Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮುಖ್ಯಮಂತ್ರಿಯನ್ನು ಭೇಟಿಯಾದ...

ಮುಖ್ಯಮಂತ್ರಿಯನ್ನು ಭೇಟಿಯಾದ ಡಾ.ರೊನಾಲ್ಡ್ ಕೊಲಾಸೊ

ವಾರ್ತಾಭಾರತಿವಾರ್ತಾಭಾರತಿ9 Jun 2026 9:38 PM IST
share
ಮುಖ್ಯಮಂತ್ರಿಯನ್ನು ಭೇಟಿಯಾದ ಡಾ.ರೊನಾಲ್ಡ್ ಕೊಲಾಸೊ
ಎನ್‌ಆರ್‌ಐ ಖಾತೆ, ಪ್ರತ್ಯೇಕ ಸಚಿವರು, ಸಾವಿರ ಕೋಟಿ ಆವರ್ತನ ನಿಧಿಗೆ ಆಗ್ರಹ

ಬೆಂಗಳೂರು : ವಿಧಾನ ಪರಿಷತ್ ಸದಸ್ಯೆ ಡಾ.ಆರತಿ ಕೃಷ್ಣಾ ಹಾಗೂ ಖ್ಯಾತ ಅನಿವಾಸಿ ಭಾರತೀಯ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಮಂಗಳವಾರ ಭೇಟಿ ಮಾಡಿ ಅನಿವಾಸಿ ಕನ್ನಡಿಗರ ಕುರಿತು ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಇತ್ತೀಚಿಗೆ ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ಸೆಕ್ರೆಟರಿಯೇಟ್ ಸ್ಥಾಪಿಸುವುದಾಗಿ ಘೋಷಿಸಿದ ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸಿದ ಡಾ.ರೊನಾಲ್ಡ್ ಕೊಲಾಸೊ ಅವರು ಕಾಂಗ್ರೆಸ್ ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿರುವಂತೆ ಪ್ರತ್ಯೇಕ ಅನಿವಾಸಿ ಖಾತೆ, ಪ್ರತ್ಯೇಕ ಸಚಿವರು ಹಾಗು ಸಾವಿರ ಕೋಟಿ ಆವರ್ತನ ನಿಧಿಯನ್ನು ಶೀಘ್ರವೇ ಒದಗಿಸುವಂತೆ ಆಗ್ರಹಿಸಿದರು.

ಆರಂಭದಲ್ಲಿ ಅನಿವಾಸಿ ಸಚಿವಾಲಯವನ್ನು ಮುಖ್ಯಮಂತ್ರಿಗಳ ಅಧೀನದಲ್ಲಿ ಸ್ಥಾಪಿಸಲಾಗುವುದು. ಅದಕ್ಕೆ ಪ್ರತ್ಯೇಕ ಇಲಾಖೆ ಹಾಗೂ ಬಜೆಟ್ ಅನುದಾನ ಇರಲಿದೆ. ಕ್ರಮೇಣ ಅದನ್ನು ಪ್ರತ್ಯೇಕ ಸಚಿವರಿಗೆ ನೀಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಅಂತಿಮ ರೂಪ ನೀಡುವಾಗ ಅನಿವಾಸಿ ಕನ್ನಡಿಗರಿಂದಲೂ ಸಲಹೆ ಪಡೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ಡಾ.ರೊನಾಲ್ಡ್ ಕೊಲಾಸೊ ʼವಾರ್ತಾಭಾರತಿʼಗೆ ತಿಳಿಸಿದ್ದಾರೆ.

ಪ್ರತ್ಯೇಕ ಖಾತೆ, ಪ್ರತ್ಯೇಕ ಸಚಿವರು ಹಾಗೂ ಸಾವಿರ ಕೋಟಿಯ ಆವರ್ತನ ನಿಧಿಯನ್ನು ನೀಡಬೇಕು ಎಂಬುದು ಅನಿವಾಸಿ ಕನ್ನಡಿಗರ ಬಲವಾದ ಆಗ್ರಹವಾಗಿತ್ತು. ಕಳೆದ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಡಾ.ರೊನಾಲ್ಡ್ ಕೊಲಾಸೊ ಅವರ ನೇತೃತ್ವದಲ್ಲಿ ಮೂವತ್ತಕ್ಕೂ ಹೆಚ್ಚು ದೇಶಗಳ 43 ಮಂದಿ ಅನಿವಾಸಿ ಕನ್ನಡಿಗರು ಆಗಮಿಸಿ ಸಿಎಂ, ಡಿಸಿಎಂ ಹಾಗೂ ಇತರ ಸಚಿವರನ್ನು ಭೇಟಿಯಾಗಿ ಈ ಕುರಿತು ಮನವಿ ಮಾಡಿದ್ದರು. ಶೀಘ್ರವೇ ಈ ಭರವಸೆ ಈಡೇರಿಸುವುದಾಗಿ ಸರಕಾರ ಹೇಳಿತ್ತು. ಆದರೆ ಇದೀಗ ಸೆಕ್ರೆಟರಿಯೇಟ್ ಮಾತ್ರ ಘೋಷಣೆ ಆಗಿದೆ. ಈ ಹಿನ್ನೆಲೆಯಲ್ಲಿ ಡಾ.ರೊನಾಲ್ಡ್ ಕೊಲಾಸೊ ಹಾಗೂ ಡಾ. ಆರತಿ ಕೃಷ್ಣಾ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.

ಕೇರಳ ಹಾಗೂ ಪಂಜಾಬ್‌ನಲ್ಲಿ ಎನ್‌ಆರ್‌ಐಗಳಿಗೆ ಪ್ರತ್ಯೇಕ ಸಚಿವಾಲಯವಿದೆ. ಉತ್ತರಪ್ರದೇಶ, ಗುಜರಾತ್, ಗೋವಾ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಸರಕಾರಗಳು ಪ್ರತ್ಯೇಕ ಎನ್‌ಆರ್‌ಐ ವಿಭಾಗಗಳನ್ನು ಮಾಡಿವೆ. ನಮ್ಮ ರಾಜ್ಯದಲ್ಲೂ ಎನ್‌ಆರ್‌ಐಗಳಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಿ ಪ್ರತ್ಯೇಕ ಸಚಿವರನ್ನು ನೇಮಿಸುವುದರಿಂದ ಅನಿವಾಸಿ ಕನ್ನಡಿಗರಿಂದ ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಆಕರ್ಷಿಸಬಹುದು. 2024-25 ರಲ್ಲಿ ಅನಿವಾಸಿ ಭಾರತೀಯರಿಂದ ದೇಶಕ್ಕೆ 135.46 ಬಿಲಿಯನ್ ಡಾಲರ್ ಬಂದಿದೆ. ಇದು ಜಗತ್ತಿನಲ್ಲೇ ಅನಿವಾಸಿಗಳಿಂದ ದೇಶಕ್ಕೆ ಬರುವ ಗರಿಷ್ಟ ಮೊತ್ತ. ಇದರಲ್ಲಿ ಕನಿಷ್ಠ 8% ರಾಜ್ಯಕ್ಕೆ ಬರುತ್ತದೆ. ಪ್ರತ್ಯೇಕ ಸಚಿವರು ಇದ್ದರೆ ಅನಿವಾಸಿ ಉದ್ಯೋಗಿಗಳು, ಕಾರ್ಮಿಕರ ಸಮಸ್ಯೆಗಳ ನಿವಾರಣೆಗೆ ಇದರಿಂದ ಪ್ರಯೋಜನವಾಗಲಿದೆ. ಇದರಿಂದ, ರಾಜ್ಯದಲ್ಲಿ ಉದ್ಯೋಗಾವಕಾಶ ಹೆಚ್ಚಳಕ್ಕೆ , ಪ್ರವಾಸೋದ್ಯಮ ಅಭಿವೃದ್ಧಿಗೆ, ಕನ್ನಡ ಭಾಷೆ ಹಾಗು ಸಂಸ್ಕೃತಿಯನ್ನು ಎಲ್ಲೆಡೆ ಪರಿಚಯಿಸಲು ಹೆಚ್ಚಿನ ಅನುಕೂಲವಾಗಲಿದೆ ಎಂದು ಡಾ,ರೊನಾಲ್ಡ್ ಕೊಲಾಸೊ ಅವರು ಮುಖ್ಯಮಂತ್ರಿಯ ಗಮನ ಸೆಳೆದಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಎಲ್.ಕೆ.ಅತೀಕ್‌ ಹಾಗೂ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಉಪಸ್ಥಿತರಿದ್ದರು.









Tags

Dr. Ronald Colaco
share
ವಾರ್ತಾಭಾರತಿ
ವಾರ್ತಾಭಾರತಿ
Next Story
X