Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರಿನಲ್ಲಿ ಏರೋಸ್ಪೇಸ್ ಉದ್ಯಮಕ್ಕೆ...

ಬೆಂಗಳೂರಿನಲ್ಲಿ ಏರೋಸ್ಪೇಸ್ ಉದ್ಯಮಕ್ಕೆ ಪ್ರೋತ್ಸಾಹ ನೀಡಿ, ಪ್ರತಿಭಾ ಪಲಾಯನ ತಡೆಯಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ10 Feb 2025 2:19 PM IST
share
ಬೆಂಗಳೂರಿನಲ್ಲಿ ಏರೋಸ್ಪೇಸ್ ಉದ್ಯಮಕ್ಕೆ ಪ್ರೋತ್ಸಾಹ ನೀಡಿ, ಪ್ರತಿಭಾ ಪಲಾಯನ ತಡೆಯಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಫೆ.10: “ಬೆಂಗಳೂರು, ಏರೋಸ್ಪೇಸ್ ಉದ್ಯಮದಲ್ಲಿ ಅತ್ಯುತ್ತಮ ಪ್ರತಿಭೆಗಳನ್ನು ಹೊಂದಿದೆ. ಇದು ವಿಮಾನ ಮತ್ತು ಹೆಲಿಕಾಪ್ಟರ್ ಉತ್ಪಾದನಾ ಸೌಲಭ್ಯಗಳನ್ನು ಸ್ಥಾಪಿಸಲು ಸೂಕ್ತ ಸ್ಥಳವಾಗಿದೆ. ತಯಾರಕರಿಗೆ ಪ್ರೋತ್ಸಾಹ ನೀಡುವ ಮೂಲಕ, ಪ್ರತಿಭಾ ಪಲಾಯನವನ್ನು ತಡೆದು ನಮ್ಮ ದೇಶದ ಪ್ರತಿಭೆಗಳನ್ನು ಭಾರತದೊಳಗೆ ಉಳಿಸಿಕೊಳ್ಳಬಹುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು.

ಬೆಂಗಳೂರು ಏರ್ ಶೋ 2025 ರ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಮಾತನಾಡಿದರು.

"ಕರ್ನಾಟಕ ಭಾರತದ ತಾಂತ್ರಿಕ ಮತ್ತು ಕೈಗಾರಿಕಾ ಪ್ರಗತಿಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ. ವಿಶ್ವ ದರ್ಜೆಯ ಸಂಶೋಧನಾ ಸಂಸ್ಥೆಗಳು, ಅತ್ಯಾಧುನಿಕ ಏರೋಸ್ಪೇಸ್ ಕಂಪನಿಗಳನ್ನು ಹೊಂದಿರುವ ಕೌಶಲ್ಯಪೂರ್ಣ ಕಾರ್ಯಪಡೆಯೇ ನಮ್ಮಲ್ಲಿದೆ. ರಕ್ಷಣಾ ಸಚಿವರು ಕರ್ನಾಟಕದಲ್ಲಿ ಏರೋಸ್ಪೇಸ್ ಉದ್ಯಮವನ್ನು ಸ್ಥಾಪಿಸಲು ಹಾಗೂ ವಿಮಾನ ಮತ್ತು ಹೆಲಿಕಾಪ್ಟರ್‌ಗಳ ತಯಾರಕರನ್ನು ಹೆಚ್ಚು, ‌ಹೆಚ್ಚು ಬೆಂಗಳೂರಿನ ಕಡೆಗೆ ಗಮನ ಹರಿಸುವಂತೆ ಪ್ರೋತ್ಸಾಹ ನೀಡಬೇಕಾಗಿ ಮನವಿ ಮಾಡುತ್ತೇನೆ” ಎಂದರು.

“ಇತ್ತೀಚಿನ ವರ್ಷಗಳಲ್ಲಿ, ಕರ್ನಾಟಕವು ದೇಶದ ಒಟ್ಟು ದೇಶೀಯ ಉತ್ಪನ್ನ, ಕೈಗಾರಿಕಾ ಬೆಳವಣಿಗೆ ಮತ್ತು ಹೂಡಿಕೆಯ ಒಳಹರಿವು ಸೇರಿದಂತೆ ಪ್ರಮುಖ ಆರ್ಥಿಕ ಕ್ಷೇತ್ರಗಳಲ್ಲಿ ಅಗಾಧ ಬೆಳವಣಿಗೆ ಕಂಡಿದೆ. ಸಂಶೋಧನೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಉದ್ದಿಮೆಗೆ ಪ್ರೋತ್ಸಾಹಿಸುವ ಭವಿಷ್ಯದ ದೃಷ್ಟಿಯಿಂದ ಕೈಗಾರಿಕಾ ನೀತಿಯನ್ನು ಪೋಷಿಸಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ಹೇಳಿದರು.

"ಆಕಾಶಕ್ಕೆ ಮಿತಿಯಿಲ್ಲ ಎಂಬುದನ್ನು ಈ ಏರ್ ಶೋ ಮೂಲಕ ನಾವು ಕಂಡುಕೊಳ್ಳಬಹುದು. ಬೆಂಗಳೂರು ಏರ್ ಶೋ ನಾಗರಿಕ ಮತ್ತು ಮಿಲಿಟರಿ ವಾಯುಯಾನ ಎರಡರಲ್ಲೂ ಭಾರತದ ಪ್ರಗತಿಯನ್ನು ಎತ್ತಿ ತೋರಿಸುವ ದೊಡ್ಡ ಕಾರ್ಯಕ್ರಮ. ಏರೋ ಇಂಡಿಯಾ ಕೇವಲ ಪ್ರದರ್ಶನವಲ್ಲ. ಇದು ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಭಾರತದ ಸಾಮರ್ಥ್ಯ ಬೆಳೆಯುತ್ತಿರುವುದಕ್ಕೆ ಸಾಕ್ಷಿ ಮತ್ತು ಅಂತರರಾಷ್ಟ್ರೀಯ ಪಾಲುದಾರಿಕೆಗಳನ್ನು ಬೆಳೆಸುವ ವೇದಿಕೆ” ಎಂದರು.

“2013 ರಲ್ಲಿ ಏರೋಸ್ಪೇಸ್ ನೀತಿಯನ್ನು ಘೋಷಿಸಿದ ಮೊದಲ ರಾಜ್ಯ ಕರ್ನಾಟಕ. ನಮ್ಮ ರಾಜ್ಯವು ದೇವನಹಳ್ಳಿ ಬಳಿ ಏರೋಸ್ಪೇಸ್ ಕಂಪನಿಗಳಿಗಾಗಿ 1 ಸಾವಿರ ಎಕರೆ ಪ್ರದೇಶವನ್ನು ಮೀಸಲಿಟ್ಟು ಏರೋಸ್ಪೇಸ್ ಪಾರ್ಕ್ ಸ್ಥಾಪಿಸಿದೆ. ಇಂದು ಏರೋಸ್ಪೇಸ್ ಉದ್ಯಮವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಬೆಂಗಳೂರು ಅತ್ಯುತ್ತಮ ನಗರವಾಗಿದೆ. ಅನೇಕ ಬ್ರ್ಯಾಂಡ್‌ಗಳು ಮತ್ತು ಅತ್ಯುತ್ತಮ ತಂತ್ರಜ್ಞಾನಗಳನ್ನು ಪ್ರದರ್ಶಿಸಲು ಬೆಂಗಳೂರು ಸೂಕ್ತ ಸ್ಥಳವಾಗಿದೆ” ಎಂದರು.

“ಬೆಂಗಳೂರು ಭಾರತದ ಏರೋಸ್ಪೇಸ್ ರಾಜಧಾನಿ. ದೇಶದ ಏರೋಸ್ಪೇಸ್ ಉತ್ಪಾದನೆ ಮತ್ತು ರಕ್ಷಣಾ ಸಂಶೋಧನೆಯ ಶೇ. 60 ಕ್ಕಿಂತ ಹೆಚ್ಚು ಕೊಡುಗೆಯನ್ನು ನಮ್ಮ ರಾಜ್ಯ ನೀಡುತ್ತಿದೆ. ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಳ್ಳಲು, ಉದ್ದಿಮೆಗಳ ಅತ್ಯುತ್ತಮ ಉತ್ಪನ್ನಗಳನ್ನು ಪರೀಕ್ಷಿಸಲು ಇದು ಸೂಕ್ತ ಸ್ಥಳವಾಗಿದೆ. ಏರೋಸ್ಪೇಸ್ ಭವಿಷ್ಯವು ರೂಪುಗೊಳ್ಳುತ್ತಿರುವ ಸ್ಥಳವೇ ಬೆಂಗಳೂರು. ಎಚ್ ಎಎಲ್, ಇಸ್ರೋ ಮತ್ತು ಬೋಯಿಂಗ್ ಇಂಡಿಯಾದಂತಹ ಪ್ರಮುಖ ಸಂಸ್ಥೆಗಳು ಭಾರತದ ರಕ್ಷಣಾ ಮತ್ತು ಬಾಹ್ಯಾಕಾಶ ಸಾಮರ್ಥ್ಯಗಳಿಗೆ ಸಾಕಷ್ಟು ಕೊಡುಗೆಗಳನ್ನು ನೀಡುತ್ತಿವೆ. ಬೆಂಗಳೂರಿನ ಏರೋಸ್ಪೇಸ್ ವಲಯದಲ್ಲಿ 1,50,000 ಕ್ಕೂ ಹೆಚ್ಚು ಜನರು ಕೆಲಸ ಮಾಡುತ್ತಿದ್ದಾರೆ, ಇದು ನಗರವನ್ನು ವಾಯುಯಾನ ಮತ್ತು ರಕ್ಷಣಾ ತಂತ್ರಜ್ಞಾನದಲ್ಲಿ ಜಗತ್ತಿನಲ್ಲಿಯೇ ಸಾಕಷ್ಟು ಹೆಸರು ಮಾಡಿದೆ” ಎಂದರು.

“ವಿದೇಶಿ ಹೂಡಿಕೆಗಳನ್ನು ಆಕರ್ಷಿಸುವಲ್ಲಿ ಬೆಂಗಳೂರು ಜಾಗತಿಕ ಏರೋಸ್ಪೇಸ್ ನಗರಗಳಲ್ಲಿ ಮೂರನೇ ಸ್ಥಾನವನ್ನು ಪಡೆದಿದೆ. ಕರ್ನಾಟಕ ಸರ್ಕಾರವು ಕರ್ನಾಟಕದಾದ್ಯಂತ ಅಂದರೆ ಬೆಂಗಳೂರು, ಬೆಳಗಾವಿ, ಮೈಸೂರು, ತುಮಕೂರು ಮತ್ತು ಚಾಮರಾಜನಗರಗಳಲ್ಲಿ ಏರೋಸ್ಪೇಸ್ ಮತ್ತು ರಕ್ಷಣಾ ಕೇಂದ್ರಗಳನ್ನು ಅಭಿವೃದ್ಧಿಪಡಿಸುತ್ತಿದೆ. ವಾಣಿಜ್ಯ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಕ್ರಾಂತಿಯನ್ನೇ ಉಂಟು ಮಾಡುತ್ತಿರುವ ಡ್ರೋನ್ ತಂತ್ರಜ್ಞಾನ ಮತ್ತು ಮಾನವರಹಿತ ವೈಮಾನಿಕ ತಂತ್ರಜ್ಞಾನದ ರುವಾರಿಯಾಗಿ ಬೆಂಗಳೂರು ಬೆಳೆಯುತ್ತಿದೆ. ಬೆಂಗಳೂರು ಭಾರತದಲ್ಲಿಯೇ ಅತಿ ಹೆಚ್ಚು ಸಾಫ್ಟ್‌ವೇರ್ ಕಂಪನಿಗಳನ್ನು ಹೊಂದಿದೆ. ಅದಕ್ಕೆ ಇದನ್ನು ಭಾರತದ ಸಿಲಿಕಾನ್ ಸಿಟಿ ಎಂದು ಕರೆಯುತ್ತಾರೆ. ತಂತ್ರಜ್ಞಾನ ಮತ್ತು ಏರೋಸ್ಪೇಸ್ ವಲಯವನ್ನು ಮುನ್ನಡೆಸುವ ನಗರವಾಗಿ ಬೆಂಗಳೂರು ಬೆಳೆದಿದೆ” ಎಂದು ಹೇಳಿದರು.

“ರಾಜಧಾನಿಯಲ್ಲಿ 21 ಎಂಜಿನಿಯರಿಂಗ್ ಕಾಲೇಜುಗಳಿವೆ. ವಿಶ್ವದ ಯಾವುದೇ ನಗರಗಳಿಗೆ ಹೋಲಿಸಿದರೆ ನಾವೇ ಮೊದಲ ಸ್ಥಾನದಲ್ಲಿ ನಿಲ್ಲುತ್ತೇವೆ. ಬೆಂಗಳೂರಿನ ವಿಶಿಷ್ಟ ಪರಿಸರವು ಭಾರತ ಮತ್ತು ಪ್ರಪಂಚದಾದ್ಯಂತದ ಅತ್ಯುತ್ತಮ ಪ್ರತಿಭೆಗಳನ್ನು ಆಕರ್ಷಿಸುತ್ತಿದೆ‌. ಬೆಂಗಳೂರು ನಿಮ್ಮ ಪ್ರತಿಭೆಯನ್ನು ಬಳಸಿಕೊಳ್ಳುವ, ಬೆಲೆಸುವ, ಕನಸುಗಳನ್ನು ನನಸು ಮಾಡುವ ಸ್ಥಳವಾಗಿದೆ. ಕರ್ನಾಟಕವು ಭಾರತದ ಏರೋಸ್ಪೇಸ್ ವಲಯದಲ್ಲಿ ಅನೇಕ ಬಾರಿ ನಿರ್ಣಾಯಕ ಪಾತ್ರವನ್ನು ವಹಿಸಿದೆ. ಅಲ್ಲದೇ ರಕ್ಷಣಾ ಸೇವೆಗಳಿಗಾಗಿ ದೇಶದ ವಿಮಾನ ಮತ್ತು ಹೆಲಿಕಾಪ್ಟರ್ ಉತ್ಪಾದನೆಯ ಶೇ.67 ಮತ್ತು ಭಾರತದ ಏರೋಸ್ಪೇಸ್-ಸಂಬಂಧಿತ ರಫ್ತಿನ ಶೇ.65 ಕೊಡುಗೆ ನೀಡುತ್ತಿದೆ” ಎಂದು ಹೇಳಿದರು.

“ವಿಮಾನ ಸೇವೆ ಮತ್ತು ವಿಮಾನಗಳನ್ನು ದುರಸ್ತಿ ಮಾಡುವ ಕ್ಷೇತ್ರದಲ್ಲಿ ಭಾರತ ಮುಂದಿದೆ. ಆದರೆ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳ ತಯಾರಿಕೆ ಇನ್ನೂ‌ ಸ್ವಲ್ಪ ಹಿಂದೆ ಬಿದ್ದಿದೆ. ದೇಶವು ಬಳಸುವ ಹೆಚ್ಚಿನ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳನ್ನು ಇನ್ನೂ ಇತರ ರಾಷ್ಟ್ರಗಳಿಂದ ಖರೀದಿಸಲಾಗುತ್ತಿದೆ” ಎಂದು ವಿಷಾದ ವ್ಯಕ್ತಪಡಿಸಿದರು.

“ವಾಣಿಜ್ಯ ಮತ್ತು ರಕ್ಷಣಾ ವಿಮಾನ ನಿಲ್ದಾಣಗಳು ಕಾರ್ಯನಿರ್ವಹಿಸುತ್ತಿರುವ ವಿಶ್ವದ ಏಕೈಕ ನಗರ ಬೆಂಗಳೂರು. ಈ ಕ್ಷೇತ್ರಕ್ಕೆ ಹೆಚ್ಚಿನ ಮಹಿಳೆಯರು ಕೊಡುಗೆ ನೀಡುತ್ತಿದ್ದಾರೆ. ಯು.ಎಸ್., ಫ್ರಾನ್ಸ್ ಮತ್ತು ರಷ್ಯಾದಂತಹ ದೇಶಗಳೊಂದಿಗೆ ಪಾಲುದಾರಿಕೆಗಳ ಮೂಲಕ ಭಾರತದ ಏರೋಸ್ಪೇಸ್ ಉದ್ಯಮವು ಬೆಳೆಯುತ್ತಿದೆ.ಜಾಗತಿಕ ಮಾರುಕಟ್ಟೆಯಲ್ಲಿ ನಮ್ಮ ಸ್ಥಾನವನ್ನು ಈ ಏರ್ ಶೋ ಬಲಪಡಿಸುತ್ತಿದೆ. ಈ ಪ್ರದರ್ಶನವು ದೇಶಗಳು ಒಗ್ಗೂಡಲು, ಜ್ಞಾನವನ್ನು ಹಂಚಿಕೊಳ್ಳಲು ಮತ್ತು ಎಲ್ಲರಿಗೂ ಪ್ರಯೋಜನವಾಗುವ ವಾತಾವರಣ ನಿರ್ಮಿಸಲು ಉತ್ತಮ ಅವಕಾಶ ನೀಡುತ್ತದೆ” ಎಂದರು.

ಬೆಂಗಳೂರು ಏರ್ ಶೋ ಸಣ್ಣ ಕಾರ್ಯಕ್ರಮವಲ್ಲ. ಇದು ಬಾಹ್ಯಾಕಾಶದಲ್ಲಿ ಭಾರತದ ಶಕ್ತಿ, ಪ್ರಗತಿ ಮತ್ತು ನಾಯಕತ್ವದ ಸಂಕೇತವಾಗಿದೆ. ಬಾಹ್ಯಾಕಾಶ ಮತ್ತು ರಕ್ಷಣಾ ಹೂಡಿಕೆದಾರರು, ಉದ್ಯಮಿಗಳು ಮತ್ತು ವ್ಯಾಪಾರ ನಾಯಕರು ಕರ್ನಾಟಕವನ್ನು ಮೊದಲು ಆಯ್ಕೆ ಮಾಡಬೇಕು ಎಂದು ನಾನು ಕೋರುತ್ತೇನೆ. 2025 ರ ಏರ್ ಶೋ ಎಲ್ಲರಿಗೂ ಯಶಸ್ವಿ ಮತ್ತು ಸ್ಪೂರ್ತಿದಾಯಕ ಅನುಭವವನ್ನು ನೀಡಲಿ. ಭಾರತದ ಶಕ್ತಿ ಪ್ರದರ್ಶನದ ಉದ್ಘಾಟನೆಯಲ್ಲಿ ಭಾಗವಹಿಸುತ್ತಿರುವುದು ನನ್ನ ಸೌಭಾಗ್ಯ. 1996 ರಲ್ಲಿ ಪ್ರಾರಂಭವಾದಾಗಿನಿಂದ ಇಲ್ಲಿಯ ತನಕ ಈ ಕಾರ್ಯಕ್ರಮ ಸಾಕಷ್ಟು ಎತ್ತರಕ್ಕೆ ಬೆಳೆದಿದೆ” ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X