Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಚಂದ್ರಶೇಖರ ಸ್ವಾಮೀಜಿ ವಿರುದ್ಧ...

ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್.ಐ.ಆರ್. | ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ: ಸಿದ್ದರಾಮಯ್ಯ

"ರಾಜ್ಯದ ಜನರಿಗೆ ಕೃತಜ್ಞತೆ ಹೇಳಲು ಹಾಸನದಲ್ಲಿ ಸಮಾವೇಶ"

ವಾರ್ತಾಭಾರತಿವಾರ್ತಾಭಾರತಿ1 Dec 2024 3:37 PM IST
share
ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್.ಐ.ಆರ್. | ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ: ಸಿದ್ದರಾಮಯ್ಯ

ಬೆಂಗಳೂರು, ಡಿ.1: ಚಂದ್ರಶೇಖರ ಸ್ವಾಮೀಜಿ ಅವರ ಪ್ರಕರಣದಲ್ಲಿ ಪೊಲೀಸರು ಕಾನೂನಿನ ದೃಷ್ಟಿಯಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇಲ್ಲವಾದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಇಂದು ಕೆಂಗಲ್ ಹನುಮಂತಯ್ಯ ಅವರ ಸಂಸ್ಮರಣೆಯ ಪ್ರಯುಕ್ತ ಅವರ ಪ್ರತಿಮೆಗೆ ಮಾಪಾರ್ಪಣೆ ಮಾಡಿದ ಬಳಿಕ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

ಜೆಡಿಎಸ್ ಬಿಟ್ಟದ್ದಲ್ಲ, ಉಚ್ಚಾಟಿಸಿದ್ದು

ಜೆ ಡಿ ಎಸ್ ಬಿಡುವಾಗ ಮಾಡಿದ್ದ ನಾಟಕವನ್ನೇ ಈಗ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಜೆಡಿಎಸ್ ನಿಂದ ನನ್ನನ್ನು ಉಚ್ಚಾಟಿಸಲಾಗಿತ್ತು. ನಾನು ಬಿಡಲಿಲ್ಲ ಎಂದರು.

ರಾಜ್ಯದ ಜನರಿಗೆ ಕೃತಜ್ಞತೆ ಹೇಳಲು ಸಮಾವೇಶ

ನಾನು ಪಕ್ಷವನ್ನು ಬಿಡಲಿಲ್ಲ. ನನ್ನನ್ನು ದೇವೇಗೌಡರು ಉಚ್ಚಾಟಿಸಿದರು. ನಂತರ ನಾನು ಬೇರೆ ದಾರಿ ಇಲ್ಲದೆ ಅಹಿಂದ ಸಮಾವೇಶ ನಡೆಸಿದೆ, ಹಾಸನದಲ್ಲಿಯೂ ಸಮಾವೇಶ ಮಾಡಿದ್ದೆ. ಈಗ ಇಡೀ ರಾಜ್ಯದ ಜನರಿಗೆ ಕೃತಜ್ಞತೆ ಹೇಳಲು ಕಾಂಗ್ರೆಸ್ ಪಕ್ಷ ಮತ್ತು ಸ್ವಾಭಿಮಾನಿಗಳ ಒಕ್ಕೂಟದಿಂದ ಸಮಾವೇಶ ಏರ್ಪಡಿಸಲಾಗಿದೆ. ಕಾಂಗ್ರೆಸ್ ಪಕ್ಷ ಮತ್ತು ಸ್ವಾಭಿಮಾನಿಗಳ ಜಂಟಿ ಆಶ್ರಯದಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು.

ಇದಕ್ಕೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಆಹ್ವಾನಿಸಲಾಗಿದೆ. ಪಕ್ಷವು ಇದರಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದೆ ಎಂದರು.

ಜೆಡಿಎಸ್ ಈಗ ಜಾತ್ಯತೀತವಾಗಿ ಉಳಿದಿದೆಯೇ?

ಜೆಡಿಎಸ್ ಪಕ್ಷ ವನ್ನು ಕಟ್ಟಿದವರು ನಾವು. ಜೆಡಿಎಸ್ ಈಗ ಜಾತ್ಯತೀತವಾಗಿ ಉಳಿದಿದೆಯೇ ? ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು. ಕೋಮುವಾದಿಗಳ ಜೊತೆಗೆ ಸೇರಿದ ಮೇಲೆ ಯಾವ ಸೆಕ್ಯುಲರ್ ಆಗಿದೆ ? ಸಂವಿಧಾನದಲ್ಲಿ ಜಾತ್ಯತೀತ, ಸಮಾಜವಾದಿ ಎಂದು ಸೇರ್ಪಡೆಯಾಗಿದೆ. ಸರ್ವೋಚ್ಚ ನ್ಯಾಯಾಲಯವೂ ಜಾತ್ಯತೀತ ಇರಲೇಬೇಕೆಂದು ಹೇಳಿದ್ದಾರೆ. ಜೆಡಿಎಸ್ ನವರಿಗೆ ಪಕ್ಷ ಯಾವ ಹಿನ್ನೆಲೆಯಲ್ಲಿ ಕಟ್ಟಲಾಗಿದೆ ಎಂದು ಗೊತ್ತಿಲ್ಲ. ಪಕ್ಷ ರಚನೆಗೊಂಡಾಗ ಕುಮಾರಸ್ವಾಮಿ ಇರಲಿಲ್ಲ . ನಾನು ದೇವೇಗೌಡ, ಇಬ್ರಾಹೀಂ, ಸತೀಶ್ ಜಾರಕಿಹೊಳಿ, ಮಹದೇವಪ್ಪ, ವೆಂಕಟೇಶ್, ಲಕ್ಷ್ಮೀ ಸಾಗರ್ ಸೇರಿ ಆಗಿದ್ದು. ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷರಾದರು, ನಾನು ರಾಜ್ಯಾಧ್ಯಕ್ಷನಾದೆ ಎಂದು ಸಿದ್ದರಾಮಯ್ಯ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X