Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪೆನ್ ಡ್ರೈವ್ ವಿಚಾರದಲ್ಲಿ...

ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಸ್ವಾಮಿಯವರು ನಿಲುವು ಬದಲಿಸುತ್ತಿರುವುದೇಕೆ?: ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ4 May 2024 2:25 PM IST
share
ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಸ್ವಾಮಿಯವರು ನಿಲುವು ಬದಲಿಸುತ್ತಿರುವುದೇಕೆ?: ಡಿ.ಕೆ. ಶಿವಕುಮಾರ್

ಬೆಂಗಳೂರು : “ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಸ್ವಾಮಿ ಆಗಾಗ್ಗೆ ನಿಲುವು ಬದಲಿಸುತ್ತಿರುವುದು ಏಕೆ? ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು.

"ಪೆನ್ ಡ್ರೈವ್ ಅವರ ಕುಟುಂಬದ ವಿಚಾರ. ಆದರೆ ಕುಮಾರಸ್ವಾಮಿ ಮಾತು ಆಗಾಗ್ಗೆ ಬದಲಾಗುತ್ತಲೇ ಬಂದಿದೆ. ಬೇಕಿದ್ದರೆ ಕಳೆದ ವಿಧಾನಸಭೆ ಚುನಾವಣೆಯಿಂದ ಈಚೆಗೆ ಅವರ ಕುಟುಂಬ ಸದಸ್ಯರ ಹೇಳಿಕೆಗಳನ್ನು ನೋಡಿಕೊಂಡು ಬನ್ನಿ. ಈಗ ಪೆನ್ ಡ್ರೈವ್ ಪ್ರಕರಣದಲ್ಲೂ ಕುಮಾರಸ್ವಾಮಿ ಅವರು ಗಂಟೆಗೊಂದು, ಗಳಿಗೆಗೊಂದು ಹೇಳಿಕೆ ನೀಡುತ್ತಿದ್ದಾರೆ. ನಿಲುವು ಬದಲಿಸುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಮೇ 7ರ ನಂತರ ಈ ಪ್ರಕರಣ ಎಲ್ಲಿಗೆ ಹೋಗುತ್ತೆ ಎಂದು ಎಲ್ಲರಿಗೂ ಗೊತ್ತು ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, “ಮೇ 7 ರವರೆಗೆ ಯಾಕೆ ಕಾಯಬೇಕು? ಇದರ ಮೂಲ ಏನು? ಇದರ ಹಿನ್ನೆಲೆ ಯಾರು ಎಂದು ನಾವು ಬಿಚ್ಚಿಡಬೇಕಾ?. ಇದು ಅವರ ಕುಟುಂಬದ ಆಂತರಿಕ ವಿಚಾರ. ಈ ಬಗ್ಗೆ ಮಾಧ್ಯಮದವರು ವಿಶ್ಲೇಷಣೆ ಮಾಡಿದ್ದಾರೆ. ಕುಮಾರಸ್ವಾಮಿ ಅವರೇ, "ಉಪ್ಪು ತಿಂದವರು ನೀರು ಕುಡಿಯಬೇಕು, ನಮ್ಮ ಕುಟುಂಬ ಬೇರೆ, ಅವರ ಕುಟುಂಬ ಬೇರೆ" ಎಂದು ಹೇಳಿದ್ದಾರೆ. ಹಿಂದೆ ನಮ್ಮ ಕುಟುಂಬದವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಹೇಳಿದ್ದೂ ಅವರೇ. ಪ್ರಜ್ವಲ್ ನಿಂದ ತಪ್ಪಾಗಿದೆ ಕ್ಷಮಿಸಿ ಎಂದು ಕ್ಷಮೆ ಕೇಳಿದ್ದೂ ಅವರೇ. ಆದರೆ ಕುಮಾರಸ್ವಾಮಿ ಈಗ ತಮ್ಮ ನಿಲುವು ಬದಲಿಸುತ್ತಿರುವುದೇಕೆ?” ಎಂದರು.

ಜೆಡಿಎಸ್ ಶಾಸಕರು ನನ್ನ ಸಂಪರ್ಕದಲ್ಲಿಲ್ಲ:

ಪ್ರಜ್ವಲ್ ರೇವಣ್ಣ ಅವರ ವಿಚಾರದಿಂದ ಜೆಡಿಎಸ್ ಪಕ್ಷದ 12 ಶಾಸಕರು ಕಾಂಗ್ರೆಸ್ ಸೇರುತ್ತಿದ್ದಾರೆ ಎಂಬ ಚರ್ಚೆ ಬಗ್ಗೆ ಕೇಳಿದಾಗ, “ಅದೆಲ್ಲವೂ ಸುಳ್ಳು, ನನ್ನ ಜತೆ ಯಾರೊಬ್ಬರೂ ಸಂಪರ್ಕದಲ್ಲಿಲ್ಲ. ನಾನು ಯಾರ ಜತೆಯೂ ಮಾತುಕತೆ ನಡೆಸಿಲ್ಲ. ಸುಮ್ಮನೆ ಊಹಾಪೋಹಾ ಸುದ್ದಿಗಳನ್ನು ಹರಡಿಸುತ್ತಿದ್ದಾರೆ. ಅವರ ಪಕ್ಷದಲ್ಲಿ ಹಾಗೂ ಕುಟುಂಬದಲ್ಲಿನ ಆಂತರಿಕ ಸಮಸ್ಯೆಗಳು ಎಲ್ಲರಿಗೂ ಗೊತ್ತಿದೆ. ಈಗ ನಾನು ಆ ಬಗ್ಗೆ ಚರ್ಚೆ ಮಾಡುವುದಿಲ್ಲ. ವಿಧಾನಸಭೆ ಚುನಾವಣೆ ಟಿಕೆಟ್ ಹಂಚಿಕೆ ಮಾಡುವ ಸಮಯದಿಂದಲೂ ಅವರ ಕುಟುಂಬದವರ ಹೇಳಿಕೆಗಳನ್ನು ಗಮನಿಸಿಕೊಂಡು ಬನ್ನಿ. ಅವರು ಬಿಜೆಪಿ ಜತೆ ಮೈತ್ರಿಯಾದರೂ ಮಾಡಿಕೊಳ್ಳಲಿ, ಪಕ್ಷವನ್ನು ವಿಲೀನವಾದರೂ ಮಾಡಿಕೊಳ್ಳಲಿ, ಅದಕ್ಕೂ ನಮಗೂ ಸಂಬಂಧ ಇಲ್ಲ” ಎಂದರು.

ನನಗೆ ನಾಯಕತ್ವ ಪಟ್ಟ ಬೇಡ:

ರಾಜ್ಯದಲ್ಲಿ ಒಕ್ಕಲಿಗರ ನಾಯಕತ್ವಕ್ಕಾಗಿ ಇಂತಹ ಪ್ರಕರಣಗಳು ಆಚೆ ಬರುತ್ತಿವೆ ಎಂಬ ಮಾತಿನ ಬಗ್ಗೆ ಕೇಳಿದಾಗ, “ಇದೆಲ್ಲವೂ ಬಿಜೆಪಿ ಸೃಷ್ಟಿಸಿರುವ ಚರ್ಚೆಗಳು. ನನಗೆ ಯಾವುದೇ ನಾಯಕತ್ವ ಬೇಡ. ಕಾಂಗ್ರೆಸ್ ಪಕ್ಷ ನಾಲ್ಕು ವರ್ಷಗಳ ಹಿಂದೆಯೇ ನನ್ನನ್ನು ರಾಜ್ಯದ ಅಧ್ಯಕ್ಷನಾಗಿ ಮಾಡಿದೆ. ನಾನು ಕಾಂಗ್ರೆಸ್ ಅಧ್ಯಕ್ಷ . ಬಿಜೆಪಿಗರು ಗಂಟೆಗೊಂದು ಗಳಿಗೆಗೊಂದು ಮಾತನಾಡುತ್ತಿದ್ದಾರೆ. ನಾನು ಒಕ್ಕಲಿಗನಾಗಿ ಹುಟ್ಟಿದ್ದೇನೆ. ಆ ಸಮಾಜಕ್ಕೆ ರಕ್ಷಣೆ ಕೊಡುವ ಜವಾಬ್ದಾರಿ ಇದೆ. ಈ ಸಮುದಾಯದ ಜನರ ಸ್ವಾಭಿಮಾನ, ಗೌರವ ಉಳಿಸಲು ನಾನು ಅವರ ಸೇವೆ ಮಾಡುತ್ತೇನೆ. ಅದು ನನ್ನ ಧರ್ಮ. ಉಳಿದಂತೆ ನನಗೆ ನಾಯಕತ್ವದ ಪಟ್ಟ ಬೇಡ” ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X