Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪಶುಪಾಲಕ ಸಮುದಾಯಗಳ ಆರ್ಥಿಕ...

ಪಶುಪಾಲಕ ಸಮುದಾಯಗಳ ಆರ್ಥಿಕ ಪ್ರೋತ್ಸಾಹಕ್ಕೆ ಕ್ರಿಯಾ ಯೋಜನೆ ಅಗತ್ಯ : ಡಾ.ಬಂಜಗೆರೆ ಜಯಪ್ರಕಾಶ್

ವಾರ್ತಾಭಾರತಿವಾರ್ತಾಭಾರತಿ8 Feb 2025 9:41 PM IST
share
ಪಶುಪಾಲಕ ಸಮುದಾಯಗಳ ಆರ್ಥಿಕ ಪ್ರೋತ್ಸಾಹಕ್ಕೆ ಕ್ರಿಯಾ ಯೋಜನೆ ಅಗತ್ಯ : ಡಾ.ಬಂಜಗೆರೆ ಜಯಪ್ರಕಾಶ್

ಬೆಂಗಳೂರು : ಪಶುಪಾಲಕ ಸಮುದಾಯಗಳಿಗೆ ಆರ್ಥಿಕ ಚಟುವಟಿಕೆಗಳಿಗೆ ಸರಕಾರದ ಪ್ರೋತ್ಸಾಹ ಏನು ಎಂಬುದಕ್ಕೆ ಕ್ರಿಯಾ ಯೋಜನೆ ಅಗತ್ಯವಿದೆ ಎಂದು ಸಂಸ್ಕೃತ ಚಿಂತಕ ಡಾ.ಬಂಜಗೆರೆ ಜಯಪ್ರಕಾಶ್ ತಿಳಿಸಿದ್ದಾರೆ.

ಶನಿವಾರ ನಗರದ ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದಲ್ಲಿ ಸೆಂಟರ್ ಫಾರ್ ಪ್ರಾಸ್ಟೋರಲಿಸಮ್ ಸಹಜೀವನ್ ವತಿಯಿಂದ ಆಯೋಜಸಿದ್ದ ಪಶುಪಾಲಕ ಕರ್ನಾಟಕ, ಕಥನಗಳು ಮತ್ತು ಮುಂದಿನ ನಡೆಗಳ ಕುರಿತ ದುಂಡುಮೇಜಿನ ಸಭೆಯಲ್ಲಿ ಮಾತನಾಡಿದ ಅವರು, ಪಶುಪಾಲನೆ ಸಮುದಾಯಗಳ ಜೀವನ ಶೈಲಿ ಮತ್ತು ಸಾಂಸ್ಕೃತಿಕತೆಗೆ ಮಹತ್ವ ಕಲ್ಪಿಸಲು ಏನು ಕಾರ್ಯಕ್ರಮ ರೂಪಿಸಬಹುದು ಎಂಬುದನ್ನು ಸರಕಾರ ಚಿಂತನೆ ನಡೆಸಬೇಕು.

ಅರಣ್ಯದಲ್ಲಿ ಕುರಿ, ಮೇಕೆ, ದನ ಮೇಯಿಸಲು ಕೆಲವು ನಿಯಮಗಳಿವೆ. ಮೇಕೆಗಳು ಮಾತ್ರ ಸಸಿಗಳು ಹುಟ್ಟುವ ಸಮಯದಲ್ಲಿ ಅವುಗಳನ್ನು ರಕ್ಷಿತಾರಣ್ಯಗಳಿಗೆ ಬಿಡಬಾರದು ಎಂಬುದು ಒಂದು ನಿಯಮ. ಇದು ಕುರಿ ಮತ್ತು ದನಗಳಿಗೆ ಸಂಬಂಧಿಸಿದ್ದು ಅಲ್ಲ ಎಂದು ತಿಳಿಸಿದರು.

ಕುರಿ, ದನಗಳು ಅರಣ್ಯಗಳ ಬೆಳವಣಿಗೆಗೆ ಪೂರಕವಾಗಿರುತ್ತವೆಯೋ, ವಿರೋಧವಾಗಿರುತ್ತವೆಯೋ ಎಂಬುದು ಅರಣ್ಯ ಅಧಿಕಾರಿಗಳಿಗೆ ಸ್ಪಷ್ಟತೆಯಿಲ್ಲ ಎನಿಸುತ್ತದೆ. ದನ, ಕುರಿಗಳನ್ನು ಅರಣ್ಯದಲ್ಲಿ ಮೇಯಿಸಲು ಅವಕಾಶ ನೀಡಬೇಕು. ಜಾಗಗಳನ್ನಾದರೂ ಗುರುತಿಸಬೇಕು. ಸಾಧ್ಯವಾದರೆ ಮೇಯಿಸಬಹುದಾದ ಜಾಗಗಳಿಗೆ ಬೇಲಿ ಹಾಕಬೇಕು ಎಂದು ಒತ್ತಾಯಿಸಿದರು.

ಕೆರೆ ಬಯಲುಗಳನ್ನು ಹಂಚಬಾರದು, ಗೋಮಾಳಗಳನ್ನು ದರ್ಖಾಸ್ಥುಗೊಳಿಸಬಾರದು. ಹಂದಿಯೂ ಸೇರಿದಂತೆ ಸಾಕಾಣಿಗೆ ಒಳಪಡುವ ಎಲ್ಲ ಪ್ರಾಣಿಗಳಿಗೆ ವಿಮೆ ಮಾಡಬೇಕು. ಅವು ಸತ್ತರೆ ನಷ್ಟವಾಗಿರುವವರಿಗೆ ಹಣಕಾಸಿನ ನೆರವು ನೀಡಬೇಕು ಎನ್ನುವ ನೀತಿಯನ್ನು ರೂಪಿಸಬೇಕು ಎಂದು ಆಗ್ರಹಿಸಿದರು.

ವೃತ್ತಿಯಿಂದಾಗಿ ಪಶುಪಾಲಕರಾಗಿರುವವರಿಗೆ ವಿಶೇಷ ಯೋಜನೆಯನ್ನು ರೂಪಿಸಬೇಕು. ಅಲೆಮಾರಿ ಕುರಿಗಾಹಿಗಳಿಗೆ ಸಂಚಾರ ಹೊರಟಾಗ ಅಗತ್ಯ ವೈದ್ಯಕೀಯ ಚಿಕಿತ್ಸೆ ನೀಡಬೇಕು. ಸಿಡಿಲಿನಿಂದ ರಕ್ಷಿಸುವ ಟೆಂಟ್‍ಗಳನ್ನು ನಿರ್ಮಾಣ ಮಾಡಿಕೊಡಬೇಕು ಎಂದು ತಿಳಿಸಿದರು.

ಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿ ಡಾ.ನೆಲ್ಲುಕುಂಟೆ ವೆಂಕಟೇಶ್ ಮಾತನಾಡಿ, ಪಶುಪಾಲಕ ಸಮುದಾಯಗಳು ಒಂದು ವರ್ಗವಾಗಿ ಯೋಚನೆ ಮಾಡುವ ಅನಿವಾರ್ಯತೆ ಇದೆ. ಭಾರತದಲ್ಲಿ ಶೇ.20ರಿಂದ 25ರಷ್ಟು ಪಶುಪಾಲಕ ಸಮುದಾಯಗಳಿವೆ. ಈಗಾಗಲೇ ಅಲೆಮಾರಿ ಕುರಿಗಾರರ ರಕ್ಷಣೆಗಾಗಿ ಒಂದು ಕಾಯ್ದೆ ಸಿದ್ಧವಾಗುತ್ತಿದೆ. ಕಾಯ್ದೆಯಲ್ಲಿ ಬಂದೂಕು ಪರವಾನಿಗೆ, ಟೆಂಟ್ ನೀಡುವುದು ಸೇರಿದಂತೆ ಅನೇಕ ವಿಷಯಗಳಿವೆ ಎಂದರು.

ಆಕಸ್ಮಿಕವಾಗಿ ಮರಣಹೊಂದಿದ ಕುರಿ, ಹಸು ಇತ್ಯಾದಿ ಪ್ರಾಣಿಗಳ ಮಾಲಕರಿಗೆ ನೀಡುತ್ತಿದ್ದ 5ಸಾವಿರ ರೂ. ಪರಿಹಾರವನ್ನು ಹೆಚ್ಚು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಂಬರಲಿರುವ ಬಜೆಟ್‍ನಲ್ಲೆ ಘೋಷಣೆ ಮಾಡಲಿದ್ದಾರೆ. ಪಶುಪಾಲಕರನ್ನು ಡಿಸಿಸಿ ಬ್ಯಾಂಕ್‍ನ ಸದಸ್ಯರಾಗಲು, ಔಷಧಿ ನೀಡುವುದು, ಲಸಿಕೆ ಇತ್ಯಾದಿಗಳ ಬಗ್ಗೆ ಚಿಂತನೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಮಾಹಿತಿ ನೀಡಿದರು.

ದುಂಡುಮೇಜಿನ ಸಭೆಯಲ್ಲಿ ಸಾಹಿತಿಗಳಾದ ಕೋಟಿಗಾನಹಳ್ಳಿ ರಾಮಯ್ಯ, ಡಾ.ರಹಮತ್ ತರಿಕೆರೆ, ಪ್ರೊ. ರಾಜಪ್ಪ ದಳವಾಯಿ, ಡಾ.ವಡ್ಡಗೆರೆ ನಾಗರಾಜಯ್ಯ, ಡಾ.ಮುತ್ತಯ್ಯ, ಡಾ.ಲಕ್ಷ್ಮೀಪತಿ ಸಿ.ಜಿ., ರವಿಕುಮಾರ್ ಬಾಗಿ, ಡಾ.ಪ್ರೇಮಾ ಜಿ.ಕೆ, ಹರ್ಷಕುಮಾರ್ ಕುಗ್ವೆ ಮತ್ತಿತರರು ಉಪಸ್ಥಿತರಿದ್ದರು.

ಸಭೆಯ ನಿರ್ಣಯಗಳು: ಪಶುಪಾಲಕ ಮಾರ್ಗಗಳ ರಕ್ಷಣೆ, ಕುರಿಗಾರರ ಮಕ್ಕಳಿಗೆ ಟೆಂಟ್ ಶಾಲೆ ನಿರ್ಮಾಣ, ಭೂ ಮಾಲಕರಿಂದ ಕುರಿಗಾರರಿಗೆ ಆಗುವ ಕಿರುಕುಳ ತಡೆಯಲು ಕಾನೂನು ರೂಪಿಸಬೇಕು. ಗೋಮಾಳ, ಕೆರೆಗಳ ಒತ್ತುವರಿ ತೆರವುಗೊಳಸಿ ಕುರಿ-ಆಡು ಮೇಯಿಸಲು ಅವಕಾಶ ಕಲ್ಪಿಸಬೇಕು. ಕುರಿ ಮತ್ತು ಉಣ್ಣೆ ಉತ್ಪಾದನಾ ಸಹಕಾರ ಸಂಘಗಳ ಸಬಲೀಕರಣ, ಎಪಿಎಂಸಿ ವ್ಯಾಪ್ತಿಯಲ್ಲಿ ಕುರಿ ಸಂತೆ ನಡೆಸಲು ಮೂಲಸೌಕರ್ಯ, ಆಧುನಿಕ ತೂಕದ ವ್ಯವಸ್ಥೆ ಮಾಡಬೇಕು. ಬಿಬಿಎಂಪಿ ವ್ಯಾಪ್ತಿಯಲ್ಲಿ 200 ಮೀಟ್ ಪಾರ್ಲರ್ ತೆರೆಯಬೇಕು. ಮಾಂಸ, ಚರ್ಮ, ಉಣ್ಣೆ ಸಂಸ್ಕರಣೆ, ಮೌಲ್ಯವರ್ಧನೆ, ಮಾರುಕಟ್ಟೆ ಕುರಿತಾದ ಡಿಪ್ಲೊಮಾ ಕೋರ್ಸ್ ತೆರೆಯಬೇಕು ಎಂಬುದು ಸೇರಿ ಅನೇಕ ನಿರ್ಣಯಗಳನ್ನು ಕೈಗೊಳ್ಳಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X