Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಶಾಲಾ-ಕಾಲೇಜುಗಳಲ್ಲಿ ಕಲೆಗಳ ಸ್ಪರ್ಧೆ...

ಶಾಲಾ-ಕಾಲೇಜುಗಳಲ್ಲಿ ಕಲೆಗಳ ಸ್ಪರ್ಧೆ ನಡೆಸಲು 25ಕೋಟಿ ರೂ.ಮೀಸಲು : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ12 Jun 2025 9:29 PM IST
share
ಶಾಲಾ-ಕಾಲೇಜುಗಳಲ್ಲಿ ಕಲೆಗಳ ಸ್ಪರ್ಧೆ ನಡೆಸಲು 25ಕೋಟಿ ರೂ.ಮೀಸಲು : ಡಿ.ಕೆ.ಶಿವಕುಮಾರ್

ಬೆಂಗಳೂರು : ‘ಮುಂದಿನ ದಿನಗಳಲ್ಲಿ ಶಾಲೆ-ಕಾಲೇಜುಗಳಲ್ಲಿ ಹಾಗೂ ಸಂಘ-ಸಂಸ್ಥೆಗಳಲ್ಲಿ ಕಲೆಯ ಬಗ್ಗೆ ಸ್ಪರ್ಧೆಯನ್ನು ಏರ್ಪಡಿಸಲು ತೀರ್ಮಾನಿಸಲಾಗುವುದು. ಅದಕ್ಕಾಗಿ 25 ಕೋಟಿ ರೂ. ಮೀಸಲಿಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಪುರಾತತ್ವ ಸಂಗ್ರಹಾಲಯಗಳು ಹಾಗೂ ಪರಂಪರೆ ಇಲಾಖೆ, ಬ್ರಿಗೇಡ್ ಫೌಂಡೇಷನ್ ವತಿಯಿಂದ ಆಯೋಜಿಸಲಾಗಿದ್ದ ‘ನವೀಕೃತ ವೆಂಕಟಪ್ಪ ಚಿತ್ರಶಾಲೆಯ ಉದ್ಘಾಟನೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವರ್ಷಕ್ಕೆ ಮೂರು ದಿನ ಕಲೆಗಳನ್ನು ಉಳಿಸಲು ಸ್ಪರ್ಧೆ ನಡೆಸಿ ಪ್ರಶಸ್ತಿಗಳನ್ನು ನೀಡಲಾಗುವುದು. ಇದರ ಬಗ್ಗೆ ಶಿಕ್ಷಣ ಇಲಾಖೆ, ಪ್ರವಾಸೋದ್ಯಮ ಇಲಾಖೆಯ ಜತೆಗೆ ಚರ್ಚಿಸಲಾಗುವುದು ಎಂದು ಹೇಳಿದರು.

ಕಲೆ, ಸಂಸ್ಕೃತಿ ದೇಶದ ಆಸ್ತಿ. ನಮ್ಮ ಪರಂಪರೆಯನ್ನು ಮುಂದಿನ ಪೀಳಿಗೆಗೆ ಉಳಿಸಿಕೊಳ್ಳಬೇಕು. ಕಲೆ ಕಲೆಗಾಗಿ ಅಲ್ಲ ಅದು ಸಮಾಜಕ್ಕಾಗಿ. ಕಲೆ ಉಳಿಸಲು ಹೆಚ್ಚಿನ ಪ್ರೋತ್ಸಾಹ ನೀಡುವುದು ನನ್ನ ಕರ್ತವ್ಯ ಎಂದು ಅವರು ತಿಳಿಸಿದರು.

ಕನ್ನಡ ಸಂಸ್ಕೃತಿ ಒಂದು ಭಾಗ ಪ್ರವಾಸೋದ್ಯಮ ಒಂದು ಭಾಗ. ಬ್ರಿಗೇಡ್ ಫೌಂಡೇಷನ್ ಹಾಗೂ ಎಂ.ಆರ್.ಜೈಶಂಕರ್ ಅವರ ಕೆಲಸದ ಬಗ್ಗೆ ಬಹಳ ನಂಬಿಕೆಯಿದೆ. ಸರಕಾರ ಬರೀ ವಿಧಾನಸೌಧ, ಹೈಕೋರ್ಟ್ ಹಾಗೂ ಕೆಲವು ಕಟ್ಟಡಗಳನ್ನು ನಿರ್ಮಾಣ ಮಾಡಿದೆ. ಉಳಿದಿರುವ ಕಟ್ಟಡಗಳನ್ನು ಬ್ರಿಗೇಡ್, ಪ್ರೆಸ್ಟೀಜ್‍ನಂತಹ ಕಂಪೆನಿಗಳು ಕಟ್ಟಿವೆ ಎಂದು ತಿಳಿಸಿದರು.

ಸರಕಾರ ಮುಕ್ತವಾಗಿದೆ. ಸಾರ್ವಜನಿಕರು ಸರಕಾರಕ್ಕೆ ಸಲಹೆಗಳನ್ನು ನೀಡಬಹುದು. ನಮ್ಮ ಇತಿಹಾಸವನ್ನು ಉಳಿಸಿಕೊಳ್ಳಬೇಕು. ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ಕೊಡುವ ಕೆಲಸವಾಗಬೇಕು. ಬೆಂಗಳೂರಿನಲ್ಲಿ ಟ್ರಾಫಿಕ್ ಹೆಚ್ಚಾಗಿರಬಹುದು. ಆದರೆ ಬೆಂಗಳೂರಿಗೆ ಹೊಸ ರೂಪವನ್ನು ನೀಡುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು ಎಂದು ಹೇಳಿದರು.

ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ಸರಕಾರ, ಸಾರ್ವಜನಿಕರು ಮತ್ತು ಖಾಸಗಿ ಕಂಪೆನಿಗಳು ಪ್ರಾಮಾಣಿಕವಾಗಿ ಕೈಜೋಡಿಸಿದರೆ, ವೆಂಕಟಪ್ಪ ಗ್ಯಾಲರಿ ರೀತಿಯಲ್ಲಿ ಉತ್ತಮ ಕೆಲಸಗಳು ಆಗುತ್ತವೆ. 8ರಿಂದ 9 ಕೋಟಿ ರೂ.ನಲ್ಲಿ ವೆಂಕಟಪ್ಪ ಚಿತ್ರ ಶಾಲೆ ನಿರ್ಮಾಣ ಮಾಡಲಾಗಿದೆ. ವೆಂಕಟಪ್ಪ ಅವರನ್ನು ಕಲಾ ತಪಸ್ವಿ ಎಂದು ಗುರುತಿಸುತ್ತೇವೆ. ಅವರೂ ಅವರ ಕೃತಿಗಳು ಕರ್ನಾಟಕದ ಆಸ್ತಿ. ಕಲೆಯ ಸೇವೆಗಾಗಿ ಅವರು ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು ಎಂದು ತಿಳಿಸಿದರು.

ಕಲಾವಿದ ಕೆ.ಕೆ.ಹೆಬ್ಬಾರ್ ಅವರ ಕಲಾಕೃತಿಗಳು ಎಲ್ಲರ ಗಮನಸೆಳೆಯುತ್ತವೆ. ರುಮಾಲೆ ಚನ್ನಬಸಪ್ಪ ಅವರು ವಿಧಾನ ಪರಿಷತ್ ಸದಸ್ಯರಾಗಿದ್ದರೂ ಕೂಡ ಅವರು ರಾಜಕೀಯವನ್ನು ತೊರೆದು ಚಿತ್ರಕಲೆಯಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದರು. ಅವರ ಜೀವನ ಸ್ವಾತಂತ್ರ್ಯ ಹೋರಾಟ ಮತ್ತು ಚಿತ್ರಕಲೆಗೆ ಮೀಸಲಿಟ್ಟಿದ್ದರು ಎಂದು ನೆನಪು ಮಾಡಿಕೊಂಡರು.

ಬ್ರಿಗೇಡ್ ಫೌಂಡೇಷನ್ ಹೆಸರಿನಲ್ಲಿ ಒಂದು ಗ್ಯಾಲರಿ ಮಾಡಲು ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು. ಗ್ರಾಮಾಂತರ ಪ್ರದೇಶದ ಶಿಲ್ಪಕಲೆಗಳನ್ನು ಬ್ರಿಗೇಡ್ ಸಂಸ್ಥೆ ಅಭಿವೃದ್ಧಿ ಪಡಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕ ರಿಝ್ವಾನ್ ಅರ್ಶದ್ ಬ್ರಿಗೇಡ್ ಫೌಂಡೇಷನ್ ಕಾರ್ಯಾಧ್ಯಕ್ಷ ಎಂ.ಆರ್. ಜೈಶಂಕರ್, ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಪ್ರವಾಸೋದ್ಯಮ ಇಲಾಖೆಯ ಸರಕಾರದ ಕಾರ್ಯದರ್ಶಿ ಸಲ್ಮಾ.ಕೆ.ಫಹೀಂ, ಪುರಾತತ್ವ ಸಂಗ್ರಹಾಲಯಗಳು ಹಾಗೂ ಪರಂಪರೆ ಇಲಾಖೆಯ ಆಯುಕ್ತ ದೇವರಾಜು.ಎ ಮತ್ತಿತರರು ಉಪಸ್ಥಿತರಿದ್ದರು.

Renewed - Art!

ಕಸ್ತೂರ ಬಾ ರಸ್ತೆಯಲ್ಲಿರುವ ವೆಂಕಟಪ್ಪ ಕಲಾ ಗ್ಯಾಲರಿಯ ನವೀಕೃತ ಕಟ್ಟಡಕ್ಕೆ ಮಾನ್ಯ ಸಚಿವರಾದ ಎಚ್.ಕೆ.ಪಾಟೀಲ್ ಅವರೊಂದಿಗೆ ಸೇರಿ ಉದ್ಘಾಟನೆ ನೆರವೇರಿಸಿದೆ.

‘ಸ್ಮಾರಕ ದತ್ತು’ ಯೋಜನೆಯಡಿ ಬ್ರಿಗೇಡ್ ಫೌಂಡೇಷನ್ ಈ ಗ್ಯಾಲರಿಗೆ ಆಧುನಿಕ ಸ್ಪರ್ಶ ನೀಡಿದೆ. ಸ್ಮಾರಕಗಳ ಸಂರಕ್ಷಣೆಗೆ ಬ್ರಿಗೇಡ್ ಗ್ರೂಪ್‌ನಂತಹ ಸಂಘ- ಸಂಸ್ಥೆಗಳು… pic.twitter.com/lQKoQMbkXn

— DK Shivakumar (@DKShivakumar) June 12, 2025


share
ವಾರ್ತಾಭಾರತಿ
ವಾರ್ತಾಭಾರತಿ
Next Story
X