ದರ್ಶನ್ ಪೊಲೀಸ್ ವಶಕ್ಕೆ: ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಕೊಲೆ?
![ದರ್ಶನ್ ಪೊಲೀಸ್ ವಶಕ್ಕೆ: ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಕೊಲೆ? ದರ್ಶನ್ ಪೊಲೀಸ್ ವಶಕ್ಕೆ: ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಕೊಲೆ?](https://www.varthabharati.in/h-upload/2024/06/11/1271408-.webp)
ಬೆಂಗಳೂರು, ಜೂ.11: ಯುವಕನೋರ್ವನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕನ್ನಡ ಚಿತ್ರನಟ ದರ್ಶನ್ ಅವರನ್ನು ವಶಕ್ಕೆ ಪಡೆದಿರುವುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ(33) ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದರ್ಶನ್ ರನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣದಲ್ಲಿ ಅವರ ಸಹಚರರಾದ 10ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
ದರ್ಶನ್ ರ ಆಪ್ತ ಮಹಿಳೆಯೊಬ್ಬರಿಗೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್ ಮಾಡಿದ್ದಕ್ಕಾಗಿ ಈ ಹತ್ಯೆ ನಡೆದಿದೆ ಎಂದು ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.
ಪ್ರಕರಣದ ತನಿಖೆ ಪ್ರಕ್ರಿಯೆ ನಡೆಯುತ್ತಿದ್ದು, ಈ ಹಂತದಲ್ಲಿ ಹೆಚ್ಚಿನ ಮಾಹಿತಿ ನೀಡಲಾಗದು. ಮುಂದಿನ ಹಂತದಲ್ಲಿ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದರು.
Next Story