Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹಣಕಾಸು ಆಯೋಗವು ಕರ್ನಾಟಕಕ್ಕೆ ವಿಶೇಷ...

ಹಣಕಾಸು ಆಯೋಗವು ಕರ್ನಾಟಕಕ್ಕೆ ವಿಶೇಷ ಅನುದಾನವನ್ನು ಶಿಫಾರಸು ಮಾಡಿಲ್ಲ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ವಾರ್ತಾಭಾರತಿವಾರ್ತಾಭಾರತಿ24 March 2024 8:59 PM IST
share
ಹಣಕಾಸು ಆಯೋಗವು ಕರ್ನಾಟಕಕ್ಕೆ ವಿಶೇಷ ಅನುದಾನವನ್ನು ಶಿಫಾರಸು ಮಾಡಿಲ್ಲ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಬೆಂಗಳೂರು: ಕರ್ನಾಟಕಕ್ಕೆ 5,495 ಕೋಟಿ ರೂ.ವಿಶೇಷ ಅನುದಾನ ಬಿಡುಗಡೆ ಮಾಡಿಲ್ಲ ಎಂಬ ಹೇಳಿಕೆ ಸಂಪೂರ್ಣ ಸುಳ್ಳು, ಹಣಕಾಸು ಆಯೋಗವು ತನ್ನ ಅಂತಿಮ ವರದಿಯಲ್ಲಿ ಅಂತಹ ಯಾವುದೇ ವಿಶೇಷ ಅನುದಾನವನ್ನು ಶಿಫಾರಸು ಮಾಡಿಲ್ಲ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.

ರವಿವಾರ ನಗರದಲ್ಲಿ ಚಿಂತಕರ ವೇದಿಕೆ ಆಯೋಜಿಸಿದ್ದ ‘ಅನೌಪಚಾರಿಕ ಸಂವಾದ’ದಲ್ಲಿ ಮಾತನಾಡಿದ ಅವರು, ಕರ್ನಾಟಕಕ್ಕೆ ನೀಡಬೇಕಿದ್ದ ಪ್ರತಿ ಪೈಸೆಯನ್ನು ಲೆಕ್ಕ ಹಾಕಿ, ಸಮಯಕ್ಕೆ ಸರಿಯಾಗಿ ಬಿಡುಗಡೆ ಮಾಡಲಾಗಿದೆ. 2017 ರಿಂದ 2022ರ ನಡುವಿನ ಅವಧಿಯಲ್ಲಿ ರಾಜ್ಯದ ಜಿಎಸ್‍ಟಿ ಪಾಲಿನಲ್ಲಿ 1.06 ಕೋಟಿ ರೂ.ಗಳನ್ನು ಕರ್ನಾಟಕಕ್ಕೆ ಸಂಪೂರ್ಣವಾಗಿ ಬಿಡುಗಡೆ ಮಾಡಲಾಗಿದೆ. ಯಾವುದೇ ಜಿಎಸ್‍ಟಿ ಪರಿಹಾರವನ್ನು ಬಾಕಿ ಉಳಿಸಿಕೊಂಡಿಲ್ಲ ಎಂದು ವಿವರಣೆ ನೀಡಿದರು.

ಪ್ರಧಾನಿ ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿಯಲ್ಲಿ, ದೇಶದಾದ್ಯಂತ 80 ಕೋಟಿ ಜನರು ಮತ್ತು ಬೆಂಗಳೂರು ನಗರದ 30.5 ಲಕ್ಷ ಜನರು ಪ್ರತಿ ತಿಂಗಳು ಉಚಿತ ಪಡಿತರವನ್ನು ಪಡೆಯುತ್ತಿದ್ದಾರೆ. ದೇಶದಾದ್ಯಂತ 52 ಕೋಟಿ ಮಂದಿ ಜನ್-ಧನ್ ಖಾತೆಗಳನ್ನು ತರೆದಿದ್ದಾರೆ. ಬೆಂಗಳೂರು ನಗರದಲ್ಲೇ 14.68 ಲಕ್ಷ ಜನ್-ಧನ್ ಖಾತೆಗಳನ್ನು ತೆರೆಯಲಾಗಿದೆ ಎಂದು ಅವರು ತಿಳಿಸಿದರು.

ನುರಿತ ಕುಶಲಕರ್ಮಿಗಳು 10 ಲಕ್ಷ ರೂ.ವರೆಗಿನ ಕಿರುಸಾಲವನ್ನು ಪಡೆಯಲು ಅನುವು ಮಾಡಿಕೊಡುವ ಕೇಂದ್ರದ ಪ್ರಮುಖ ಮುದ್ರಾ ಯೋಜನೆಯಡಿ ಬೆಂಗಳೂರು ನಗರಕ್ಕೆ 30,490 ಕೋಟಿ ರೂ.ಗಳನ್ನು ನೀಡಲಾಗಿದೆ. ಬೆಂಗಳೂರು ನಗರವೊಂದರಲ್ಲೇ 38.25 ಲಕ್ಷ ಮುದ್ರಾ ಯೋಜನೆಯ ಫಲಾನುಭವಿಗಳು ಇದ್ದಾರೆ ಎಂದು ಅವರು ತಿಳಿಸಿದರು.

ರಾಜ್ಯವು ಎಸ್‍ಸಿ, ಎಸ್‍ಟಿ ಮತ್ತು ಮಹಿಳೆಯರಿಗೆ 10 ಲಕ್ಷದಿಂದ 1 ಕೋಟಿ ರೂಪಾಯಿಗಳ ಸಾಲ ನೀಡುವ ‘ಸ್ಟ್ಯಾಂಡ್-ಅಪ್ ಇಂಡಿಯಾ' ಅಡಿಯಲ್ಲಿ ಅನುದಾನವನ್ನು ಪಡೆದುಕೊಂಡಿದೆ. ನಗರದಲ್ಲಿ ಈ ಯೋಜನೆಯಡಿ 467 ಕೋಟಿ ರೂ. ಗಳನ್ನು ವಿತರಿಸಲಾಗಿದೆ. ಈ ನಗರವೊಂದರಲ್ಲೇ ಈ ಯೋಜನೆಯಡಿ 4,429 ನೋಂದಾಯಿತ ಫಲಾನುಭವಿಗಳಿದ್ದಾರೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಬೆಂಗಳೂರು ನಗರದ 1.25 ಲಕ್ಷ ಬೀದಿಬದಿ ವ್ಯಾಪಾರಿಗಳು ಪ್ರಧಾನಮಂತ್ರಿಯವರ ಸ್ವನಿಧಿ ಯೋಜನೆ ಅಡಿಯಲ್ಲಿ ಫಲಾನುಭವಿಗಳಾಗಿದ್ದಾರೆ. ಈ ಪೈಕಿ ಶೇ.62ರಷ್ಟು ಮಹಿಳೆಯರು, ಶೇ.31ರಷ್ಟು ಒಬಿಸಿ ಮತ್ತು ಶೇ.29ರಷ್ಟು ಎಸ್‍ಸಿ ಮತ್ತು ಎಸ್‍ಟಿಗಳು ಯೋಜನೆಯ ಲಾಭ ಪಡೆದಿದ್ದಾರೆ. ಪ್ರಧಾನಮಂತ್ರಿ ಜೀವನ್ ಜ್ಯೋತಿ ಬೀಮಾ ಯೋಜನೆಯಡಿ ಬೆಂಗಳೂರು ನಗರ ಪ್ರದೇಶದಲ್ಲಿ 30 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಜಿಎಸ್‍ಟಿ ಪೂರ್ವದ ಬೆಳವಣಿಗೆಯ ದರವು ಕೇವಲ ಶೇ.11.68 ರಷ್ಟಿದ್ದು, ಇಂದು ಅದು ಶೇ.15ಕ್ಕೆ ತಲುಪಿದೆ. ಜಿಎಸ್‍ಟಿ ನಿಮಗೆ ಪ್ರಯೋಜನವನ್ನು ಒದಗಿಸುತ್ತಿದ್ದು, ಕಾಂಗ್ರೆಸ್‍ಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಟೀಕಿಸಿದರು.

‘ಕರ್ನಾಟಕದಲ್ಲಿ ಬರ ಪರಿಸ್ಥಿತಿ ನಿಭಾಯಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ(ಎನ್‍ಡಿಆರ್ ಎಫ್) ಅಡಿಯಲ್ಲಿ ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕು ಎಂದು ರಾಜ್ಯ ಸರಕಾರ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿರುವುದು ಸರಿಯಲ್ಲ’ ಎಂದು ಹೇಳಿದರು.

Tags

Nirmala Sitharamanನಿರ್ಮಲಾ ಸೀತಾರಾಮನ್ಕರ್ನಾಟಕFinance Commission
share
ವಾರ್ತಾಭಾರತಿ
ವಾರ್ತಾಭಾರತಿ
Next Story
X