Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಐದು ಸಂಶೋಧನಾ ಸಂಸ್ಥೆಗಳಿಂದ ಸರಕಾರದ...

ಐದು ಸಂಶೋಧನಾ ಸಂಸ್ಥೆಗಳಿಂದ ಸರಕಾರದ ಗ್ಯಾರಂಟಿ ಯೋಜನೆಗಳ ಅಧ್ಯಯನ: ನ.5ಕ್ಕೆ ಅವಲೋಕನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ3 Nov 2025 9:57 AM IST
share
ಐದು ಸಂಶೋಧನಾ ಸಂಸ್ಥೆಗಳಿಂದ ಸರಕಾರದ ಗ್ಯಾರಂಟಿ ಯೋಜನೆಗಳ ಅಧ್ಯಯನ: ನ.5ಕ್ಕೆ ಅವಲೋಕನ ಕಾರ್ಯಕ್ರಮ

ಬೆಂಗಳೂರು, ನ.3: ಕರ್ನಾಟಕ ಸರಕಾರ ಜಾರಿಗೆ ತಂದಿರುವ ಐದು ಖಾತರಿ (ಗ್ಯಾರಂಟಿ) ಯೋಜನೆಗಳ ಕುರಿತು ಪ್ರತಿಷ್ಠಿತ ಐದು ಸಂಶೋಧನಾ ಸಂಸ್ಥೆಗಳು ಕೈಗೊಂಡಿರುವ ಅಧ್ಯಯನಗಳ ಸಂಶೋಧನಾ ಫಲಿತಾಂಶಗಳನ್ನು ಮತ್ತು ಕಾರ್ಯನೀತಿ ಸಲಹೆಗಳನ್ನು ಭಾಗೀದಾರ (Stakeholders) ಸರಕಾರಿ ಇಲಾಖೆಗಳೊಂದಿಗೆ ಹಾಗೂ ಶೈಕ್ಷಣಿಕ ಸಂಸ್ಥೆಗಳ ತಜ್ಞರೊಂದಿಗೆ ಹಂಚಿಕೊಳ್ಳಲು ನ.5ರಂದು ಬೆಂಗಳೂರಿನ ಎಂ.ಜಿ. ರಸ್ತೆಯ ಹೋಟೆಲ್ ತಾಜ್ ನ ಟ್ರಿನಿಟಿ ಸಭಾಂಗಣದಲ್ಲಿ ಒಂದು ದಿನದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ, ಉದ್ಘಾಟನಾ ಭಾಷಣ ಮಾಡಲಿದ್ದಾರೆ. ಎಂ.ಎಸ್ ಸ್ವಾಮಿನಾಥನ್ ಸಂಶೋಧನಾ ಸಂಸ್ಥೆಯ ಅಧ್ಯಕ್ಷೆ ಡಾ.ಸೌಮ್ಯಾ ಸ್ವಾಮಿನಾಥನ್ ಪ್ರಧಾನ ಭಾಷಣ ಮಾಡಲಿದ್ದು, ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸರಕಾರಿ ಖಾತರಿ ಯೋಜನೆಗಳ ಕಾರ್ಯನೀತಿ ಸನ್ನಿವೇಶವನ್ನು ವಿವರಿಸಲಿದ್ದಾರೆ.

ಬೆಂಗಳೂರಿನಲ್ಲಿರುವ ರಾಜ್ಯದ ವಿತ್ತೀಯ ಕಾರ್ಯನೀತಿ ಸಂಸ್ಥೆ (ಎಫ್.ಪಿ.ಐ)ಯು ಆರ್ಥಿಕ ಇಲಾಖೆಯ ಅಧೀನದಲ್ಲಿರುವ ನಿರ್ದೇಶನಾಲಯವಾಗಿದ್ದು, ಸರಕಾರಿ ಖಾತರಿ ಯೋಜನೆಗಳ ಸಾಮಾಜಿಕ ಮತ್ತು ಆರ್ಥಿಕ ಪರಿಣಾಮಾತ್ಮಕ ಮೌಲ್ಯಮಾಪನ ನಡೆಸಲು ಈ ಐದು ಸಂಶೋಧನಾ ಸಂಸ್ಥೆಗಳ ಜೊತೆ ಸಹಭಾಗಿತ್ವವನ್ನು ಹೊಂದಿರುತ್ತದೆ.

ಲಂಡನ್ ನ ಕಿಂಗ್ಸ್ ಕಾಲೇಜು, ಮುಂಬೈನ ಎಕ್ಸ್.ಕೆ.ಡಿ.ಆರ್. ಫೋರಂ ಮತ್ತು ಅಝೀಂ ಪ್ರೇಮ್ ಜಿ ವಿಶ್ವವಿದ್ಯಾನಿಲಯ, ಲೋಕ್ ನೀತಿ-ಸಿಎಸ್ ಡಿಎಸ್ ಮತ್ತು ಇಂಡಸ್ ಆಕ್ಷನ್ ಹಾಗೂ ಜಸ್ಟ್ ಜಾಬ್ಸ್ ನೆಟ್ ವರ್ಕ್ಸ್ ಸಂಶೋಧನಾ ಸಂಸ್ಥೆಗಳು ಖಾತರಿ(ಗ್ಯಾರಂಟಿ) ಯೋಜನೆಗಳ ಕುರಿತು ಅಧ್ಯಯನವನ್ನು ಕೈಗೊಂಡಿರುತ್ತವೆ.

ವಿವಿಧ ತಾಂತ್ರಿಕ ಅಧಿವೇಶನಗಳು:

ಈ ಕಾರ್ಯಕ್ರಮವು ವಿವಿಧ ತಾಂತ್ರಿಕ ಅಧಿವೇಶನಗಳನ್ನು ಒಳಗೊಂಡಿರುತ್ತದೆ. ಸರ್ಕಾರದ ಖಾತರಿ ಯೋಜನೆಗಳ ಅನು಼ಷ್ಠಾನದಲ್ಲಿ ಇ-ಆಡಳಿತದ ಪಾತ್ರ, ಸರಕಾರದ ಐದು ಖಾತರಿ ಯೋಜನೆಗಳ ಪರಿಣಾಮಾತ್ಮಕ ಮೌಲ್ಯಮಾಪನ ಶಕ್ತಿ ಯೋಜನೆಯ ಪರಿಣಾಮಾತ್ಮಕ ಮೌಲ್ಯಮಾಪನ ಮತ್ತು ತಜ್ಞರ ಚರ್ಚೆ ನಡೆಯಲಿದೆ. ಪ್ರತೀ ಅಧಿವೇಶನದಲ್ಲಿ ಸರಕಾರದ ಉನ್ನತ ಅಧಿಕಾರಿಗಳು ಹಾಗೂ ಪ್ರಮುಖ ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗಳ ತಜ್ಞರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಸಮಾರೋಪ ಭಾಷಣವನ್ನು ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ದಿ ಆಯುಕ್ತೆ ಉಮಾ ಮಹಾದೇವನ್ ನೆರವೇರಿಸಲಿದ್ದು, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಕಾರ್ಯಕ್ರಮವು ಐದು ಸಂಶೋಧನಾ ಸಂಸ್ಥೆಗಳು ನಡೆಸಿದ ಸರಕಾರಿ ಖಾತರಿ ಯೋಜನೆಗಳ ಸಂಶೋಧನಾ ಅಧ್ಯಯನಗಳ ಕುರಿತು ಮೌಲ್ಯಯುತ ಮಾಹಿತಿಯನ್ನು ಒದಗಿಸುವುದರೊಂದಿಗೆ ಸರಕಾರಿ ಖಾತರಿ ಯೋಜನೆಗಳ ಕಾರ್ಯನೀತಿ ವಿನ್ಯಾಸ, ಅನುಷ್ಠಾನ ಹಾಗೂ ನಿರೀಕ್ಷಿತ ಪರಿಣಾಮಗಳ ಅವಲೋಕನವನ್ನು ಸಹ ಒದಗಿಸಲಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X