Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮುಂದಿನ ಪೀಳಿಗೆಯ ತಂತ್ರಜ್ಞಾನ ಮತ್ತು...

ಮುಂದಿನ ಪೀಳಿಗೆಯ ತಂತ್ರಜ್ಞಾನ ಮತ್ತು ಹೂಡಿಕೆಗೆ ಪೂರಕ ಪರಿಸರ ವ್ಯವಸ್ಥೆ ನಿರ್ಮಾಣ : ಸಿಎಂ ಡಿ ಕೆ ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ6 Sept 2026 11:07 PM IST
share
ಮುಂದಿನ ಪೀಳಿಗೆಯ ತಂತ್ರಜ್ಞಾನ ಮತ್ತು ಹೂಡಿಕೆಗೆ ಪೂರಕ ಪರಿಸರ ವ್ಯವಸ್ಥೆ ನಿರ್ಮಾಣ : ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು : "ಭಾರತ-ಅಮೆರಿಕ ನಡುವೆ ತಂತ್ರಜ್ಞಾನ, ಶಿಕ್ಷಣ, ನಾವೀನ್ಯತೆ, ಸಂಶೋಧನೆ, ಹೂಡಿಕೆ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿ ಗಾಢ ಸಹಯೋಗ ಅಗತ್ಯವಿದೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಕರೆ ನೀಡಿದರು.

ಅಮೆರಿಕದ ಸ್ವಾತಂತ್ರ್ಯದ 250ನೇ ವಾರ್ಷಿಕೋತ್ಸವದ ನೆನಪಿನಲ್ಲಿ ಖಾಸಗಿ ಹೊಟೇಲ್ ನಲ್ಲಿ ಭಾರತದಲ್ಲಿನ ಅಮೆರಿಕದ ರಾಯಭಾರಿ ಸರ್ಜಿಯೋ ಗೋರ್ ಅವರ ಸಮ್ಮುಖದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

"ಬೆಂಗಳೂರು ಮತ್ತು ಸಿಲಿಕಾನ್ ವ್ಯಾಲಿ ನಡುವಿನ ಪಾಲುದಾರಿಕೆಗೆ ಎರಡು ದೇಶಗಳ ನಡುವೆ ಪ್ರಬಲ ತಾಂತ್ರಿಕ ಆಯಾಮ ನೀಡಲಿದೆ. ಭಾರತ ಮತ್ತು ಅಮೇರಿಕ ನಡುವಿನ ಸಂಬಂಧವು ಸಾಂಪ್ರದಾಯಿಕ ಸರ್ಕಾರಗಳ ನಡುವಿನ ತೊಡಗಿಸಿಕೊಳ್ಳುವಿಕೆಯನ್ನು ಮೀರಿ ಬೆಳೆಯುತ್ತಿದೆ. ಇದರಲ್ಲಿ ವಿಶ್ವವಿದ್ಯಾಲಯಗಳು, ವಿಜ್ಞಾನಿಗಳು, ಉದ್ಯಮಿಗಳು, ಸ್ಟಾರ್ಟ್‌ಅಪ್‌ಗಳು ಮತ್ತು ವಾಣಿಜ್ಯ ಸಂಸ್ಥೆಗಳು ಹೆಚ್ಚು ಪ್ರಮುಖ ಪಾತ್ರ ವಹಿಸುತ್ತಿವೆ" ಎಂದು ಅಭಿಪ್ರಾಯಪಟ್ಟರು.

"ವಾಷಿಂಗ್ಟನ್ ಮತ್ತು ನವದೆಹಲಿ ನಮ್ಮ ದೇಶಗಳ ನಡುವಿನ ಆಯಕಟ್ಟಿನ ಪಾಲುದಾರಿಕೆಯನ್ನು ಮುನ್ನಡೆಸಬಹುದು. ಆದರೆ ಬೆಂಗಳೂರು ಮತ್ತು ಸಿಲಿಕಾನ್ ವ್ಯಾಲಿ ಇದಕ್ಕೆ ಪ್ರಬಲ ತಾಂತ್ರಿಕ ಆಯಾಮವನ್ನು ನೀಡುತ್ತವೆ" ಎಂದು ತಿಳಿಸಿದರು.

ಎಐ, ಪ್ರಮುಖ ವಲಯಗಳಲ್ಲಿ ಸಹಕಾರಕ್ಕೆ ಕರ್ನಾಟಕ ಉತ್ಸುಕ

ಕೃತಕ ಬುದ್ಧಿಮತ್ತೆ (AI), ಸೆಮಿಕಂಡಕ್ಟರ್‌ಗಳು, ಬಾಹ್ಯಾಕಾಶ (ಏರೋಸ್ಪೇಸ್), ಸುಧಾರಿತ ಉತ್ಪಾದನೆ, ಡಿಜಿಟಲ್ ತಂತ್ರಜ್ಞಾನಗಳು ಮತ್ತು ವೈಜ್ಞಾನಿಕ ಸಂಶೋಧನೆಯಂತಹ ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸಲು ಕರ್ನಾಟಕವು ಅಮೆರಿಕದೊಂದಿಗೆ ನಿಕಟವಾಗಿ ಕೆಲಸ ಮಾಡಲು ಉತ್ಸುಕವಾಗಿದೆ. ನಾಳೆಯ ತಂತ್ರಜ್ಞಾನಗಳನ್ನು ರೂಪಿಸುವ, ನಿರ್ಮಿಸುವ ಮತ್ತು ಮುನ್ನಡೆಸುವವರಲ್ಲಿ ಗುರುತಿಸಿಕೊಳ್ಳುವುದು ಕರ್ನಾಟಕದ ಹೆಮ್ಮೆಯಾಗಿದೆ" ಎಂದು ಹೇಳಿದರು.

ಮುಂದಿನ ಪೀಳಿಗೆಯ ತಂತ್ರಜ್ಞಾನ ಮತ್ತು ಹೂಡಿಕೆಗೆ ಪೂರಕ ಪರಿಸರ ವ್ಯವಸ್ಥೆ ನಿರ್ಮಾಣ

"ಮುಂದಿನ ಪೀಳಿಗೆಯ ತಂತ್ರಜ್ಞಾನಗಳು ಮತ್ತು ಹೂಡಿಕೆಗಳನ್ನು ಬೆಂಬಲಿಸಲು ಕರ್ನಾಟಕವು ಸೂಕ್ತ ಪರಿಸರ ವ್ಯವಸ್ಥೆಯನ್ನು (ecosystem) ನಿರ್ಮಿಸುತ್ತಿದೆ. ರಾಜ್ಯವು ಕ್ವಿನ್ ಸಿಟಿ (KWIN City) ಮತ್ತು ಸೆಮಿಕಂಡಕ್ಟರ್ ಪಾರ್ಕ್ ಅನ್ನು ಅಭಿವೃದ್ಧಿಪಡಿಸುತ್ತಿದ್ದು, AI ಹಬ್ ಮತ್ತು ಭಾರತದ ಮೊದಲ ಸಾರ್ವಜನಿಕ ವಲಯದ AI ವಿಶ್ವವಿದ್ಯಾಲಯವನ್ನು ಒಳಗೊಂಡಂತೆ AI ಟೆಕ್ ಪಾರ್ಕ್ ಅನ್ನು ನಿರ್ಮಿಸುತ್ತಿದೆ" ಎಂದು ತಿಳಿಸಿದರು.

"ಸುಧಾರಿತ ಉತ್ಪಾದನೆ, ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಕರ್ನಾಟಕದ ಬೆಳವಣಿಗೆಯನ್ನು ಅವರು ಎತ್ತಿಹಿಡಿದರು. ಭಾರತದಲ್ಲೇ ಆಪಲ್‌ನ ಐಫೋನ್‌ಗಳನ್ನು ಉತ್ಪಾದಿಸುವ ಫಾಕ್ಸ್‌ಕಾನ್ ಸಂಸ್ಥೆ ಅತಿ ದೊಡ್ಡ ಘಟಕ ಬೆಂಗಳೂರಿನಲ್ಲಿದೆ. ರಾಜ್ಯದ ಏರೋಸ್ಪೇಸ್ ಪಾರ್ಕ್ ವಿಸ್ತರಣೆಯಾಗುತ್ತಿದೆ" ಎಂದು ಹೇಳಿದರು.

"ಬೆಂಗಳೂರು ಜಾಗತಿಕ ತಂತ್ರಜ್ಞಾನ ಮತ್ತು ಶಿಕ್ಷಣದ ಕೇಂದ್ರವಾಗಿ ವಿಕಸನಗೊಂಡಿರುವುದು ಭಾರತದ ಅಂತರರಾಷ್ಟ್ರೀಯ ತೊಡಗಿಸಿಕೊಳ್ಳುವಿಕೆಯಲ್ಲಿ ಅದರ ಪಾತ್ರವನ್ನು ಬಲಪಡಿಸಿದೆ. BIAL ಜೊತೆಗಿನ ಒಡನಾಟ ಸೇರಿದಂತೆ ಬೆಂಗಳೂರಿನ ಜಾಗತಿಕ ಪ್ರಯಾಣವನ್ನು ರೂಪಿಸುವಲ್ಲಿ ನಾರಾಯಣ ಮೂರ್ತಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ" ಎಂದರು.

ಅಮೆರಿಕದ ಸ್ವಾತಂತ್ರ್ಯದ 250 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಅಮೆರಿಕದ ಜನರಿಗೆ ಅಭಿನಂದನೆ ಸಲ್ಲಿಸಿದ ಶಿವಕುಮಾರ್, "ಭಾರತ, ಅಮೆರಿಕ ಮತ್ತು ಕರ್ನಾಟಕವು ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆಗಳಲ್ಲಿ ತಮ್ಮ ಸಾಮರ್ಥ್ಯಗಳನ್ನು ಸಂಯೋಜಿಸಿ ಹೆಚ್ಚು ಸಮೃದ್ಧ ಭವಿಷ್ಯವನ್ನು ನಿರ್ಮಿಸಬಹುದು" ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X