Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪ್ರಾಣಿಗಳಿಗೂ ಹಿಂಸೆ ಇಲ್ಲದೆ ಬದುಕುವ...

ಪ್ರಾಣಿಗಳಿಗೂ ಹಿಂಸೆ ಇಲ್ಲದೆ ಬದುಕುವ ಹಕ್ಕಿದೆ; ಮಾಲೀಕನ ದೌರ್ಜನ್ಯಕ್ಕೊಳಗಾಗಿದ್ದ ಸಾಕು ನಾಯಿಗಳನ್ನು ಪೆಟಾ ವಶಕ್ಕೆ ನೀಡಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ25 Jun 2026 12:26 AM IST
share
ಪ್ರಾಣಿಗಳಿಗೂ ಹಿಂಸೆ ಇಲ್ಲದೆ ಬದುಕುವ ಹಕ್ಕಿದೆ; ಮಾಲೀಕನ ದೌರ್ಜನ್ಯಕ್ಕೊಳಗಾಗಿದ್ದ ಸಾಕು ನಾಯಿಗಳನ್ನು ಪೆಟಾ ವಶಕ್ಕೆ ನೀಡಿದ ಹೈಕೋರ್ಟ್


ಬೆಂಗಳೂರು : ಪ್ರಾಣಿಗಳಿಗೆ ಮಾತು ಬಾರದಿದ್ದರೂ ನೋವು ಅನುಭವಿಸುತ್ತವೆ, ಅವುಗಳಾದರೂ ಎಷ್ಟು ದಿನ ಹಿಂಸೆ ಅನುಭವಿಸಲು ಸಾಧ್ಯ? ಪ್ರಾಣಿಗಳಿಗೂ ಹಿಂಸೆಯಿಲ್ಲದೇ ಬದುಕುವ ಹಕ್ಕಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್‌, ಮಾಲೀಕನಿಂದ ಹಿಂಸೆ ಅನುಭವಿಸಿದ್ದ 9 ನಾಯಿಗಳನ್ನು ಪ್ರಾಣಿ ದಯಾ ಸಂಘಟನೆಯಾದ ಪೆಟಾ ವಶದಲ್ಲಿರಿಸಲು ಆದೇಶಿಸಿದೆ.

ನಾಯಿಗಳನ್ನು ಮಾಲೀಕನಿಗೆ ನೀಡುವಂತೆ ನಗರದ 31ನೇ ಎಸಿಜೆಎಂ ನ್ಯಾಯಾಲಯ ಏಪ್ರಿಲ್ 25ರಂದು ನೀಡಿದ್ದ ಆದೇಶ ರದ್ದು ಕೋರಿ ಪೀಪಲ್ಸ್‌ ಫಾರ್‌ ದಿ ಟ್ರೀಟ್‌ಮೆಂಟ್‌ ಆಫ್‌ ಅನಿಮಲ್ಸ್‌ (ಪೆಟಾ) ಸಲ್ಲಿಸಿದ್ದ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿದೆ.

ವಿಡಿಯೊಗಳಲ್ಲಿ ನಾಯಿಗಳಿಗೆ ಕ್ರೂರವಾಗಿ ಹೊಡೆಯುವ ದೃಶ್ಯಗಳಿವೆ. ಕ್ರೌರ್ಯ ಮೆರೆದವನ ವಶಕ್ಕೆ ನಾಯಿಗಳನ್ನು ನೀಡಿರುವ ಮ್ಯಾಜಿಸ್ಟೇಟ್‌ ಆದೇಶ ಸರಿಯಲ್ಲ. ಪ್ರಾಣಿಗಳಿಗೂ ಹಿಂಸೆಯಿಂದ ರಕ್ಷಣೆ ಪಡೆದುಕೊಳ್ಳುವ ಹಕ್ಕಿದೆ. ನ್ಯಾಯಾಲಯದ ಕದ ತಟ್ಟಲಾಗದವರಿಗೂ ನ್ಯಾಯದಾನ ಸಿಗಬೇಕು. ಮೂಕ ಪ್ರಾಣಿಗಳೆಂದು ನಾವು ಅವುಗಳ ಹಕ್ಕುಗಳನ್ನು ಕಸಿದುಕೊಳ್ಳಲಾಗದು ಎಂದ ನ್ಯಾಯಪೀಠ, ನಾಯಿಗಳ ಮೇಲೆ ಅವುಗಳ ಮಾಲೀಕ ದೌರ್ಜನ್ಯವೆಸಗಿರುವುದು ದೃಢಪಟ್ಟಿದ್ದರೂ ಅಂಥ ಮಾಲೀಕನಿಗೆ ನಾಯಿಗಳನ್ನು ನೀಡುವಂತೆ ಮ್ಯಾಜಿಸ್ಟ್ರೇಟ್ ಹೇಗೆ ಆದೇಶ ನೀಡಿದರು ಎಂದು ನ್ಯಾಯಪೀಠ ಆಘಾತ ವ್ಯಕ್ತಪಡಿಸಿತು.

ಪೆಟಾ ಸಂಸ್ಥೆಯ ಪರ ವಕೀಲರು, ಮಾಲೀಕರಿಂದ ದೌರ್ಜನ್ಯ ಅನುಭವಿಸುತ್ತಿದ್ದ ನಾಯಿಗಳನ್ನು ರಕ್ಷಿಸಲಾಗಿದೆ. ಆದರೆ, ಮ್ಯಾಜಿಸ್ಟೇಟ್‌ ನ್ಯಾಯಾಲಯ ಅವುಗಳನ್ನು ಮತ್ತೆ ಮಾಲೀಕರಿಗೆ ಹಸ್ತಾಂತರ ಮಾಡಲು ಆದೇಶಿಸಿರುವುದರಿಂದ ನಾಯಿಗಳ ಪ್ರಾಣಕ್ಕೆ ಮತ್ತೆ ಆಪತ್ತು ಎದುರಾಗಿದೆ. ಆದ್ದರಿಂದ, ನಾಯಿಗಳ ರಕ್ಷಿಸುವ ಉದ್ದೇಶದಿಂದ ಅವುಗಳನ್ನು ಪೆಟಾ ಸಂಸ್ಥೆಯ ವಶಕ್ಕೆ ನೀಡಬೇಕು ಎಂದು ಮನವಿ ಮಾಡಿದರು.

ಪ್ರಕರಣವೇನು?

ನಗರದ ನಾಗಸಂದ್ರದ ನಿವಾಸಿ ಕೆ.ಇ. ರಮೇಶ್‌ ಎಂಬುವರ ಬಳಿ ಬೇರೆ ಬೇರೆ ತಳಿಯ 9 ನಾಯಿಗಳಿದ್ದವು. ಆತ ನಾಯಿಗಳ ಮೇಲೆ ಪದೇಪದೆ ವೈರ್‌ ಹಾಗೂ ಪೈಪ್‌ಗಳಿಂದ ಹಲ್ಲೆನಡೆಸುವುದು, ಲೈಂಗಿಕ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಕಂಡು ಬಂದಿತ್ತು. ಆತ ನಾಯಿಗಳಿಗೆ ಹಿಂಸೆ ನೀಡುತ್ತಿರುವ ಕೆಲ ವಿಡಿಯೊಗಳೊಂದಿಗೆ ನೆರೆಹೊರೆಯವರು ಪೆಟಾ ಸಂಸ್ಥೆಗೆ ದೂರು ನೀಡಿದ್ದರು. ಆ ದೂರಿನ ಮೇರೆಗೆ ಪೆಟಾ 9 ನಾಯಿಗಳನ್ನು ರಕ್ಷಿಸಿ ತನ್ನ ಸುಪರ್ದಿಯಲ್ಲಿ ಇಟ್ಟುಕೊಂಡಿತ್ತು.

ಪೆಟಾ ನೀಡಿದ್ದ ದೂರು ಆಧರಿಸಿ ಪೀಣ್ಯ ಠಾಣೆ ಪೊಲೀಸರು ಮಾಲೀಕನ ವಿರುದ್ಧ ಬಿಎನ್‌ಎಸ್‌ ಸೆಕ್ಷನ್‌ 325 ಮತ್ತು 62, ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌11(1) ರಡಿ ಎಫ್‌ಐಆರ್‌ ದಾಖಲಾಗಿತ್ತು. ಆದರೆ, ಮಾಲೀಕ ರಮೇಶ್‌ ನ್ಯಾಯಾಲಯದ ಮೊರೆ ಹೋಗಿದ್ದರು. ಮ್ಯಾಜಿಸ್ಪ್ರೇಟ್‌ ಅವರು ನಾಯಿಗಳನ್ನು ಮಾಲೀಕನ ವಶಕ್ಕೆ ಒಪ್ಪಿಸಲು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಪೆಟಾ ಸಂಸ್ಥೆ ಹೈಕೋರ್ಟ್‌ ಮೊರೆ ಹೋಗಿತ್ತು. ಮೇ 21ರಂದು ವಿಚಾರಣೆ ನಡೆಸಿದ್ದ ರಜಾಕಾಲದ ನ್ಯಾಯಪೀಠ, ಮ್ಯಾಜಿಸ್ಪ್ರೇಟ್‌ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿ ವಿಚಾರಣೆ ಮುಂದೂಡಿತ್ತು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X