Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು ನಗರದ ವರ್ಟಿಕಲ್ ಬೆಳವಣಿಗೆಗೆ...

ಬೆಂಗಳೂರು ನಗರದ ವರ್ಟಿಕಲ್ ಬೆಳವಣಿಗೆಗೆ ಚಿಂತನೆ: ಸಿಎಂ ಡಿಕೆ ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ27 Jun 2026 3:55 PM IST
share
ಬೆಂಗಳೂರು ನಗರದ ವರ್ಟಿಕಲ್ ಬೆಳವಣಿಗೆಗೆ ಚಿಂತನೆ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಜೂ.27: ''ಕೆಂಪೇಗೌಡರು ಹುಟ್ಟಿದ್ದು ಒಕ್ಕಲಿಗನಾಗಿ ಬೆಳೆದಿದ್ದು ವಿಶ್ವಮಾನವನಾಗಿ. ಇದನ್ನು ಯಾರೂ ಸಹ ಮರೆಯಬಾರದು. ಈ ಹಾದಿಯಲ್ಲಿಯೇ ನಾವೆಲ್ಲರೂ ನಡೆಯಬೇಕು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಕರೆ ನೀಡಿದರು.

ಯಲಹಂಕದಲ್ಲಿ ಬೆಂಗಳೂರು ಉತ್ತರ ತಾಲೂಕು ಒಕ್ಕಲಿಗರ ಸಮಿತಿ ಶನಿವಾರ ಆಯೋಜಿಸಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಶಿವಕುಮಾರ್ ಅವರು ಮಾತನಾಡುತ್ತಿದ್ದರು.

"ಇಡೀ ವಿಶ್ವ ಬೆಂಗಳೂರನ್ನು ನೋಡುತ್ತಿದೆ. ಇದಕ್ಕೆ ಕಾರಣ ನಾಡಪ್ರಭು ಕೆಂಪೇಗೌಡರು. 500 ವರ್ಷಗಳ ಹಿಂದೆ ಈ ಭೂಮಿಗೆ ಪೂಜೆ ಮಾಡಿ ನಗರ ನಿರ್ಮಾಣ ಮಾಡಿದರು. ಇದನ್ನು ಬೆಂಗಳೂರು ವಾಸಿಗಳು ಮರೆಯಬಾರದು. ಈ ನಗರ ನಿರ್ಮಾಣ ಮಾಡುವಾಗ ಇದು ಇಷ್ಟು ದೊಡ್ಡಮಟ್ಟಕ್ಕೆ ಬೆಳೆಯುತ್ತದೆ ಎನ್ನುವುದು ಅವರಿಗೆ ಗೊತ್ತಿರಲಿಲ್ಲ. ಆದರೆ ಅವರ ದೂರದೃಷ್ಟಿ ಇಲ್ಲಿ ಕೆಲಸ ಮಾಡಿದೆ" ಎಂದರು.

"ನಾವುಗಳು ಯಾರೂ ಬೆಂಗಳೂರು ಕಟ್ಟಿದವರಲ್ಲ. ಆದರೆ ನಾವಿರುವ ಈ ನಗರವನ್ನು ಉಳಿಸಿ ಬೆಳೆಸಬೇಕು. ಮನೆ ಹುಷಾರು, ಮಠ ಹುಷಾರು ಎಂದು ಹಿರಿಯರು ಹೇಳಿದ್ದಾರೆ. ಅದರಂತೆ ನಾವು ನಮ್ಮ ಪರಂಪರೆ ಉಳಿಸಬೇಕು. ಕೆಂಪೇಗೌಡರು ಹಾಕಿಕೊಟ್ಟ ಅಡಿಪಾಯದಂತೆ ನಾವೆಲ್ಲರೂ ನಡೆಯುತ್ತಿದ್ದೇವೆ. ಅನೇಕ ವೃತ್ತಿಗಳನ್ನು ಉಳಿಸಲು ಮಾರ್ಗದರ್ಶನ ನೀಡಿದರು. ಅವರು ಹಾಕಿದ ಸಂಪ್ರದಾಯದಂತೆ ನಾವು ನಡೆಯುತ್ತಿದ್ದೇವೆ" ಎಂದರು.

*ನಗರವು ವರ್ಟಿಕಲ್ ಬೆಳವಣಿಗೆಗೆ ಚಿಂತನೆ

“ಬೆಂಗಳೂರಿನಲ್ಲಿ ವಿದ್ಯೆ, ಆರೋಗ್ಯ, ವೃತ್ತಿ ದೊರೆಯುತ್ತದೆ. ಇಲ್ಲಿ ಪ್ರತಿಯೊಬ್ಬರೂ ಬದುಕನ್ನು ಕಟ್ಟಿಕೊಳ್ಳಬಹುದು ಎಂದು ಅನೇಕರು ಈ ನಗರಕ್ಕೆ ಬರುತ್ತಿದ್ದಾರೆ. ಬೆಂಗಳೂರು ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ನಗರ ವಿಸ್ತರಣೆ ಆಗುತ್ತಲೇ ಇದೆ. ಈ ನಗರಕ್ಕೆ ಬರುವವರನ್ನು ನಾವು ತಡೆಯಲು ಸಾಧ್ಯವಿಲ್ಲ. ಅದಕ್ಕೆ 'ವರ್ಟಿಕಲ್ ಬೆಳವಣಿಗೆ' ಬಗ್ಗೆ ನಾನು ಆಲೋಚನೆ ಮಾಡುತ್ತಿದ್ದೇನೆ" ಎಂದರು.

"ಎಲ್ಲಾ ಧರ್ಮ, ಜಾತಿಗಳಿಗೆ ಇಲ್ಲಿ ಬದುಕನ್ನು ಕಟ್ಟಿಕೊಳ್ಳಲು ನಾವು ಆಸ್ಪದ ನೀಡಬೇಕಿದೆ. ದೇಹಕ್ಕೆ ಹೃದಯ ಮುಖ್ಯ. ಅದೇ ರೀತಿ ರಾಜ್ಯಕ್ಕೆ ಬೆಂಗಳೂರು ಮುಖ್ಯ. ಈ ಹಿಂದೆ ವಾಜಪೇಯಿ ಬೆಂಗಳೂರು ವಿಮಾನ ನಿಲ್ದಾಣ ಉದ್ಘಾಟನೆಗೆ ಬಂದಾಗ 'ಜಗತ್ತಿನ ಎಲ್ಲಾ ನಾಯಕರು ಈ ಮೊದಲು ದಿಲ್ಲಿ, ಚೆನ್ನೈ, ಕೊಲ್ಕತ್ತಾಗೆ ಹೋಗುತ್ತಿದ್ದರು. ಆದರೆ ಈಗ ಬೆಂಗಳೂರು ನಂತರ ದಿಲ್ಲಿಗೆ ಬರುವ ಸಂದರ್ಭ ಬಂದಿದೆ ಎಂದು ಹೇಳಿದ್ದರು" ಎಂದರು.

ಬೆಂಗಳೂರಿನ ಆಸ್ತಿ ಮಾಲಕರ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಇ ಖಾತ ಮೂಲಕ ಭೂ ಗ್ಯಾರಂಟಿ ನೀಡಲಾಗಿದೆ. ಈ ನಗರಕ್ಕೆ ಬಂದು ಕಷ್ಟ ಪಟ್ಟು ಆಸ್ತಿ ಸಂಪಾದಿಸಿದ್ದಾರೆ ಅವರ ಪರವಾಗಿ ನಮ್ಮ ಸರ್ಕಾರ ನಿಂತಿದೆ. ಬಿ ಖಾತೆಯಿಂದ ಎ ಖಾತೆ ಮಾಡಿಕೊಡಲಾಗುತ್ತಿದೆ. ಕಷ್ಟಕಟ್ಟು ಆಸ್ತಿ ಸಂಪಾದಿಸಿದವರ ಪರವಾಗಿ ನಮ್ಮ ಸರ್ಕಾರವಿದೆ" ಎಂದರು.

*ನಗರದ ಅಭಿವೃದ್ಧಿಗೆ 1.25 ಲಕ್ಷ ಕೋಟಿ ರೂ. ಯೋಜನೆ

"ನಗರದ ಅಭಿವೃದ್ದಿಗೆ 1.25 ಲಕ್ಷ ಕೋಟಿ ಕಾರ್ಯಕ್ರಮ ರೂಪಿಸಿದ್ದೇನೆ. ಕೆಂಪೇಗೌಡರು ಕೇವಲ ಒಕ್ಕಲಿಗರ ಆಸ್ತಿಯಲ್ಲ. ಎಲ್ಲಾ ಜಾತಿ ಧರ್ಮದವರನ್ನು ಸೇರಿಸಿ ಈ ಕಾರ್ಯಕ್ರಮ ರೂಪಿಸಬೇಕು. ಆಗ ಮಾತ್ರ ಕೆಂಪೇಗೌಡರಿಗೆ ಗೌರವ ಸಲ್ಲಿಸಿದಂತೆ ಆಗುತ್ತದೆ" ಎಂದರು.

"ಕೃಷ್ಣ ಬೈರೇಗೌಡರು ವಿಮಾನ ನಿಲ್ದಾಣ ರಸ್ತೆಯಲ್ಲೇ ಬೆಂಗಳೂರು ಉತ್ತರದ ಕಚೇರಿಯನ್ನು ಬಹಳ ವಿಜೃಂಭಣೆಯಿಂದ ಕಟ್ಟಬೇಕು ಎಂದು ಜಾಗವನ್ನು ನಿಗದಿ ಮಾಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಎಂದರೆ ಜನಸಾಮಾನ್ಯರ ಅಭಿವೃದ್ಧಿ" ಎಂದು ಹೇಳಿದರು.

*ಯಲಹಂಕ ಒಕ್ಕಲಿಗರ ಸಂಘಕ್ಕೆ ರಿಯಾಯಿತಿ ದರದಲ್ಲಿ ಕೆಎಚ್ ಬಿ ನಿವೇಶನ

"ಕೆಎಚ್ ಬಿಯಿಂದ ಬೆಂಗಳೂರು ಉತ್ತರ ತಾಲೂಕು ಒಕ್ಕಲಿಗರ ಸಂಘಕ್ಕೆ ನೀಡಿರುವ ನಿವೇಶನಕ್ಕೆ 3.5 ಕೋಟಿ ರೂ. ಕಟ್ಟಬೇಕು ಎಂದು ಹೇಳಲಾಗಿತ್ತು. ಇದರ ಬಗ್ಗೆ ಸಂಸದ ಸುಧಾಕರ್ ಅವರು, ಮಾಜಿ ಶಾಸಕರಾದ ಗಂಟಿಗಾನಹಳ್ಳಿ ಕೃಷ್ಣಪ್ಪ ಅವರು ದರ ಕಡಿಮೆಗೆ ಮನವಿ ಮಾಡಿದ್ದಾರೆ. ಎಲ್ಲರ ಮನವಿಯಂತೆ ಈ ಜಾಗಕ್ಕೆ ಶೇ.10ರಷ್ಟು ದರ ನಿಗದಿ ಮಾಡಲಾಗುವುದು" ಎಂದು ಮುಖ್ಯಮಂತ್ರಿಯವರು ವೇದಿಕೆಯಲ್ಲೇ ರಿಯಾಯಿತಿ ಘೋಷಣೆ ಮಾಡಿದರು.

*ಬರಗಾಲ ಎದುರಿಸೋಣ

“ಕಳೆದ ಮೂರು ವರ್ಷಗಳಿಂದ ಉತ್ತಮವಾಗಿ ಮಳೆ ಬಂದಿತ್ತು. ಆದರೆ ಈ ವರ್ಷ ಇಡೀ ದೇಶದಲ್ಲಿ ಬರಗಾಲ ಆಗುವ ಸಂಭವಿಸಿದೆ. ನಾವೆಲ್ಲರೂ ಸೇರಿ ಬರಗಾಲ ಎದುರಿಸಬೇಕು. ರೈತರನ್ನು ಉಳಿಸಬೇಕು”ಎಂದು ತಿಳಿಸಿದರು.

“ತುಂಗಭದ್ರಾ ಅಣೆಕಟ್ಟು ಉಳಿಸಲು ಮೂರು ರಾಜ್ಯದ ಮುಖ್ಯಮಂತ್ರಿ ಸೇರಿ ಕೇಂದ್ರ ಜಲಶಕ್ತಿ ಸಚಿವರ ಸಮ್ಮುಖದಲ್ಲಿ ತೀರ್ಮಾನ ಮಾಡಿದ್ದೇವೆ. ಈ ಹಿಂದೆ ಇಂದಿರಾ ಗಾಂಧಿ ನೇತೃತ್ವದಲ್ಲಿ ಕಾವೇರಿ ಕುಡಿಯುವ ನೀರಿನ ಬಗ್ಗೆ ತೀರ್ಮಾನ ಮಾಡಲಾಗಿತ್ತು. ಅದೇ ರೀತಿ ಕೇಂದ್ರ ಜಲಶಕ್ತಿ ಸಚಿವರ ನೇತೃತ್ವದಲ್ಲಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ತೆಲಂಗಾಣ ಸಿಎಂ ರೇವಂತ ರೆಡ್ಡಿ ಹಾಗೂ ನಾನು ಸೇರಿ ಸಭೆ ನಡೆಸಿ ಒಂದು ಒಪ್ಪಂದಕ್ಕೆ ಬಂದಿದ್ದೇವೆ. ಈ ನೆಲ ಜಲಕ್ಕಾಗಿ ನಾವುಗಳೇ ಸಂಘರ್ಷ ಮಾಡಿಕೊಳ್ಳಬಾರದು. ನಾವೆಲ್ಲರೂ ಭಾರತೀಯರು, ಮಣ್ಣಿನ ಮಕ್ಕಳು. ಈ ಬೆಂಗಳೂರು ರೈತರ ತ್ಯಾಗದಿಂದ ಬೆಳೆದಿದೆ" ಎಂದರು.

*ವಿಧಾನಸೌಧ ಆವರಣದ ಕೆಂಪೇಗೌಡ ಪ್ರತಿಮೆಗೆ ಮಾಲಾರ್ಪಣೆ

ನಂತರ ಶಿವಕುಮಾರ್ ಅವರು ವಿಧಾನಸೌಧದ ಆವರಣದಲ್ಲಿರುವ ಕೆಂಪೇಗೌಡ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಬೆಂಗಳೂರನ್ನು ಮತ್ತೆ ಉದ್ಯಾನ ನಗರಿ ಮಾಡಲು ಇಂದು 15 ಲಕ್ಷ ಸಸಿ ನೆಡುತ್ತಿದ್ದೇವೆ. ಬೆಂಗಳೂರು ಹಾಗೂ ಸುತ್ತಮುತ್ತಲಿನ ಅರಣ್ಯ ಇಲಾಖೆ ಜಾಗಗಳಲ್ಲಿ ಉದ್ಯಾನ ನಿರ್ಮಿಸಲು ತೀರ್ಮಾನಿಸಲಾಗಿದೆ. ಆ ಮೂಲಕ ಬೆಂಗಳೂರಿನಲ್ಲಿ ಹಸಿರು ಉಳಿಸಿಕೊಳ್ಳಲಾಗುವುದು” ಎಂದು ಮಾಹಿತಿ ನೀಡಿದರು.

Tags

DK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X