Hassan | ಯೂರಿಯಾಕ್ಕೆ ಆಗ್ರಹಿಸಿ ರೈತ ಸಂಘದ ಧರಣಿ

ಹಾಸನ : ಜಿಲ್ಲೆಯಲ್ಲಿ ಯೂರಿಯಾ ಹಾಗೂ ರಾಸಾಯನಿಕ ಗೊಬ್ಬರದ ಕೊರತೆ, ಬಿತ್ತನೆ ಬೀಜಗಳ ಅಭಾವ, ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗದಿರುವುದು ಸೇರಿದಂತೆ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಧರಣಿ ನಡೆಸಿ ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಮನವಿ ರವಾನಿಸಲಾಯಿತು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಆರಂಭವಾದ ಧರಣಿ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು. ಧರಣಿಯಲ್ಲಿ ಪಾಲ್ಗೊಂಡಿದ್ದ ರೈತರು ಸರಕಾರದ ವಿರುದ್ಧಘೋಷಣೆಗಳನ್ನು ಕೂಗಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. “ರೈತ ಸಾಲಗಾರನಲ್ಲ, ಸರಕಾರವೇ ಬಾಕಿದಾರ" ಎಂಬ ಘೋಷಣೆ ಧರಣಿಯ ಕೇಂದ್ರಬಿಂದುವಾಗಿತ್ತು. ರೈತ ಸಂಘದ ಜಿಲ್ಲಾಧ್ಯಕ್ಷ ಬಾಬು ಮಾತನಾಡಿದರು. ಧರಣಿಯಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಆನೆಕೆರೆ ರವಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಂ, ಜಯಣ್ಣ ಶಿವರಾಮೇಗೌಡ, ಕಮಲಮ್ಮ ಪವಿತ್ರ, ಕಾಳಕ್ಕ ಇತರರು ಉಪಸ್ಥಿತರಿದ್ದರು
Next Story




