Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯದಲ್ಲಿ ಎತ್ತುಗಳ ಸಾಕಾಣಿಕೆ...

ರಾಜ್ಯದಲ್ಲಿ ಎತ್ತುಗಳ ಸಾಕಾಣಿಕೆ ಕಡಿಮೆಯಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ : ಎಚ್.ಕೆ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ19 March 2025 10:18 PM IST
share
ರಾಜ್ಯದಲ್ಲಿ ಎತ್ತುಗಳ ಸಾಕಾಣಿಕೆ ಕಡಿಮೆಯಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ : ಎಚ್.ಕೆ.ಪಾಟೀಲ್

ಬೆಂಗಳೂರು : ‘ಗೋ ಶಾಲೆಗಳಿಗೂ ಎತ್ತುಗಳಿಗೂ(ಹೋರಿ) ಯಾವುದೇ ಸಂಬಂಧವಿಲ್ಲ. ರಾಜ್ಯದಲ್ಲಿ ಎತ್ತುಗಳ ಸಾಕಾಣಿಕೆ ಕಡಿಮೆಯಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ’ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಇಂದಿಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಬುಧವಾರ ವಿಧಾನಸಭೆಯಲ್ಲಿ ಜೆಡಿಎಸ್‍ನ ಹಿರಿಯ ಸದಸ್ಯ ಜಿ.ಟಿ.ದೇವೇಗೌಡ ಬಜೆಟ್ ಮೇಲೆ ಚರ್ಚೆಯ ವೇಳೆ, ‘ಎತ್ತುಗಳ ಸಾಕಾಣಿಕೆ ಕಡಿಮೆಯಿದೆ. ಹೀಗಾಗಿ ಕೃಷಿ ಚಟುವಟಿಕೆಗಳಿಗೆ ಯಂತ್ರೋಪಕರಣಗಳ ಅವಲಂಬನೆ ಅನಿವಾರ್ಯ. ಈ ಹಿಂದೆ ಕೃಷಿ ಯಂತ್ರಧಾರೆ ಯೋಜನೆ ಉತ್ತಮವಾಗಿತ್ತು. ಈಗ ಅದು ನಿರ್ಲಕ್ಷಕ್ಕೆ ಒಳಗಾಗಿದೆ’ ಎಂದು ಗಮನ ಸೆಳೆದರು.

ಈ ವೇಳೆ ಮಧ್ಯಪ್ರವೇಶಿಸಿದ ಕಾನೂನು ಸಚಿವ ಎಚ್.ಕೆ.ಪಾಟೀಲ್, ‘ಎತ್ತುಗಳ ಸಾಕಾಣಿಕೆ ಕಡಿಮೆಯಾಗುತ್ತಿರುವುದು ಆತಂಕಕಾರಿ. ಕೃಷಿ ಯಂತ್ರೋಪಕರಣಗಳ ಬಳಕೆ ವಿಚಾರವಾಗಿ ಸದಸ್ಯರ ಹೇಳಿಕೆಯನ್ನು ಒಪ್ಪಿಕೊಳ್ಳುತ್ತೇವೆ. ಆದರೆ ಎತ್ತುಗಳ ಸಾಕಾಣಿಕೆ ಕಡಿಮೆಯಾಗುತ್ತಿರುವ ಬಗ್ಗೆ ಸಲಹೆ ಹಾಗೂ ಮಾರ್ಗದರ್ಶನಗಳನ್ನು ಸಮಾಜ ಬಯಸುತ್ತದೆ ಎಂದು ತಿಳಿಸಿದರು.

ಈ ಹಿಂದೆ ಪ್ರತಿಯೊಂದು ಮನೆಯಲ್ಲಿಯೂ 7ರಿಂದ 8 ಜೋಡೆತ್ತುಗಳಿರುತ್ತಿದ್ದವು. ಇದೀಗ ಒಂದೇ ಒಂದು ಜೋಡಿಯೂ ಎತ್ತುಗಳಿಲ್ಲ. ಅಲ್ಲದೆ, ಸಗಣಿ ಬಳಿಯಬೇಕೆಂದು ಬಹಳಷ್ಟು ಜನರು ಎತ್ತುಗಳನ್ನೇ ಕಟ್ಟುತ್ತಿಲ್ಲ. ಎಲ್ಲರೂ ಯಂತ್ರೋಪಕರಣಗಳನ್ನು ಆಶ್ರಯಿಸಿದ್ದಾರೆ ಎಂದು ಪಾಟೀಲ್ ಹೇಳಿದರು.

ಈ ಹಂತದಲ್ಲಿ ಮಧ್ಯಪ್ರವೇಶಿಸಿದ ವಿಪಕ್ಷದ ಉಪನಾಯಕ ಅರವಿಂದ ಬೆಲ್ಲದ್, ಮುಚ್ಚಿ ಹೋಗಿರುವ ಗೋಶಾಲೆಗಳನ್ನು ಪುನರ್ ಆರಂಭಿಸಿಸಬೇಕು’ ಎಂದು ಆಗ್ರಹಿಸಿದರು. ಇದಕ್ಕೆ ಆಕ್ಷೇಪಿಸಿದ ಎಚ್.ಕೆ. ಪಾಟೀಲ್, ‘ಗೋಶಾಲೆಗಳಿಗೂ, ಎತ್ತುಗಳಿಗೂ ಸಂಬಂಧ ಇಲ್ಲ. ಗದಗನಲ್ಲಿ ಎತ್ತುಗಳಿಗಾಗಿ ಹಾಸ್ಟೆಲ್ ಸ್ಥಾಪಿಸಲಾಗಿದೆ. ಅಲ್ಲಿ ಉಚಿತ ಸೇವೆ ಬೇಕೆಂದು ಹಲವರು ಬಯಸುತ್ತಾರೆ. ಎತ್ತುಗಳ ಸಾಕಾಣಿಕೆ ಕಡಿಮೆಯಾಗಿರುವುದು ಸಮಾಜ ಆಯೋಚಿಸಬೇಕಾದ ವಿಚಾರ’ ಎಂದರು.

ಬಳಿಕ ಮಾತು ಮುಂದುವರಿಸಿದ ಜಿ.ಟಿ.ದೇವೇಗೌಡ, ‘ಈ ಹಿಂದೆ ನೀರು ಎತ್ತಲು ಎತ್ತುಗಳನ್ನು ಬಳಕೆ ಮಾಡಲಾಗುತ್ತಿತ್ತು. ಇದೀಗ ಎಲ್ಲವೂ ಯಂತ್ರೋಪಕರಣಮಯವಾಗಿದೆ. ದನಗಳ ಸಾಕಾಣಿಕೆ ಖರ್ಚು ಹೆಚ್ಚಾಗುತ್ತಿದೆ. ಅವುಗಳ ಮಾರುಕಟ್ಟೆ ಉತ್ತಮವಾಗಿಲ್ಲ, ಸಾವಯವ ಕೃಷಿಗೆ ಸಗಣಿ ಬೇಕು, ಅದೂ ಲಭ್ಯವಾಗುತ್ತಿಲ್ಲ’ ಎಂದು ಹೇಳಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X