Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಿದ್ದರಾಮಯ್ಯ ಎಷ್ಟು ಬಾರಿ ಜಿಎಸ್‍ಟಿ...

ಸಿದ್ದರಾಮಯ್ಯ ಎಷ್ಟು ಬಾರಿ ಜಿಎಸ್‍ಟಿ ಕೌನ್ಸಿಲಿಂಗ್ ಸಭೆಗೆ ಹೋಗಿದ್ದಾರೆ : ಎಚ್.ವಿಶ್ವನಾಥ್

ವಾರ್ತಾಭಾರತಿವಾರ್ತಾಭಾರತಿ30 Jan 2026 6:56 PM IST
share
ಸಿದ್ದರಾಮಯ್ಯ ಎಷ್ಟು ಬಾರಿ ಜಿಎಸ್‍ಟಿ ಕೌನ್ಸಿಲಿಂಗ್ ಸಭೆಗೆ ಹೋಗಿದ್ದಾರೆ : ಎಚ್.ವಿಶ್ವನಾಥ್

ಬೆಂಗಳೂರು : ಕೇಂದ್ರ ಸರಕಾರದಿಂದ ಜಿಎಸ್‍ಟಿಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸದನದಲ್ಲಿ ಕಾಂಗ್ರೆಸ್‍ನವರು ಬೊಬ್ಬೆ ಹೊಡೆದುಕೊಂಡರೆ ನ್ಯಾಯ ಸಿಗುತ್ತದೆಯೇ?, ಹಣಕಾಸು ಖಾತೆಯನ್ನು ಹೊಂದಿರುವ ಸಿಎಂ ಸಿದ್ದರಾಮಯ್ಯ ಎಷ್ಟು ಬಾರಿ ದಿಲ್ಲಿಯ ಜಿಎಸ್‍ಟಿ ಕೌನ್ಸಿಲಿಂಗ್ ಸಭೆಗೆ ಹೋಗಿದ್ದಾರೆ ಎಂದು ಬಿಜೆಪಿ ಸದಸ್ಯ ಎಚ್.ವಿಶ್ವನಾಥ್ ತರಾಟೆಗೆ ತೆಗೆದುಕೊಂಡ ಪ್ರಸಂಗ ಮೇಲ್ಮನೆಯಲ್ಲಿ ನಡೆಯಿತು.

ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜಾ ಮಾತನಾಡುತ್ತಾ, ಜಿಎಸ್‍ಟಿ ವಿಷಯದಲ್ಲಿ ಕರ್ನಾಟಕದ ಪಾಲು ಬಂದಿಲ್ಲ. ಕಾಂಗ್ರೆಸ್ ಜಾರಿಗೆ ತಂದ ಯೋಜನೆಗಳ ಹೆಸರು ಬದಲಿಸುವುದೇ ಮೋದಿಯವರ ಸಾಧನೆ. ಜಿಎಸ್‍ಟಿ, ತೆರಿಗೆ ಪಾಲು ಸೇರಿದಂತೆ ಎಲ್ಲದರಲ್ಲೂ ಪ್ರಧಾನಿ ಮೋದಿ ಸರಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.

ಈ ವೇಳೆ ಮಧ್ಯಪ್ರವೇಶಿಸಿದ ಎಚ್.ವಿಶ್ವನಾಥ್, ಕೇಂದ್ರದಿಂದ ಜಿಎಸ್‍ಟಿ ಅನ್ಯಾಯ ಆಗಿದೆ ಎಂದು ಇಲ್ಲಿ ಬೊಬ್ಬೆ ಹೊಡೆದುಕೊಂಡರೆ ನ್ಯಾಯ ಸಿಗುತ್ತದೆಯೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಎಷ್ಟು ಬಾರಿ ಜಿಎಸ್‍ಟಿ ಕೌನ್ಸಿಲಿಂಗ್ ಸಭೆಗೆ ಹೋಗಿದ್ದಾರೆ ಎಂದು ಪ್ರಶ್ನೆ ಮಾಡಿದರು.

ಎಚ್.ವಿಶ್ವನಾಥ್ ಅವರ ಈ ಹೇಳಿಕೆಗೆ ಆಡಳಿತ ಪಕ್ಷದ ಸದಸ್ಯರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಆಗ ಪ್ರತಿಪಕ್ಷದ ಸದಸ್ಯರೂ ಕೂಡ ಪ್ರತಿದಾಳಿ ನಡೆಸಿದರು. ನಾನು ಯಾವುದೇ ಸರಕಾರವನ್ನು ಗುರಿಯಾಗಿಟ್ಟುಕೊಂಡು ಟೀಕೆ ಮಾಡಿಲ್ಲ. ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಎಸ್‍ಟಿ ಕೌನ್ಸಿಲಿಂಗ್ ಸಭೆಗೆ ಹೋಗಿ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಪ್ರಸ್ತಾಪಿಸಬೇಕಿತ್ತು. ಸಭೆಗೆ ಹೋಗದೇ ಇಲ್ಲಿ ನೀವು ಮಾತನಾಡಿದರೆ ಏನು ಪ್ರಯೋಜನ? ಎಂದು ಎಚ್.ವಿಶ್ವನಾಥ್ ಪ್ರಶ್ನಿಸಿದರು.

ಜಿಎಸ್‍ಟಿ ಸಭೆಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಬಂದು ತಮ್ಮ ರಾಜ್ಯದ ಬೇಡಿಕೆಯನ್ನು ಸಲ್ಲಿಸುತ್ತಾರೆ. ಅಲ್ಲಿ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಬೇಕು. ಆಗ ಇದನ್ನು ಪರಿಶೀಲಿಸಿ ರಾಜ್ಯಗಳಿಗೆ ನ್ಯಾಯ ಒದಗಿಸುತ್ತಾರೆ. ಸುಮ್ಮನೆ ಇಲ್ಲಿ ಮಾತನಾಡಿದರೆ ಯಾವುದೇ ಪ್ರಯೋಜನ ಆಗುವುದಿಲ್ಲ ಎಂದು ಎಚ್.ವಿಶ್ವನಾಥ್ ಹೇಳಿದರು.

ಈ ಹಂತದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ದಿಲ್ಲಿಯಲ್ಲಿ ನಡೆಯುವ ಜಿಎಸ್‍ಟಿ ಕೌನ್ಸಿಲಿಂಗ್ ಸಭೆಗೆ ಮುಖ್ಯಮಂತ್ರಿಗಳು ಹಾಜರಾಗಲೇಬೇಕೆಂಬ ಕಡ್ಡಾಯವಿಲ್ಲ. ರಾಜ್ಯದ ಪರವಾಗಿ ಯಾರನ್ನಾದರೂ ಕಳುಹಿಸಬಹುದು. ಕಂದಾಯ ಸಚಿವ ಕೃಷ್ಣಭೈರೇಗೌಡರು ರಾಜ್ಯ ಸರಕಾರದ ಪರವಾಗಿ ಪ್ರತಿನಿಧಿಸಿದ್ದಾರೆ. ಕರ್ನಾಟಕಕ್ಕೆ ಯಾವ ರೀತಿ ಅನ್ಯಾಯವಾಗಿದೆ ಎಂಬುದನ್ನು ಹೇಳಿದ್ದಾರೆ. ಆದರೂ ಕೇಂದ್ರದಿಂದ ನಮಗೆ ಯಾವುದೇ ನ್ಯಾಯ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅಂದು ಬಸವರಾಜ ಬೊಮ್ಮಾಯಿ ಅವರನ್ನು ಜಿಎಸ್‍ಟಿ ಕೌನ್ಸಿಲಿಂಗ್ ಸಭೆಗೆ ಕಳುಹಿಸಿಕೊಟ್ಟಿದ್ದರು. ಇದರಲ್ಲಿ ಯಾವುದೇ ಪ್ರಮಾದವಿಲ್ಲ ಎಂದು ಪ್ರಿಯಾಂಕ್ ಖರ್ಗೆ ಸರಕಾರದ ನಡೆಯನ್ನು ಸಮರ್ಥಿಸಿಕೊಂಡರು.

Tags

H. Vishwanath
share
ವಾರ್ತಾಭಾರತಿ
ವಾರ್ತಾಭಾರತಿ
Next Story
X