊಲ್ಕತ್ತಾದಲ್ಲಿ ಕರ್ತವ್ಯನಿರತ ವೈದ್ಯೆ ಮೇಲೆ ನಡೆದಿರುವ ಪೈಶಾಚಿಕ ಕೃತ್ಯ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಾಗಿದೆ. ಇಂತಹ ವಿಕೃತ ಮನಸ್ಸಿನ ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ವಿಧಿಸುವ ಮೂಲಕ ವೈದ್ಯ ಸಮೂಹಕ್ಕೆ ಸರಕಾರಗಳು ರಕ್ಷಣೆ ನೀಡಬೇಕು ಎಂದರು.

ಸಂಘದ ಜಿಲ್ಲಾಉಪಾಧ್ಯಕ್ಷ ಡಾ.ಉಮೇಶ್ ಹಾಗೂ ಪದಾಧಿಕಾರಿಗಳಾದ ಡಾ.ಸಂತೋಷ್ ಅರಸ್, ಡಾ.ಕೌಶಿಕ್ ಸಾರಗೋಡು, ಡಾ.ಗೀತಾ, ಡಾ.ಸೌಮ್ಯಾ ಸುನಿಲ್ ಸೇರಿದಂತೆ ನೂರಾರು ಸರಕಾರಿ, ಖಾಸಗಿ ಆಸ್ಪತ್ರೆಗಳ ವೈದ್ಯರು ಈ ವೇಳೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X