Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರಿನಲ್ಲಿರುವ ‘ಪಿ.ಜಿ.ಗಳಿಗೆ’...

ಬೆಂಗಳೂರಿನಲ್ಲಿರುವ ‘ಪಿ.ಜಿ.ಗಳಿಗೆ’ ಮಾರ್ಗಸೂಚಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ9 Aug 2024 7:54 PM IST
share
ಬೆಂಗಳೂರಿನಲ್ಲಿರುವ ‘ಪಿ.ಜಿ.ಗಳಿಗೆ’ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿರುವ ‘ಪೇಯಿಂಗ್ ಗೆಸ್ಟ್’(ಪಿಜಿ)ಗಳನ್ನು ತೆರೆಯಲು ಹಾಗೂ ನಿರ್ವಹಣೆ ಮಾಡುವ ಕುರಿತಾಗಿ ಬಿಬಿಎಂಪಿಯು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಪಿಜಿಗಳಲ್ಲಿನ ಎಲ್ಲ ಪ್ರವೇಶ, ನಿರ್ಗಮನ ದ್ವಾರ, ಮತ್ತು ಆವರಣದ ಸುತ್ತಮುತ್ತಲಿನ ಘಟನಾವಳಿಗಳನ್ನು ಚಿತ್ರೀಕರಿಸಲು ಸಿ.ಸಿ. ಟಿ.ವಿ. ಕ್ಯಾಮೆರಾಗಳನ್ನು ಅಳವಡಿಸಿರಬೇಕು ಎಂದು ತಿಳಿಸಿದೆ.

ಪ್ರತಿಯೊಂದು ಸಿ.ಸಿ ಟಿ.ವಿ. ಕ್ಯಾಮರಾದ ವೀಡಿಯೋ ಮತ್ತು ಫೂಟೇಜ್‍ಗಳನ್ನು 90 ದಿನಗಳ ವರೆಗೆ ಹಾರ್ಡ್ ವೇರ್ ಮತ್ತು ಸಾಫ್ಟ್‌ ವೇರ್ ಬ್ಯಾಕಪ್ ಸ್ಟೋರೆಜ್‍ನ್ನು ಸಂರಕ್ಷಿಸಬೇಕು. ವಸತಿ ಸಂಬಂಧಿತ ಕಟ್ಟಡ ನಿಯಮಗಳ ಪ್ರಕಾರ, ಪಿಜಿಗಳಲ್ಲಿ ಪ್ರತಿಯೊಬ್ಬ ನಿವಾಸಿಗೆ ವಾಸಕ್ಕೆ ತಲಾ 70 ಚದರ ಅಡಿಗಳ ಕನಿಷ್ಠ ಜಾಗವಿರಬೇಕು. ಕಟ್ಟಡದಲ್ಲಿ ಲಭ್ಯವಿರುವ ಸೌಕರ್ಯಕ್ಕನುಗುಣವಾಗಿ ನಿರ್ಧಿಷ್ಟ ಸಂಖ್ಯೆಯ ನಿವಾಸಿಗಳ ವಾಸಕ್ಕೆ ಮಾತ್ರ ಪರವಾನಗಿಯನ್ನು ನೀಡಲಾಗುತ್ತದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಿದೆ.

ಪೇಯಿಂಗ್ ಗೆಸ್ಟ್‌ಗಳಲ್ಲಿ ವಾಸಿಸುವ ನಿವಾಸಿಗಳಿಗೆ ಸ್ವಚ್ಛ ಹಾಗೂ ನೈರ್ಮಲ್ಯತೆ ಹೊಂದಿರುವ ಸ್ನಾನಗೃಹಗಳು ಮತ್ತು ಶೌಚಾಲಯಗಳ ಸೇವೆಯನ್ನು ಒದಗಿಸಬೇಕು. ಪೇಯಿಂಗ್ ಗೆಸ್ಟ್‌ಗಳಲ್ಲಿ ಕಡ್ಡಾಯವಾಗಿ ಶುದ್ಧ ಕುಡಿಯುವ ನೀರಿನ ಸೌಲಭ್ಯವಿರಬೇಕು. ಪ್ರತಿಯೊಬ್ಬ ನಿವಾಸಿಗೆ 135ಎಲ್‍ಪಿಸಿಡಿ ನೀರಿನ ಲಭ್ಯತೆ ಇರುವುದನ್ನು ಮಾಲಕರು, ಉದ್ದಿಮೆದಾರರು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಲಾಗಿದೆ.

ಪಿಜಿಗಳಲ್ಲಿ ಉದ್ದಿಮೆದಾರರು ತಮ್ಮದೇ ಆದ ಅಡುಗೆಮನೆ ಹೊಂದಿದ್ದಲ್ಲಿ, ಪಾಲಿಕೆಯಿಂದ ಉದ್ದಿಮೆ ಪರವಾನಗಿ ನೀಡಿದ 3 ತಿಂಗಳ ಅವಧಿಯೊಳಗೆ ಕಡ್ಡಾಯವಾಗಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ(ಎಫ್‍ಎಸ್‍ಎಸ್‍ಎಐ) ಲೈಸನ್ಸ್‌ ಅನ್ನು ಪಡೆದುಕೊಳ್ಳಬೇಕು. ಉದ್ದಿಮೆದಾರರು, ಮಾಲೀಕರು ಪೇಯಿಂಗ್ ಗೆಸ್ಟ್‌ ಗಳಲ್ಲಿ ವಾಸಿಸುವ ನಿವಾಸಿಗಳ ಸುರಕ್ಷತಾ ದೃಷ್ಟಿಯಿಂದ ಕನಿಷ್ಟ ಪಕ್ಷ ಒಬ್ಬ ಸಿಬ್ಬಂದಿಯನ್ನಾದರೂ ಕಡ್ಡಾಯವಾಗಿ 24/7 ಸೇವೆಯಡಿಯಲ್ಲಿ ನಿಯೋಜಿಸಿರಬೇಕು.

ಪೇಯಿಂಗ್ ಗೆಸ್ಟ್ ಉದ್ದಿಮೆಗಳಿಗೆ ಪಾಲಿಕೆಯಿಂದ ವಾಣಿಜ್ಯ ಪರವಾನಿಗೆ ಪತ್ರ ವಿತರಿಸುವ ಮುನ್ನ ಉದ್ದೇಶಿತ ಕಟ್ಟಡದಲ್ಲಿ ಮಾಲೀಕರು ಅಗ್ನಿ ಸುರಕ್ಷತಾ ಕ್ರಮಗಳನ್ನು ಆಳವಡಿಸಿರುವ ಬಗ್ಗೆ ಸಕ್ಷಮ ಪ್ರಾಧಿಕಾರದಿಂದ ಅಧಿಕೃತ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬೇಕು. ತುರ್ತು ಸೇವೆಗಳಿಗೆ ಸಂಬಂಧಿಸಿದಂತೆ, ಕಟ್ಟಡದಲ್ಲಿ ಬಿಬಿಎಂಪಿ ಸಹಾಯವಾಣಿ ಸಂಖ್ಯೆ-1533 ಮತ್ತು ಪೊಲಿಸ್ ಇಲಾಖೆಯ ಸಹಾಯವಾಣಿ 101 ಅನ್ನು ಪ್ರದರ್ಶಿಸುವ ಫಲಕವನ್ನು ಅಳವಡಿಸಿರಬೇಕು.

ಪೇಯಿಂಗ್ ಗೆಸ್ಟ್‌ ಗಳಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳನ್ನು ಆಳವಡಿಸಿರಬೇಕು. ಪೇಯಿಂಗ್ ಗೆಸ್ಟ್‌ ನ ಮಾಲೀಕರು ಘನತ್ಯಾಜ್ಯವನ್ನು ಸಮರ್ಪಕವಾಗಿ ವಿಂಗಡಿಸಿ, ವಿಲೇವಾರಿಗೊಳಸಲು ಕ್ರಮವಹಿಸಬೇಕು. ಆರೋಗ್ಯ ವಿಭಾಗದ ಅಧಿಕಾರಿಗಳು ತಮ್ಮ-ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಮಾರ್ಗಸೂಚಿಗಳ ಪಾಲನೆಯಾಗುತ್ತಿರುವ ಕುರಿತು ಪ್ರತಿ ಆರು ತಿಂಗಳಿಗೊಮ್ಮೆ ಖಚಿತಪಡಿಸಿಕೊಳ್ಳಬೇಕು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ-2020ರ ಕಾಯ್ದೆಯಡಿ, ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಪ್ರಾರಂಭಿಸಲು ಉದ್ದೇಶಿಸಿರುವ ಪಿಜಿಗಳಿಗೆ ‘ಪರವಾನಿಗೆ ಮಂಜೂರಾತಿ, ನವೀಕರಣ' ಹಾಗೂ ಈಗಾಗಲೇ ಪರವಾನಿಗೆ ಪಡೆದು ಅಸ್ತಿತ್ವದಲ್ಲಿರುವ ಪಿಜಿಗಳಿಗೆ ಅನ್ವಯವಾಗಿಲಿದೆ. ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡುವ ಉದ್ದಿಮೆದಾರರ ವಿರುದ್ಧ ಕಾಯ್ದೆಯ ಸೆಕ್ಷನ್ 307, 308ರಂತೆ ಅಗತ್ಯ ಕ್ರಮ ಜರುಗಿಸಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶಿಸಿದ್ದಾರೆ.

Tags

GuidelinesBangalore
share
ವಾರ್ತಾಭಾರತಿ
ವಾರ್ತಾಭಾರತಿ
Next Story
X