Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯದ 175 ಸಾಂತ್ವನ ಕೇಂದ್ರಗಳಲ್ಲಿ...

ರಾಜ್ಯದ 175 ಸಾಂತ್ವನ ಕೇಂದ್ರಗಳಲ್ಲಿ ವಿವಾಹಪೂರ್ವ ಸಮಾಲೋಚನಾ ಕೇಂದ್ರ ಆರಂಭ: ಡಾ.ನಾಗಲಕ್ಷ್ಮೀ ಚೌಧರಿ

ವಾರ್ತಾಭಾರತಿವಾರ್ತಾಭಾರತಿ10 Aug 2026 9:45 PM IST
share
ರಾಜ್ಯದ 175 ಸಾಂತ್ವನ ಕೇಂದ್ರಗಳಲ್ಲಿ ವಿವಾಹಪೂರ್ವ ಸಮಾಲೋಚನಾ ಕೇಂದ್ರ ಆರಂಭ: ಡಾ.ನಾಗಲಕ್ಷ್ಮೀ ಚೌಧರಿ

ಬೆಂಗಳೂರು : ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೌಟುಂಬಿಕ ಕಲಹ ಹಾಗೂ ವಿಚ್ಛೇದನ ಪ್ರಕರಣಗಳನ್ನು ಕಡಿಮೆ ಮಾಡುವ ದೃಷ್ಠಿಯಿಂದ ರಾಜ್ಯದ 175 ಸಾಂತ್ವನ ಕೇಂದ್ರಗಳಲ್ಲಿ ವಿವಾಹಪೂರ್ವ ಸಮಾಲೋಚನಾ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಡಾ.ನಾಗಲಕ್ಷೀ ಚೌಧರಿ ತಿಳಿಸಿದ್ದಾರೆ.

ಸೋಮವಾರ ನಗರದ ಮಹಿಳಾ ಆಯೋಗದ ಅಧ್ಯಕ್ಷರ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದ 175 ಸಾಂತ್ವನ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಮಾಲೋಚಕರಿಗೆ ವಿಶೇಷ ತರಬೇತಿಯನ್ನು ನೀಡಲಾಗುತ್ತಿದ್ದು, ಪ್ರತಿ ಕೇಂದ್ರದಲ್ಲಿ ಸುಮಾರು ಐದು ಮಂದಿ ಸಮಾಲೋಚಕರಿಗೆ ವಿವಾಹಪೂರ್ವ ಸಂವಹನ ಹಾಗೂ ಸಮಾಲೋಚನಾ ವಿಧಾನಗಳ ಕುರಿತು ತರಬೇತಿ ನೀಡಲಾಗುತ್ತಿದೆ ಎಂದರು.

ವಿವಾಹಪೂರ್ವ ಸಮಾಲೋಚನಾ ತರಬೇತಿ ಪೂರ್ಣಗೊಂಡ ಬಳಿಕ ಆಯಾ ಸಾಂತ್ವನ ಕೇಂದ್ರಗಳ ಮೂಲಕ ವಿವಾಹಪೂರ್ವ ಸಮಾಲೋಚನೆ ಸೇವೆಗಳನ್ನು ಪರಿಣಾಮಕಾರಿಯಾಗಿ ಒದಗಿಸಲಾಗುವುದು. ಮದುವೆಯು ಕೇವಲ ಆಡಂಬರಕ್ಕೆ ಸೀಮಿತವಾಗದೆ, ಶಾಶ್ವತವಾಗಿ ಉತ್ತಮ ಕೌಟುಂಬಿಕ ಜೀವನ ಕಟ್ಟಿಕೊಳ್ಳಲು ಬುನಾದಿಯಾಗಬೇಕು ಎಂದು ಅವರು ಹೇಳಿದರು.

ರಾಜ್ಯದಲ್ಲಿ ಹೆಚ್ಚುತ್ತಿರುವ ಕೌಟುಂಬಿಕ ಕಲಹ ಹಾಗೂ ವಿಚ್ಛೇದನ ಪ್ರಕರಣಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಷ್ಟ್ರೀಯ ಮಹಿಳಾ ಆಯೋಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಸಹಯೋಗದಲ್ಲಿ “ತೆರೆ ಮೇರೆ ಸಾಥ್ - ಕೂಡಿ ಬಾಳೋಣ” ಕಾರ್ಯಕ್ರಮವನ್ನು ಪ್ರತಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಯೋಜನೆಗೆ ಆ.10ರಂದು ಚಾಲನೆ ನೀಡಲಾಗಿದ್ದು, ರಾಜ್ಯದ 175 ಸಾಂತ್ವನ ಕೇಂದ್ರಗಳಲ್ಲಿ ವಿವಾಹಪೂರ್ವ ಸಂವಹನ ಕೇಂದ್ರಗಳನ್ನು ಯಶಸ್ವಿಯಾಗಿ ಆರಂಭಿಸಲಾಗುತ್ತಿದೆ ಎಂದು ಡಾ.ನಾಗಲಕ್ಷೀ ಚೌಧರಿ ಹೇಳಿದರು.

ವಿವಾಹಕ್ಕೂ ಮುನ್ನ ಯುವಜನರು ಹಾಗೂ ಭಾವಿ ದಂಪತಿಗಳಿಗೆ ಪರಸ್ಪರ ಅರಿವು, ಪರಿಣಾಮಕಾರಿ ಸಂವಹನ, ಭಿನ್ನಾಭಿಪ್ರಾಯಗಳ ಪರಿಹಾರ, ಭಾವನಾತ್ಮಕ ಸಿದ್ಧತೆ, ಆರ್ಥಿಕ ನಿರ್ವಹಣೆ, ಲಿಂಗ ಸಮಾನತೆ, ಪರಸ್ಪರ ಗೌರವ ಸೇರಿದಂತೆ ಕೌಟುಂಬಿಕ ಜೀವನಕ್ಕೆ ಅಗತ್ಯವಾದ ವಿವಿಧ ವಿಷಯಗಳ ಕುರಿತು ಸಮಾಲೋಚನೆ ನೀಡಲಾಗುವುದು. ವಿವಾಹಕ್ಕೂ ಮುನ್ನವೇ ಸೂಕ್ತ ಅರಿವು ಮೂಡಿಸಿ, ದಂಪತಿಗಳ ನಡುವೆ ಉತ್ತಮ ಸಂವಹನ ಬೆಳೆಸುವ ಮೂಲಕ ಕೌಟುಂಬಿಕ ಸಮಸ್ಯೆಗಳು ಹಾಗೂ ವಿಚ್ಛೇದನ ಪ್ರಕರಣಗಳನ್ನು ಕಡಿಮೆ ಮಾಡುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ಡಾ.ನಾಗಲಕ್ಷೀ ಚೌಧರಿ ತಿಳಿಸಿದರು.

ಯೋಜನೆಯ ಕುರಿತು ಹೆಚ್ಚಿನ ಜನರಿಗೆ ಮಾಹಿತಿ ತಲುಪಿಸುವ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸಹ ಪ್ರಮುಖ ಪಾತ್ರ ವಹಿಸಲಿದ್ದಾರೆ, ಅಗತ್ಯವಿರುವವರಿಗೆ ಸಮಾಲೋಚನೆ ಹಾಗೂ ಮಾರ್ಗದರ್ಶನವನ್ನು ತ್ವರಿತವಾಗಿ ಒದಗಿಸುವ ಉದ್ದೇಶದಿಂದ ಸಹಾಯವಾಣಿ ವ್ಯವಸ್ಥೆಯನ್ನು ರೂಪಿಸುವ ಯೋಜನೆಯೂ ಇದ್ದು, ಮುಂದಿನ ದಿನಗಳಲ್ಲಿ ಈ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ಡಾ.ನಾಗಲಕ್ಷೀ ಚೌಧರಿ ತಿಳಿಸಿದರು.

Tags

Dr. Nagalakshmi Chowdhury
share
ವಾರ್ತಾಭಾರತಿ
ವಾರ್ತಾಭಾರತಿ
Next Story
X