ಕೇಂದ್ರ ಸರಕಾರ ರಾಜ್ಯ ಬರಬೇಕಾದ ಅನಿಲ ಪೂರೈಕೆ ಮಾಡಿಲ್ಲ : ಡಾ.ಜಿ.ಪರಮೇಶ್ವರ್

ಬೆಂಗಳೂರು : ಕೇಂದ್ರ ಸರಕಾರ ಕರ್ನಾಟಕಕ್ಕೆ ಬರಬೇಕಾದ ಕನಿಷ್ಠ ಅನಿಲ(ಗ್ಯಾಸ್) ಪೂರೈಕೆ ಮಾಡಿಲ್ಲದ ಕಾರಣದಿಂದಾಗಿ ಸಮಸ್ಯೆ ಉಲ್ಬಣಗೊಂಡಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕರ್ನಾಟಕಕ್ಕೆ ಅಗತ್ಯ ಇರುವ ಗ್ಯಾಸ್ ಪ್ರಮಾಣ ಕುರಿತು ಕೇಂದ್ರ ಸರಕಾರಕ್ಕೆ ಬೇಡಿಕೆಯನ್ನು ಸಲ್ಲಿಸಲಾಗಿದೆ. ಆದರೆ, ಕೇಂದ್ರ ಸರಕಾರ ರಾಜ್ಯ ಬರಬೇಕಾದ ಅನಿಲ ಪೂರೈಕೆ ಮಾಡಿಲ್ಲ. ಕನಿಷ್ಠ ಪೂರೈಕೆಯನ್ನಾದರೂ ಮಾಡಬೇಕಲ್ಲವೇ ಎಂದು ಕೇಳಿದರು.
ನಮಗೆ ಅಡುಗೆ, ವಾಣಿಜ್ಯ ಅನಿಲ, ಪೆಟ್ರೋಲ್, ಡೀಸೆಲ್ ಬೇಕು. ಕೇಂದ್ರ ಸರಕಾರ ಎಲ್ಲ ರಾಜ್ಯಗಳಿಗೆ ಕೊಟ್ಟಂತೆ ನಮಗೂ ಸಮರ್ಪಕವಾಗಿ ಕೊಡಬೇಕು ಎಂದು ಒತ್ತಾಯಿಸಿದ ಅವರು, ಕಾಳಸಂತೆಯಲ್ಲಿ ಅಡುಗೆ, ವಾಣಿಜ್ಯ ಅನಿಲ ಮಾರಾಟ ಮಾಡುವವರ ಮೇಲೆ ನಿಗಾವಹಿಸಲಾಗಿದೆ. ಈಗಾಗಲೇ ಕೆಲವೆಡೆ ಪ್ರಕರಣ ದಾಖಲಾಗಿದೆ ಎಂದು ಹೇಳಿದರು.
ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಜನಸಂಖ್ಯೆ ಆಧಾರದ ಮೇಲೆ ಬೇಡ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಸರಿ ಇದೆ. ಉತ್ತರ ಭಾರದಲ್ಲಿ ಜನಸಂಖ್ಯೆ ಜಾಸ್ತಿ ಇದೆ ಎಂಬ ಕಾರಣಕ್ಕೆ ಹೇಳಿದ್ದಾರೆ ಎಂದು ಉಲ್ಲೇಖಿಸಿದರು.




