Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಚಿನ್ನಕಳ್ಳಸಾಗಣೆ; ಆರೋಪಿ ವಿರುದ್ಧದ...

ಚಿನ್ನಕಳ್ಳಸಾಗಣೆ; ಆರೋಪಿ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ವಾರ್ತಾಭಾರತಿವಾರ್ತಾಭಾರತಿ1 Sept 2026 10:33 PM IST
share
ಚಿನ್ನಕಳ್ಳಸಾಗಣೆ; ಆರೋಪಿ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರು : ಅಕ್ರಮವಾಗಿ ಎರಡು ಕೆ.ಜಿ. ಚಿನ್ನ ಕಳ್ಳಸಾಗಣೆ ಮಾಡುವಾಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದ ಆರೋಪಿಯೊಬ್ಬನ ವಿರುದ್ಧದ ಪ್ರಕರಣ ರದ್ದುಪಡಿಸಲು ನಿರಾಕರಿಸಿರುವ ಹೈಕೋರ್ಟ್, ಇಂಥ ಪ್ರಕರಣಗಳಲ್ಲಿ ಸಂಘಟಿತ ಜಾಲದ ಚಟುವಟಿಕೆ ರಾಷ್ಟ್ರದ ಆರ್ಥಿಕ ಹಿತಾಸಕ್ತಿಯ ಮೇಲೆ ಗಂಭೀರ ಪರಿಣಾಮ ಬೀರುತ್ತವೆ ಎಂದು ತೀವ್ರ ಆತಂಕ ವ್ಯಕ್ತಪಡಿಸಿದೆ.

ಪ್ರಕರಣ ರದ್ದು ಕೋರಿ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರದ ಎನ್. ನಂದೀಶ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಜಾಗೊಳಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ.

ವಿಚಾರಣೆ ವೇಳೆ ಕೇಂದ್ರೀಯ ಕಸ್ಟಮ್ಸ್‌ ಪರ ವಕೀಲ ಮಧು ಎನ್‌. ರಾವ್‌, ಆರೋಪಿತ ಅರ್ಜಿದಾರರು ಷೋಕಾಸ್‌ ನೋಟಿಸ್‌ಗೆ ಉತ್ತರಿಸುವ ಮತ್ತು ಸಕ್ಷಮ ಪ್ರಾಧಿಕಾರದ ಮುಂದೆ ತಮ್ಮ ಪ್ರತಿವಾದವನ್ನು ಮಂಡಿಸುವ ಬದಲಿಗೆ ಹೈಕೋರ್ಟ್ ಮೆಟ್ಟಿಲು ತುಳಿದಿರುವುದು ಸರಿಯಲ್ಲ. ವಿಮಾನದಲ್ಲಿ ಚಿನ್ನ ಅಥವಾ ನಿಷೇಧಿತ ವಸ್ತುಗಳ ಕಳ್ಳಸಾಗಣೆಯ ಜಾಲದ ಕಾರ್ಯ ವೈಖರಿಯ ಬಗ್ಗೆ ಆಳವಾದ ತನಿಖೆಯ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದರು.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಮತ್ತು ನಿಷಿದ್ಧ ವಸ್ತುಗಳ ಕಳ್ಳಸಾಗಣೆ ದಂಧೆ ಸಂಘಟಿತ ರೂಪದಲ್ಲಿ ದೊಡ್ಡ ಜಾಲದ ಮೂಲಕ (ಸಿಂಡಿಕೇಟ್‌) ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುತ್ತಿದೆ. ಅರ್ಜಿದಾರರು ಇಂಥದೊಂದು ಸಿಂಡಿಕೇಟ್‌ ಸರಪಳಿಯ ಮೊದಲ ಕೊಂಡಿಯೋ, ಮಧ್ಯವೋ ಅಥವಾ ದೊಡ್ಡ ಸಿಂಡಿಕೇಟ್‌ನ ಸಣ್ಣ ಕೊಂಡಿಯೋ ಎಂಬುದನ್ನು ತನಿಖೆಯಲ್ಲೇ ನಿಖರವಾಗಿ ಬಹಿರಂಗಪಡಿಸಬೇಕಿದೆ. ತನಿಖೆಯ ಆರಂಭಿಕ ಹಂತದಲ್ಲೇ ಇಂತಹ ಅರ್ಜಿಯನ್ನು ಪುರಸ್ಕರಿಸಿದರೆ ಕಸ್ಟಮ್ಸ್ ಆಡಳಿತದ ಮೇಲೆ ಋಣಾತ್ಮಕ ಪರಿಣಾಮ ಉಂಟಾಗುತ್ತದೆ ಎಂದು ವಿವರಿಸಿದ್ದರು.

ಜಾಲದಲ್ಲಿ ಪರದೆಯ ಹಿಂದೆ ಕಾರ್ಯ ನಿರ್ವಹಿಸುವ ವ್ಯಕ್ತಿಗಳ ಗುರುತು, ಚಿನ್ನದ ಮೂಲ, ಅದನ್ನು ಹೊತ್ತು ತಂದು ವಿಮಾನದಲ್ಲಿ ಬಿಟ್ಟ ಪ್ರಯಾಣಿಕ, ಅದರ ಸ್ಥಳವನ್ನು ತಿಳಿಸಿದ ವ್ಯಕ್ತಿಗಳು, ಅದನ್ನು ಮರಳಿ ಪಡೆದ ಶುಚಿಗೊಳಿಸುವ ಸಿಬ್ಬಂದಿ ಹಾಗೂ ಅಂತಿಮವಾಗಿ ಅದನ್ನು ಸ್ವೀಕರಿಸಬೇಕಾದ ವ್ಯಕ್ತಿಗಳು ಹೀಗೆ ಇದರ ಎಲ್ಲ ಕೊಂಡಿಗಳು ಎಲ್ಲಿವೆ ಎಂಬುದನ್ನು ಕೂಲಂಕಷ ತನಿಖೆಯ ಮುಖಾಂತರ ಪತ್ತೆ ಹಚ್ಚಬೇಕಿದೆ. ಆದ್ದರಿಂದ, ಅರ್ಜಿದಾರನ ವಿರುದ್ಧದ ಪ್ರಕರಣ ರದ್ದುಪಡಿಸಬಾರದು ಎಂದು ಕೋರಿದ್ದರು.

ಕಸ್ಟಮ್ಸ್ ಮನವಿಯನ್ನು ಮಾನ್ಯ ಮಾಡಿರುವ ನ್ಯಾಯಪೀಠ, ಪ್ರಕರಣದ ವಿಚಾರಣೆ ಇನ್ನೂ ಆರಂಭಿಕ ಹಂತದಲ್ಲಿದೆ. ಅರ್ಜಿದಾರರು ಷೋಕಾಸ್‌ ನೋಟಿಸ್‌ಗೆ ಉತ್ತರವಾಗಿ ತಮ್ಮ ಪ್ರತಿವಾದವನ್ನು ಸಮರ್ಥ ಪ್ರಾಧಿಕಾರದ ಮುಂದೆ ಮಂಡಿಸಬಹುದು. ಆಪಾದಿತ ವಹಿವಾಟಿನಲ್ಲಿ ತಮ್ಮ ಯಾವುದೇ ಪಾತ್ರವಿಲ್ಲ ಎಂದು ಸಾಬೀತುಪಡಿಸಲು ಅವರು ಎಲ್ಲ ಅವಕಾಶಗಳನ್ನು ಹೊಂದಿದ್ದಾರೆ. ಅಂತಹ ಪ್ರಕ್ರಿಯೆಯನ್ನು ಕೈಗೊಳ್ಳುವ ಮೊದಲೇ ವಿಚಾರಣೆಯನ್ನು ತಡೆಯುವುದು ಶಾಸನಬದ್ಧ ಪ್ರಕ್ರಿಯೆಯನ್ನು ಅದರ ಪ್ರಾರಂಭದಲ್ಲಿಯೇ ಕತ್ತು ಹಿಸುಕಿದಂತಾಗುತ್ತದೆ. ಇಂತಹ ಗಂಭೀರ ಪ್ರಕರಣಗಳಲ್ಲಿ ಹೈಕೋರ್ಟ್‌ ತನ್ನ ಅಸಾಧಾರಣ ನ್ಯಾಯವ್ಯಾಪ್ತಿಯನ್ನು ಬಳಸಿಕೊಂಡು ವಿಚಾರಣೆ ರದ್ದುಗೊಳಿಸುವುದು ಸರಿಯಲ್ಲ. ಆರೋಪಗಳು ಆಳವಾದ ಪರಿಶೀಲನೆಯ ಅಗತ್ಯವನ್ನು ಒತ್ತಿ ಹೇಳುತ್ತಿರುವ ಕಾರಣ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಆದೇಶಿಸಿದೆ.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X