Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದಕ್ಷಿಣ ಭಾರತ ಮಟ್ಟದ ಬೃಹತ್ ಸಮಾವೇಶಕ್ಕೆ...

ದಕ್ಷಿಣ ಭಾರತ ಮಟ್ಟದ ಬೃಹತ್ ಸಮಾವೇಶಕ್ಕೆ ಈಡಿಗರು ಸಜ್ಜು

ಸಮುದಾಯದ 28 ಉಪ ಪಂಗಡಗಳ ಮುಖಂಡರ ಸಭೆಯಲ್ಲಿ ನಿರ್ಣಯ

ವಾರ್ತಾಭಾರತಿವಾರ್ತಾಭಾರತಿ8 March 2025 11:41 PM IST
share
ದಕ್ಷಿಣ ಭಾರತ ಮಟ್ಟದ ಬೃಹತ್ ಸಮಾವೇಶಕ್ಕೆ ಈಡಿಗರು ಸಜ್ಜು

ಬೆಂಗಳೂರು : ಈಡಿಗ, ಬಿಲ್ಲವ, ನಾಮಧಾರಿ, ದೀವರು ಸೇರಿದಂತೆ ಈಡಿಗ ಸಮುದಾಯದ 28 ಉಪ ಪಂಗಡಗಳನ್ನು ಒಂದೇ ವೇದಿಕೆಯಡಿಯಲ್ಲಿ ಸಂಘಟಿಸಿ ದಕ್ಷಿಣ ಭಾರತ ಮಟ್ಟದ ಬೃಹತ್ ಸಮಾವೇಶ ಆಯೋಜಿಸಲು ಶನಿವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮುದಾಯದ ಮುಖಂಡರಿಂದ ನಡೆದ ಸಭೆಯಲ್ಲಿ ನಿರ್ಣಯಿಸಲಾಯಿತು.

ಈ ಸಭೆಯಲ್ಲಿ ದಕ್ಷಿಣ ಭಾರತದಲ್ಲಿ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಸಂಘಟಿತರಾಗುವ ಉದ್ದೇಶದಿಂದ ಈಡಿಗ, ಈಳವ, ನಾಡಾರ್, ಬಿಲ್ಲವ, ಭಂಡಾರಿ, ನಾಮಧಾರಿ, ಧೀವರು ಸೇರಿದಂತೆ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಿದ್ಧಾಂತಗಳನ್ನು ಪಾಲಿಸುತ್ತಿರುವ ಈಡಿಗ ಸಮುದಾಯದ 28 ಉಪ ಪಂಗಡಗಳು ಹಾಗೂ ಅವರ ಅನುಯಾಯಿಗಳನ್ನು ಒಂದೇ ವೇದಿಕೆಯಡಿಯಲ್ಲಿ ಸಂಘಟಿಸಲು ಸದ್ಯದಲ್ಲೇ ಬೃಹತ್ತಾದ ಸಮಾವೇಶ ನಡೆಸಬೇಕು ಎಂದು ಒಕ್ಕೊರಲಿನಿಂದ ನಿರ್ಧರಿಸಲಾಯಿತು.

ತೆಲಂಗಾಣದ ಮಾಜಿ ಸಚಿವ ಶ್ರೀನಿವಾಸಗೌಡ್, ತಮಿಳುನಾಡಿನಿಂದ ರಾಜಾ ನಾಡಾರ್, ಗೋವಾದಿಂದ ನಾಯ್ಕ್ ಅವರ ನೇತೃತ್ವದಲ್ಲಿ ಬೆಂಗಳೂರು, ಹೈದರಾಬಾದ್, ನಾಗಪುರ ಹಾಗೂ ಗೋವಾದಲ್ಲಿ ಸಮುದಾಯದ ಎಲ್ಲರನ್ನೂ ಒಗ್ಗೂಡಿಸಿ ದಕ್ಷಿಣ ಭಾರತ ಮಟ್ಟದ ಸಮಾವೇಶದ ಸ್ಥಳ ನಿಗದಿಪಡಿಸಿ ಕನಿಷ್ಠ ಐದು ಲಕ್ಷ ಜನರು ಪಾಲ್ಗೊಳ್ಳುವಂತೆ ಸಮಾವೇಶವನ್ನು ನಡೆಸಲು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಸಮುದಾಯಗಳ ಹಕ್ಕೊತ್ತಾಯವನ್ನು ರಾಜ್ಯ ಸರಕಾರದ ಗಮನಕ್ಕೆ ತರಲು ತೀರ್ಮಾನಿಸಿ ಮುಖ್ಯಮಂತ್ರಿಗಳಿಗೆ ರಾಜ್ಯ ಮುಖಂಡರ ನಿಯೋಗವು ಭೇಟಿ ನೀಡಿ ತಮ್ಮ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮನವಿ ಸಲ್ಲಿಸುವ ನಿರ್ಣಯವನ್ನೂ ಕೈಗೊಳ್ಳಲಾಯಿತು.

ಸಭೆಯಲ್ಲಿ ಈಡಿಗ ಅಭಿವೃದ್ಧಿ ನಿಗಮಕ್ಕೆ 250 ಕೋಟಿ ರೂ. ಅನುದಾನ, ಸೋಲೂರು ಈಡಿಗ ಮಹಾಸಂಸ್ಥಾನದಲ್ಲಿ ನಾರಾಯಣಗುರುಗಳ ಪುತ್ಥಳಿ ಸ್ಥಾಪನೆ, ಮಂಗಳೂರು ವಿ.ವಿ.ಯಲ್ಲಿರುವ ನಾರಾಯಣಗುರು ಅಧ್ಯಯನ ಪೀಠಕ್ಕೆ 5 ಕೋಟಿ ರೂ. ಅನುದಾನ, ಕೋಟಿ- ಚೆನ್ನಯ್ಯ ಥೀಮ್ ಪಾರ್ಕ್ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ, ಈಡಿಗ ಸಮುದಾಯದ ಉಪ ಪಂಗಡಗಳ ಜನರ ಪುನರ್ ವಸತಿಗಾಗಿ ಪ್ಯಾಕೇಜ್ ಘೋಷಣೆ ಸೇರಿದಂತೆ ಸಮುದಾಯಗಳ ಹಲವು ಹಕ್ಕೊತ್ತಾಯಗಳನ್ನು ಈಡೇರಿಸಲು ರಾಜ್ಯ ಸರಕಾರವನ್ನು ಒತ್ತಾಯಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X